Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...