Homeಮುಖಪುಟ'ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..'; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

‘ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..’; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

ತಮ್ಮ ಚುನಾವಣಾ ಪ್ರಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿರುವ ಪ್ರಧಾನ ಮಂತ್ರಿ ನರೇಂಧ್ರ ಮೋದಿಯವರಿಗೆ ಕಾಂಗ್ರೆಸ್‌ ಪಕ್ಷ ತಿರುಗೇಟು ನೀಡಿದ್ದು, ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ‘ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆಯಲ್ಲಿನ ವಿಳಂಬವನ್ನು ಪ್ರಶ್ನಿಸಿರುವ ಕೈ ಪಕ್ಷವು, ‘ರಾಜ್ಯದ ಮನರೇಗಾ (ಎಂಜಿಎನ್‌ಆರ್‌ಇಜಿಎ) ಕಾರ್ಮಿಕರಿಗೆ ಅವರ ವೇತನವನ್ನು ಯಾವಾಗ ಪಾವತಿಸುತ್ತೀರಾ’ ಎಂದು ಪ್ರಶ್ನಿಸಿದೆ.

ಕರ್ನಾಟಕದ ಬಾಗಲಕೋಟೆಯಲ್ಲಿ ನಡೆಯಲಿರುವ ರ್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

“ಬಾಗಲಕೋಟೆ-ಕುಡಚಿ ರೈಲು ಮಾರ್ಗವನ್ನು ನೀಡಲು ಮೋದಿ ಸರ್ಕಾರ ಏಕೆ ವಿಫಲವಾಗಿದೆ? ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಏಕೆ ತಡೆಹಿಡಿಯುತ್ತಿದೆ? ಕರ್ನಾಟಕದ ಎಂಜಿಎನ್‌ಆರ್‌ಇಜಿಎ ಕಾರ್ಮಿಕರಿಗೆ ಪ್ರಧಾನಿ ಮೋದಿ ವೇತನ ಯಾವಾಗ ಪಾವತಿಸುತ್ತಾರೆ” ಎಂದು ರಮೇಶ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ನೈಋತ್ಯ ರೈಲ್ವೆಯ ಬಾಗಲಕೋಟೆ-ಕುಡಚಿ ಮಾರ್ಗವು ಈಗ ಎಂಟು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. ಇಂದಿನವರೆಗೆ ಶೇ.33ರಷ್ಟು ಅಂದರೆ, 142 ಕಿ.ಮೀ ಮಾರ್ಗದಲ್ಲಿ 46 ಕಿ.ಮೀ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ ಎಂದರು.

“ಮೂಲತಃ 2010-11 ರಲ್ಲಿ ₹986 ಕೋಟಿ ವೆಚ್ಚದಲ್ಲಿ ಈ ಯೋಜನೆ ಮಂಜೂರು ಮಾಡಲಾಗಿತ್ತು. ಈಗ ಅದರ ವೆಚ್ಚವನ್ನು ₹1,649 ಕೋಟಿ ರೂಪಾಯಿಗಳಿಗೆ ಏರಿಕೆ ಕಂಡಿದೆ. 2016ರ ಮಾರ್ಚ್‌ನಲ್ಲೇ ಪೂರ್ಣಗೊಳ್ಳಬೇಕಿದ್ದ ಯೋಜನೆಯು 2027 ರಲ್ಲಿ ಪೂರ್ಣಗೊಳ್ಳಲಿದೆ” ಎಂದು ರಮೇಶ್ ಪ್ರತಿಪಾದಿಸಿದರು. .

ಕರ್ನಾಟಕ ಸರ್ಕಾರವು ಯೋಜನೆಗೆ ಭೂಮಿಯನ್ನು ಉಚಿತವಾಗಿ ನೀಡಿದ್ದರೂ ಮತ್ತು ನಿರ್ಮಾಣ ವೆಚ್ಚದ ಶೇಕಡಾ 50 ರಷ್ಟು ಕೊಡುಗೆ ನೀಡಿದ್ದರೂ, ಮೋದಿ ಸರ್ಕಾರವು ಈ ಯೋಜನೆಯನ್ನು ನೀಡಲು “ವಿಫಲವಾಗಿದೆ” ಎಂದು ಅವರು ಹೇಳಿದರು.

“ಈ ಮಹತ್ವದ ರೈಲು ಯೋಜನೆಯು 11 ವರ್ಷಗಳ ವಿಳಂಬವನ್ನು ಏಕೆ ಎದುರಿಸುತ್ತಿದೆ? ಇದಕ್ಕೆ ಮೋದಿ ಸರ್ಕಾರದ ಅದಕ್ಷತೆ ಅಥವಾ ಅದರ ಕರ್ನಾಟಕ ವಿರೋಧಿ ಪ್ರವೃತ್ತಿ ಕಾರಣವೇ?” ಎಂದು ರಮೇಶ್ ಕೇಳಿದ್ದಾರೆ.

ಕಳೆದ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನವನ್ನು ಹೆಮ್ಮೆಯಿಂದ ಘೋಷಿಸಿತ್ತು. ಆದರೆ, ಒಂದು ವರ್ಷಕ್ಕಿಂತ ಹೆಚ್ಚು ನಂತರ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇದರಲ್ಲಿ ಒಂದು ಪೈಸೆಯೂ ಬಂದಿಲ್ಲ್ಲಲ ಎಂದು ಬಹಿರಂಗಪಡಿಸಿದ್ದಾರೆ.

“ತಮ್ಮ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಯಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದರು. ಆದರೆ, ಈ ವರ್ಷದ ಆರಂಭದಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯವು ಯೋಜನೆಗೆ ಅನುಮತಿಯನ್ನು ಮುಂದೂಡಿದೆ” ಎಂದು ರಮೇಶ್ ಹೇಳಿದರು.

ತೀವ್ರ ಬರಗಾಲದಲ್ಲಿ ತತ್ತರಿಸಿರುವ ರಾಜ್ಯದಲ್ಲಿ ಕುಡಿಯುವ ನೀರು ಮತ್ತು ನೀರಾವರಿ ಪ್ರವೇಶವನ್ನು ವಿಸ್ತರಿಸಲು ಈ ಯೋಜನೆಗಳು ನಿರ್ಣಾಯಕವಾಗಿವೆ. ಈ ಅಗತ್ಯ ಮೂಲಸೌಕರ್ಯ ಯೋಜನೆಗಳನ್ನು ಮೋದಿ ಸರ್ಕಾರ ಏಕೆ ನಿರ್ಲಕ್ಷಿಸಿದೆ ಎಂದು ರಮೇಶ್ ಪ್ರಶ್ನಿಸಿದರು.

“ಪ್ರಧಾನಿ ಕರ್ನಾಟಕದ ಜನರ ವಿರುದ್ಧ ಏನು ಸೇಡು ತೀರಿಸಿಕೊಂಡಿದ್ದಾರೆ?” ಎಂದು ಕಾಂಗ್ರೆಸ್ ಮುಖಂಡರು ಕೇಳಿದ್ದಾರೆ.

ಗ್ರಾಮೀಣ ಆರ್ಥಿಕತೆಯ ಮೇಲಿನ ಬರ-ಸಂಬಂಧಿತ ಒತ್ತಡವನ್ನು ನಿವಾರಿಸಲು ಸಹಾಯ ಮಾಡಲು, ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು.

“ಬರಗಾಲದ ಅವಧಿಯಲ್ಲಿ ಹಾಗೆ ಮಾಡಲು ಯೋಜನೆಯಲ್ಲಿ ಅವಕಾಶವಿದೆ. ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸುವಲ್ಲಿ ವಿಫಲವಾಗಿದೆ. ಅದು ಅವರಿಗೆ ವೇತನ ಪಾವತಿಗೆ ₹1600 ಕೋಟಿ ಬಿಡುಗಡೆ ಮಾಡಲು ವಿಫಲವಾಗಿದೆ” ಎಂದು ರಮೇಶ್ ಹೇಳಿದರು.

‘ಕರ್ನಾಟಕದ ಎಂಜಿಎನ್‌ಆರ್‌ಇಜಿಎಸ್ ಕಾರ್ಮಿಕರಿಗೆ ಮೋದಿ ಸರ್ಕಾರ ಯಾವಾಗ ವೇತನ ನೀಡಲಿದೆ’ ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗೋಬೆಲ್ಸ್‌ನಿಂದ ಸ್ಫೂರ್ತಿ ಪಡೆದು ಕಾಂಗ್ರೆಸ್ ‘ನ್ಯಾಯ ಪತ್ರ’ ಟೀಕಿಸುತ್ತಿರುವ ಪ್ರಧಾನಿ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...