Homeಮುಖಪುಟನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

ನೀವು ಯಾವಾಗ ಮುಸ್ಲಿಮರು, ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?: ಧಾರ್ಮಿಕ ಮುಖಂಡ ಪ್ರಚೋದನೆ

- Advertisement -
- Advertisement -

ಹಲವಾರು ಹಿಂದುತ್ವ ಗುಂಪುಗಳು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುವಂತೆ ಕರೆ ನೀಡಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿರುವ ವೀಡಿಯೊವೊಂದರಲ್ಲಿ ಸ್ವಾಮೀಜಿಯೊಬ್ಬರು ಮಾತನಾಡುತ್ತಾ, “ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಹಿಂದೂಗಳು ಸಂಗ್ರಹಿಸಿ” ಎಂದು ಕರೆ ನೀಡಿರುವುದು ದಾಖಲಾಗಿದೆ.

ಮತ್ತೊಂದು ವೀಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ನಾಯಕ ಸೂರಜ್ ಪಾಲ್ ಅಮು ಅವರು, ಸುದರ್ಶನ್ ಟಿವಿ ಸಂಪಾದಕ-ಪ್ರಧಾನ ಸುರೇಶ್ ಚವ್ಹಾಂಕೆ ಅವರ ವಿರುದ್ಧದ ಕ್ರಮಗಳನ್ನು ಖಂಡಿಸಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ಮುಖಂಡರಾದ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೊಬ್ಬರು ಹೀಗೆ ಹೇಳಿದ್ದಾರೆ: “ಬ್ರಿಟಿಷರು ಒಡೆದು ಆಳಿರಿ ಎಂದು ಹೇಳಿದರು, ಕಾಂಗ್ರೆಸ್‌ನವರು ಒಡೆದು ಆಳಿರಿ ಎಂದು ಹೇಳಿದರು, ಕ್ರಿಶ್ಚಿಯನ್ನರು ಅದನ್ನೇ ಹೇಳಿದರು. ಮುಸ್ಲಿಮರು ಕೊಲ್ಲಿ ಮತ್ತು ಆಳ್ವಿಕೆ ಮಾಡಿ ಎಂದರು. ನೀವು [ಹಿಂದೂಗಳು] ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ನಂತರ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಯಾವಾಗ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಕೊಲ್ಲುತ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮನೆಗಳಲ್ಲಿ ಕತ್ತಿಗಳು ಮತ್ತು ಬಂದೂಕುಗಳನ್ನು ಸಂಗ್ರಹಿಸಿರಿ ಎಂದು ಹಿಂದೂಗಳಿಗೆ ಸಲಹೆ ನೀಡಿದ್ದಾರೆ.

“ಒಂದು ಕೈಯಲ್ಲಿ ಶಸ್ತ್ರಗಳನ್ನು ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರವನ್ನು [ಧಾರ್ಮಿಕ ಗ್ರಂಥಗಳನ್ನು] ಇಟ್ಟುಕೊಳ್ಳಿ” ಎಂದಿದ್ದಾರೆ. “ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ದಾಳಿ ಮಾಡುವವರನ್ನು ದೇಶದ್ರೋಹದ ಅಪರಾಧಿಗಳೆಂದು ನಿರ್ಣಯಿಸಿ ಮತ್ತು ಅವರಿಗೆ ಗಡಿಯಲ್ಲಿ ಗುಂಡು ಹಾರಿಸಿ… ಅವರನ್ನು ರಸ್ತೆಗಳಲ್ಲಿ ಕೊಲ್ಲಲಾಗುತ್ತದೆ” ಎಂದು ಪ್ರಚೋದಿಸಿದ್ದಾರೆ.

ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ತಮ್ಮ ಜನಪ್ರಿಯ ಯೂಟ್ಯೂಬ್ ವೀಡಿಯೊಗಳ ಮೂಲಕ ಮೂಢನಂಬಿಕೆ ಮತ್ತು ದ್ವೇಷವನ್ನು ಬಿತ್ತುವ ಮೂಲಕ ಹೆಸರಾಗಿದ್ದಾರೆ.

ಬಿಜೆಪಿಯ ಹರಿಯಾಣ ಘಟಕದ ಮಾಧ್ಯಮ ಸಂಯೋಜಕ ಮತ್ತು ಜಾತಿವಾದಿ ಗುಂಪಿನ ಕರ್ಣಿ ಸೇನೆಯ ಮುಖ್ಯಸ್ಥ ಅಮು, ಚವ್ಹಾಂಕೆ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವಾಗ ದ್ವೇಷದ ಮಾತುಗಳು ಹೊರಬಿದ್ದಿವೆ.

ಡಿಸೆಂಬರ್ 19, 2021ರಂದು ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಸುದರ್ಶನ್ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಮುಸ್ಲಿಮರನ್ನು ಕೊಲ್ಲವಂತೆ ಪ್ರಚೋದಿಸಿದ್ದರು.

ದ್ವೇಷ ಭಾಷಣದ ಬಗ್ಗೆ ವರದಿ ಮಾಡಿದವರ ವಿರುದ್ಧವೇ ಪೊಲೀಸರ ಕ್ರಮ

ಈ ಕಾರ್ಯಕ್ರಮಗಳಲ್ಲಿ ಮಾಡಿದ ಯಾವುದೇ ಭಾಷಣಕಾರರ ವಿರುದ್ಧ ಪೊಲೀಸರು ಕ್ರಮ ಕೈಗೊಂಡ ಬಗ್ಗೆ ಸೋಮವಾರ ಮಧ್ಯಾಹ್ನದವರೆಗೂ ವರದಿಯಾಗಿಲ್ಲ. ಆದರೆ ಘಟನೆಗಳ ಬಗ್ಗೆ ವರದಿ ಮಾಡಿದ್ದ ಮೊಲಿಟಿಕ್ಸ್ ಎಂಬ ಆನ್‌ಲೈನ್ ಪೋರ್ಟಲ್‌ಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ!

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 149 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ಆಕ್ಷೇಪಾರ್ಹ, ದುರುದ್ದೇಶಪೂರಿತ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಮೊಲಿಟಿಕ್ಸ್‌ಗೆ ಸೂಚಿಸಿದ್ದಾರೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ

ಇದಕ್ಕೆ ಪ್ರತಿಕ್ರಿಯೆಯಾಗಿ, ಮೊಲಿಟಿಕ್ಸ್ ಸಂಸ್ಥಾಪಕ ಮತ್ತು ನಿರ್ದೇಶಕ ಅನುದೀಪ್ ಜಗ್ಲಾನ್ ಟ್ವೀಟ್‌ ಮಾಡಿದ್ದು, “ನಾನು ಇನ್ನೂ ಗೊಂದಲಕ್ಕೊಳಗಾಗಿದ್ದೇನೆ. ನೀವು ಇದನ್ನು ನಮಗೆ ಏಕೆ ಕಳುಹಿಸುತ್ತೀರಿ? ಕೇಸರಿ ಧರಿಸಿದ ಈ ಕ್ರಿಮಿನಲ್‌ಗಳಿಗೂ ಇಂತಹ ಸೂಚನೆ ಹೋಗಿರಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...