Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...