Homeಮುಖಪುಟ'ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..'; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

‘ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..’; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

ತಮ್ಮ ಚುನಾವಣಾ ಪ್ರಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿರುವ ಪ್ರಧಾನ ಮಂತ್ರಿ ನರೇಂಧ್ರ ಮೋದಿಯವರಿಗೆ ಕಾಂಗ್ರೆಸ್‌ ಪಕ್ಷ ತಿರುಗೇಟು ನೀಡಿದ್ದು, ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ‘ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆಯಲ್ಲಿನ ವಿಳಂಬವನ್ನು ಪ್ರಶ್ನಿಸಿರುವ ಕೈ ಪಕ್ಷವು, ‘ರಾಜ್ಯದ ಮನರೇಗಾ (ಎಂಜಿಎನ್‌ಆರ್‌ಇಜಿಎ) ಕಾರ್ಮಿಕರಿಗೆ ಅವರ ವೇತನವನ್ನು ಯಾವಾಗ ಪಾವತಿಸುತ್ತೀರಾ’ ಎಂದು ಪ್ರಶ್ನಿಸಿದೆ.

ಕರ್ನಾಟಕದ ಬಾಗಲಕೋಟೆಯಲ್ಲಿ ನಡೆಯಲಿರುವ ರ್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

“ಬಾಗಲಕೋಟೆ-ಕುಡಚಿ ರೈಲು ಮಾರ್ಗವನ್ನು ನೀಡಲು ಮೋದಿ ಸರ್ಕಾರ ಏಕೆ ವಿಫಲವಾಗಿದೆ? ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಏಕೆ ತಡೆಹಿಡಿಯುತ್ತಿದೆ? ಕರ್ನಾಟಕದ ಎಂಜಿಎನ್‌ಆರ್‌ಇಜಿಎ ಕಾರ್ಮಿಕರಿಗೆ ಪ್ರಧಾನಿ ಮೋದಿ ವೇತನ ಯಾವಾಗ ಪಾವತಿಸುತ್ತಾರೆ” ಎಂದು ರಮೇಶ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ನೈಋತ್ಯ ರೈಲ್ವೆಯ ಬಾಗಲಕೋಟೆ-ಕುಡಚಿ ಮಾರ್ಗವು ಈಗ ಎಂಟು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. ಇಂದಿನವರೆಗೆ ಶೇ.33ರಷ್ಟು ಅಂದರೆ, 142 ಕಿ.ಮೀ ಮಾರ್ಗದಲ್ಲಿ 46 ಕಿ.ಮೀ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ ಎಂದರು.

“ಮೂಲತಃ 2010-11 ರಲ್ಲಿ ₹986 ಕೋಟಿ ವೆಚ್ಚದಲ್ಲಿ ಈ ಯೋಜನೆ ಮಂಜೂರು ಮಾಡಲಾಗಿತ್ತು. ಈಗ ಅದರ ವೆಚ್ಚವನ್ನು ₹1,649 ಕೋಟಿ ರೂಪಾಯಿಗಳಿಗೆ ಏರಿಕೆ ಕಂಡಿದೆ. 2016ರ ಮಾರ್ಚ್‌ನಲ್ಲೇ ಪೂರ್ಣಗೊಳ್ಳಬೇಕಿದ್ದ ಯೋಜನೆಯು 2027 ರಲ್ಲಿ ಪೂರ್ಣಗೊಳ್ಳಲಿದೆ” ಎಂದು ರಮೇಶ್ ಪ್ರತಿಪಾದಿಸಿದರು. .

ಕರ್ನಾಟಕ ಸರ್ಕಾರವು ಯೋಜನೆಗೆ ಭೂಮಿಯನ್ನು ಉಚಿತವಾಗಿ ನೀಡಿದ್ದರೂ ಮತ್ತು ನಿರ್ಮಾಣ ವೆಚ್ಚದ ಶೇಕಡಾ 50 ರಷ್ಟು ಕೊಡುಗೆ ನೀಡಿದ್ದರೂ, ಮೋದಿ ಸರ್ಕಾರವು ಈ ಯೋಜನೆಯನ್ನು ನೀಡಲು “ವಿಫಲವಾಗಿದೆ” ಎಂದು ಅವರು ಹೇಳಿದರು.

“ಈ ಮಹತ್ವದ ರೈಲು ಯೋಜನೆಯು 11 ವರ್ಷಗಳ ವಿಳಂಬವನ್ನು ಏಕೆ ಎದುರಿಸುತ್ತಿದೆ? ಇದಕ್ಕೆ ಮೋದಿ ಸರ್ಕಾರದ ಅದಕ್ಷತೆ ಅಥವಾ ಅದರ ಕರ್ನಾಟಕ ವಿರೋಧಿ ಪ್ರವೃತ್ತಿ ಕಾರಣವೇ?” ಎಂದು ರಮೇಶ್ ಕೇಳಿದ್ದಾರೆ.

ಕಳೆದ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನವನ್ನು ಹೆಮ್ಮೆಯಿಂದ ಘೋಷಿಸಿತ್ತು. ಆದರೆ, ಒಂದು ವರ್ಷಕ್ಕಿಂತ ಹೆಚ್ಚು ನಂತರ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇದರಲ್ಲಿ ಒಂದು ಪೈಸೆಯೂ ಬಂದಿಲ್ಲ್ಲಲ ಎಂದು ಬಹಿರಂಗಪಡಿಸಿದ್ದಾರೆ.

“ತಮ್ಮ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಯಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದರು. ಆದರೆ, ಈ ವರ್ಷದ ಆರಂಭದಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯವು ಯೋಜನೆಗೆ ಅನುಮತಿಯನ್ನು ಮುಂದೂಡಿದೆ” ಎಂದು ರಮೇಶ್ ಹೇಳಿದರು.

ತೀವ್ರ ಬರಗಾಲದಲ್ಲಿ ತತ್ತರಿಸಿರುವ ರಾಜ್ಯದಲ್ಲಿ ಕುಡಿಯುವ ನೀರು ಮತ್ತು ನೀರಾವರಿ ಪ್ರವೇಶವನ್ನು ವಿಸ್ತರಿಸಲು ಈ ಯೋಜನೆಗಳು ನಿರ್ಣಾಯಕವಾಗಿವೆ. ಈ ಅಗತ್ಯ ಮೂಲಸೌಕರ್ಯ ಯೋಜನೆಗಳನ್ನು ಮೋದಿ ಸರ್ಕಾರ ಏಕೆ ನಿರ್ಲಕ್ಷಿಸಿದೆ ಎಂದು ರಮೇಶ್ ಪ್ರಶ್ನಿಸಿದರು.

“ಪ್ರಧಾನಿ ಕರ್ನಾಟಕದ ಜನರ ವಿರುದ್ಧ ಏನು ಸೇಡು ತೀರಿಸಿಕೊಂಡಿದ್ದಾರೆ?” ಎಂದು ಕಾಂಗ್ರೆಸ್ ಮುಖಂಡರು ಕೇಳಿದ್ದಾರೆ.

ಗ್ರಾಮೀಣ ಆರ್ಥಿಕತೆಯ ಮೇಲಿನ ಬರ-ಸಂಬಂಧಿತ ಒತ್ತಡವನ್ನು ನಿವಾರಿಸಲು ಸಹಾಯ ಮಾಡಲು, ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು.

“ಬರಗಾಲದ ಅವಧಿಯಲ್ಲಿ ಹಾಗೆ ಮಾಡಲು ಯೋಜನೆಯಲ್ಲಿ ಅವಕಾಶವಿದೆ. ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸುವಲ್ಲಿ ವಿಫಲವಾಗಿದೆ. ಅದು ಅವರಿಗೆ ವೇತನ ಪಾವತಿಗೆ ₹1600 ಕೋಟಿ ಬಿಡುಗಡೆ ಮಾಡಲು ವಿಫಲವಾಗಿದೆ” ಎಂದು ರಮೇಶ್ ಹೇಳಿದರು.

‘ಕರ್ನಾಟಕದ ಎಂಜಿಎನ್‌ಆರ್‌ಇಜಿಎಸ್ ಕಾರ್ಮಿಕರಿಗೆ ಮೋದಿ ಸರ್ಕಾರ ಯಾವಾಗ ವೇತನ ನೀಡಲಿದೆ’ ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗೋಬೆಲ್ಸ್‌ನಿಂದ ಸ್ಫೂರ್ತಿ ಪಡೆದು ಕಾಂಗ್ರೆಸ್ ‘ನ್ಯಾಯ ಪತ್ರ’ ಟೀಕಿಸುತ್ತಿರುವ ಪ್ರಧಾನಿ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...