Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...