Homeಕರ್ನಾಟಕಸರಕಾರದ ನಿರ್ಲಕ್ಷ್ಯದಿಂದ ಇನ್ನೂ ಪಾರಾಗದ ಕಲ್ಯಾಣ ಕರ್ನಾಟಕ

ಸರಕಾರದ ನಿರ್ಲಕ್ಷ್ಯದಿಂದ ಇನ್ನೂ ಪಾರಾಗದ ಕಲ್ಯಾಣ ಕರ್ನಾಟಕ

- Advertisement -
- Advertisement -

ಕರ್ನಾಟಕ ಸರಕಾರ ಕಳೆದ ಎರಡು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶವನ್ನು ನಿರಂತರವಾಗಿ ನಿರ್ಲಕ್ಷ್ಯ ಮಾಡುತ್ತ ಬಂದಿರುವದರಿಂದ ಈ ಪ್ರದೇಶದಲ್ಲಿ ಬಹುತೇಕ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆಯಲ್ಲದೇ, 2019 ಜುಲೈ ತಿಂಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸದೆ ಮಂಡಳಿಯ ಅಧಿಕಾರವನ್ನು ಸರಕಾರ ಯೋಜನಾ ಇಲಾಖೆಯ ಮೂಲಕ ತನ್ನ ತೆಕ್ಕೆಗೆ ತೆಗೆದುಕೊಂಡಿರುವುದರಿಂದ ಹಾಗೂ ಕೋವಿಡ್-19 ನೆಪದಲ್ಲಿ ಕಳೆದ ವರ್ಷ ಹೊರಡಿಸಿದ ಆದೇಶದ ಪ್ರಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡುವ ಮೂಲಕ ಈ ಭಾಗದ ಪ್ರಾದೇಶಿಕ ಬೆಳವಣಿಗೆಗೆ ಕಡಿವಾಣ ಹಾಕಲಾಗಿದೆ.

ಒಂದು ಕಡೆ ಈ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡುತ್ತ, ಮತ್ತೊಂದು ಕಡೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡುವ ಅನುದಾನ ಮತ್ತು ಬಳಕೆಯಲ್ಲಿ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸಲಾಗಿದೆ. ಇದರಿಂದ ಅನುಚ್ಛೇದ 371ಜೆ ಅನ್ವಯ ಈ ಭಾಗದ ಅಭಿವೃದ್ಧಿಗಾಗಿ ಕಂಡಿದ್ದ ಕನಸು ಭಗ್ನಗೊಳಿಸುವ ಕೆಲಸ ಈಗಿನ ಬಿಜೆಪಿ ಸರಕಾರ ಮಾಡುತ್ತಿದೆ ಎಂದು ಹೇಳಬಹುದಾಗಿದೆ. ಈಗಿರುವ ಬಿಜೆಪಿ ಸರಕಾರ ಬಂದಾಗಿನಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸದೇ ಕಾನೂನಿನ ವಿರುದ್ಧವಾಗಿ ನಡೆದುಕೊಂಡು ಬಂದಿದೆ.

ಎರಡು ವರ್ಷದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸುವಂತೆ ಸರಕಾರಕ್ಕೆ ಪದೇ ಪದೇ ಒತ್ತಾಯ ಮಾಡುತ್ತ ಬಂದಿದ್ದರೂ ಕ್ಯಾರೆ ಎನ್ನದೇ ನಿರ್ಲಕ್ಷ್ಯ ಮಾಡುತ್ತ ಬರಲಾಗಿತ್ತು. ಆದರೆ ಇತ್ತೀಚಿಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿಪಕ್ಷದ ಶಾಸಕರು ನಡೆಸಿದ ಸುದೀರ್ಘ ಚರ್ಚೆ ಮತ್ತು ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರಿಸುತ್ತ, ಮುಂದಿನ 10 ದಿನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸಲಾಗುವದು ಅಲ್ಲದೇ ಖಾಯಂ ಕಾರ್ಯದರ್ಶಿಯನ್ನೂ ನೇಮಿಸಲಾಗುವದೆಂದು ಭರವಸೆ ನೀಡಿದ್ದರು. ಆದರೆ 20 ದಿನಗಳಾದರೂ ಇಲ್ಲಿಯವರೆಗೆ ಮುಖ್ಯಮಂತ್ರಿಗಳು ನೀಡಿದ ಭರವಸೆ ಹುಸಿಯಾಗಿದೆ ಹಾಗೂ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ಅಂತಹ ಯಾವುದೇ ಪ್ರಕ್ರಿಯೆ ನಡೆಯದೇ ಇರುವದು ಅವರ ಬದ್ಧತೆಯ ಬಗ್ಗೆ ಅನುಮಾನ ಪಡುವಂತಾಗಿದೆ.

ರಾಜ್ಯದ ಮುಖ್ಯಮಂತ್ರಿಯೊಬ್ಬರು ಸದನದಲ್ಲಿ ನೀಡಿದ ಭರವಸೆ ಈಡೇರಿಸಲು ಸಾಧ್ಯವಾಗದ ಮಟ್ಟಿಗೆ ಪ್ರಜಾಪ್ರಭುತ್ವ ಕುಸಿದಿರುವದು ಅತ್ಯಂತ ಆತಂಕದ ವಿಷಯ ಮತ್ತು ಮುಖ್ಯಮಂತ್ರಿಯ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ಹೇಳಬಹುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸಲು ಸರಕಾರಕ್ಕೆ ಯಾರ ಅನುಮತಿಯೂ ಬೇಕಿಲ್ಲ, ಈಗಿರುವ ಶಾಸಕರಲ್ಲಿ 8 ಜನ ಶಾಸಕರನ್ನು, 2 ವಿಧಾನ ಪರಿಷತ್ ಸದಸ್ಯರನ್ನು, 1 ಲೋಕಸಭಾ ಸದಸ್ಯರನ್ನು, 1 ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನು, 1 ನಗರಸಭೆ ಅಧ್ಯಕ್ಷರನ್ನು ಹಾಗೂ 5 ಜನ ವಿಷಯ ತಜ್ಞರನ್ನು ನಾಮನಿರ್ದೇಶನ ಮಾಡಬೇಕಿದೆ. ಇದಕ್ಕೆ ಯಾವುದೇ ಹಣಕಾಸಿನ ಅಲಭ್ಯತೆ ಅಥವಾ ಆರ್ಥಿಕ ಹೊರೆಯೇನು ಸರಕಾರಕ್ಕೆ ಬೀಳುವದಿಲ್ಲ. ಪೂರ್ಣ ಪ್ರಮಾಣದ ಆಡಳಿತ ಮಂಡಳಿ ಕಳೆದ ಎರಡು ವರ್ಷದಿಂದ ಇಲ್ಲದೇ ಇರುವದರಿಂದ ಈ ಭಾಗದ ಅಭಿವೃದ್ಧಿಗಾಗಿ ಯಾವುದೇ ಯೋಜನೆ ರೂಪಿಸಲು ಸಾಧ್ಯಾವಾಗುತ್ತಿಲ್ಲ ಹಾಗೂ ಸ್ಥಳೀಯವಾಗಿ ನೆನೆಗುದಿಗೆ ಬಿದ್ದಿರುವ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯಾವಾಗುತ್ತಿಲ್ಲ.

ಅಲ್ಲದೇ ಸೆಪ್ಟೆಂಬರ್ 2021ಕ್ಕೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಈ ಮಂಡಳಿಗೆ ಈಗಾಗಲೇ ಘೋಷಿಸಲಾದ ಅನುದಾನವನ್ನು ಖರ್ಚು ಮಾಡಿದಲ್ಲಿ ಇದೇ ವರ್ಷ 3 ಸಾವಿರ ಕೋಟಿ ರೂ ಹೆಚ್ಚುವರಿ ಅನುದಾನ ನೀಡಲಾಗುವದೆಂದು ಘೋಷಿಸಿದ್ದಾರೆ. ಆಡಳಿತ ಮಂಡಳಿಯೇ ಇಲ್ಲದ ಮೇಲೆ ಅನುದಾನ ಖರ್ಚಾಗುವದು ಹೇಗೆ ಎನ್ನುವದು ಯಕ್ಷ ಪ್ರಶ್ನೆಯಾಗಿದೆ. ಇದು ಗೊತ್ತಿದ್ದೇ ಮುಖ್ಯಮಂತ್ರಿಗಳು ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎನ್ನುವದು ಸುಲಭವಾಗಿ ತಿಳಿಯುತ್ತದೆ. ಪೂರ್ಣ ಪ್ರಮಾಣದ ಆಡಳಿತ ಮಂಡಳಿ ರಚಿಸುವದು ಒಂದು ಆಡಳಿತಾತ್ಮಕ ಆದೇಶ ಮಾತ್ರ, ಅದರಿಂದ ಸರಕಾರಕ್ಕೆ ಯಾವುದೇ ಹಣಕಾಸಿನ ಹೊರೆಯಾಗುವದಿಲ್ಲ ಎನ್ನುವ ಕನಿಷ್ಟ ತಿಳಿವಳಿಕೆ ಸರಕಾರ ನಡೆಸುವ ಜನರಿಗೆ ಇಲ್ಲವಾ? 3 ಸಾವಿರ ಕೋಟಿ ರೂ ಅನುದಾನ ನೀಡುವ ಬಗ್ಗೆ ಪದೇ ಪದೇ ಹೇಳುತ್ತಿರುವ ಮುಖ್ಯಮಂತ್ರಿ ಮಂಡಳಿಗೆ 2021-22ನೇ ಆರ್ಥಿಕ ಸಾಲಿನಲ್ಲಿ ನಿಗದಿಗೊಳಿಸಲಾದ ಅನುದಾನ ಖರ್ಚು ಮಾಡಿದಲ್ಲಿ ನೀಡಲಾಗುವದೆಂದು ಹೇಳುತ್ತಿರುವದು ಹಾಸ್ಯಾಸ್ಪದ ಮತ್ತು ಜನರ ದಾರಿ ತಪ್ಪಿಸುವ ಕೆಲಸ.

ಮುಖ್ಯಮಂತ್ರಿಗಳಿಗೆ ಈ ಭಾಗದ ಬಗ್ಗೆ ಕಾಳಜಿ ಇದ್ದಲ್ಲಿ ಯಾವುದೇ ಪೂರ್ವ ಷರತ್ತು ಇಲ್ಲದೇ ನಿರ್ದಿಷ್ಟ ಯೋಜನೆಗಳಿಗೆ ಅನುದಾನ ನೀಡುವ ಬಗ್ಗೆ ಹೇಳಬಹುದಾಗಿದೆ. ಆದರೆ ಕಾಟಾಚಾರಕ್ಕೆ ಅನುದಾನ ನೀಡುತ್ತೇನೆ ಎಂದು ಸತ್ಯವನ್ನು ಮರೆಮಾಚುವ ಮತ್ತು ತಿರುಚುವ ಹೇಳಿಕೆಯನ್ನು ಮುಖ್ಯಮಂತ್ರಿ ನೀಡುತ್ತಿರುವುದು ದುರಂತ. ಅಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕಳೆದ 7 ವರ್ಷಗಳಿಂದ ನೀಡಲಾದ ಅನುದಾನದ ಬಗ್ಗೆ ಸರಕಾರ ವಿವಿಧ ಸಂದರ್ಭದಲ್ಲಿ ವಿವಿಧ ರೀತಿಯ ಅಂಕಿಅಂಶಗಳು ನೀಡಿ ಗೊಂದಲ ಉಂಟುಮಾಡುತ್ತಿದೆ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ರಾಜ್ಯ ಸರಕಾರ ಬಿಡುಗಡೆಗೊಳಿಸುವ ಆರ್ಥಿಕ ವರದಿಯಲ್ಲಿ ನವೆಂಬರ್ 2021ರವರೆಗೆ 7385.36 ಕೋಟಿ ರೂ ನಿಗದಿಗೊಳಿಸಿ 6079.86 ಕೋಟಿ ರೂ ಖರ್ಚಾಗಿದೆ ಎಂದು ಹೇಳಲಾಗಿದೆ. ಆದರೆ, ಸರಕಾರ ಸದನದಲ್ಲಿ ಉತ್ತರಿಸುವಾಗ ಒಂದು ರೀತಿಯ ಅಂಕಿಅಂಶಗಳನ್ನು ಹೇಳಿದರೆ, ಮಂಡಳಿ ಕಾರ್ಯದರ್ಶಿ ಇನ್ನೊಂದು ರೀತಿಯ ಅಂಕಿ ಅಂಶಗಳನ್ನು ನೀಡುತ್ತಿರುವದು ಅನುಮಾನ ಹುಟ್ಟಿಸುವಂತಿದೆ.

ಅಲ್ಲದೇ ಈ ಭಾಗದಲ್ಲಿ ಸುಮಾರು 48259 ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಸುಮಾರು 15794 ಹುದ್ದೆಗಳು (ಶೇ.32.72ರಷ್ಟು) ಖಾಲಿ ಇವೆ. ಪ್ರೌಢಶಾಲೆಗಳಲ್ಲಿ ಮಂಜೂರಾಗಿರುವ ಹುದ್ದೆಗಳು 12295 ಇದ್ದು, ಅದರಲ್ಲಿ ಸುಮಾರು 2769 ಶಿಕ್ಷಕರ ಹುದ್ದೆಗಳು (ಶೇ.22.52ರಷ್ಟು) ಹುದ್ದೆಗಳು ಖಾಲಿ ಇವೆ. ಅಲ್ಲದೇ ಎಲ್ಲಾ ಇಲಾಖೆಗಳು ಸೇರಿ ಮುಂಬಡ್ತಿಯಿಂದಾಗಿ ಭರ್ತಿಯಾಗಬೇಕಿರುವ 24078 ಹುದ್ದೆಗಳು, ಅದರಲ್ಲಿ ಮುಂಬಡ್ತಿಯಾಗದೇ ಇರುವ ಹುದ್ದೆಗಳು ಸುಮಾರು 7849 (ಶೇ.32.59 ರಷ್ಟು) ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಖಾಲಿ ಹುದ್ದೆಗಳನ್ನು ಇಟ್ಟುಕೊಂಡು ಸರಕಾರ ಈ ಭಾಗವನ್ನು ಕಲ್ಯಾಣ ಮಾಡುತ್ತೇವೆ ಎನ್ನುವದು ಹಾಸ್ಯಾಸ್ಪದವಾಗಿದೆ. ಇವರ ಕಾಳಜಿ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಇನ್ನೂ ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಮಂಜೂರಾಗಿರುವ ಬೋಧಕ ಹುದ್ದೆಗಳ ಸಂಖ್ಯೆ 248, ಅದರಲ್ಲಿ ಖಾಲಿ ಹುದ್ದೆಗಳ ಸಂಖ್ಯೆ 191 (ಶೇ.77ರಷ್ಟು), ಅದೇ ರೀತಿ ಮಂಜೂರಾಗಿರುವ ಬೋಧಕೇತರ ಹುದ್ದೆಗಳು 707, ಖಾಲಿ ಇರುವ ಹುದ್ದೆಗಳ ಸಂಖ್ಯೆ 502 (ಶೇ.71ರಷ್ಟು) ಈ ಭಾಗದ ಉನ್ನತ ಶಿಕ್ಷಣದ ಗುಣಮಟ್ಟದ ಕುರಿತು ಕಥೆ ಹೇಳುತ್ತದೆ. ಇದೇ ಸ್ಥಿತಿ ಇನ್ನುಳಿದ ವಿಶ್ವವಿದ್ಯಾಲಯಗಳಲ್ಲಿ, ಕಾಲೇಜುಗಳಲ್ಲಿ, ಆಸ್ಪತ್ರೆಗಳಲ್ಲಿ, ವಿವಿಧ ಕಚೆರಿಗಳಲ್ಲಿ ಕಾಣಸಿಗುತ್ತದೆ. ಈ ಭಾಗದ ಹಿನ್ನಡೆಗೆ ಭರ್ತಿಯಾಗದ ಹುದ್ದೆಗಳೇ ಮುಖ್ಯ ಕಾರಣವೆಂದು ಹೇಳಬಹುದು.

ಹೆಸರು ಬದಲಿಸಿದರಷ್ಟೇ ಸಾಲದು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸರಕಾರಗಳಿಗೆ ಬದ್ಧತೆ ಇರುವದು ಬಹಳ ಅವಶ್ಯಕವಾಗಿದೆ. ಬದ್ಧತೆ ಇಲ್ಲದ ರಾಜಕಾರಣದಿಂದ ಈ ಭಾಗ ಹಿಂದುಳಿದಿದೆ ಎನ್ನುವದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜನಪ್ರತಿನಿಧಿಗಳೂ ಸಹ ಸರಕಾರಗಳಿಗೆ ಕಾಲಕಾಲಕ್ಕೆ ಎಚ್ಚರಿಸುವದರ ಮೂಲಕ ಜನರ ಆಶೋತ್ತರಗಳನ್ನು ಸಾಕಾರಗೊಳಿಸುವ ಕೆಲಸವಾಗಬೇಕಿದೆ.

ಡಾ. ರಝಾಕ ಉಸ್ತಾದ

ಡಾ. ರಝಾಕ ಉಸ್ತಾದ
ರಾಯಚೂರಿನವರಾದ ಡಾ.ರಝಾಕ ಉಸ್ತಾದ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರು, ಹಿರಿಯ ಮುಖಂಡರು.


ಇದನ್ನೂ ಓದಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ: 1,500 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...