Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...