Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...