Homeಮುಖಪುಟ'ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..'; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

‘ರಾಜ್ಯದ ಮನರೇಗಾ ಕಾರ್ಮಿಕರ ವೇತನವನ್ನು ಯಾವಾಗ ಕೊಡ್ತೀರಾ..’; ಸರ್ಕಾರವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್‌ ತಿರುಗೇಟು

ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

ತಮ್ಮ ಚುನಾವಣಾ ಪ್ರಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿರುವ ಪ್ರಧಾನ ಮಂತ್ರಿ ನರೇಂಧ್ರ ಮೋದಿಯವರಿಗೆ ಕಾಂಗ್ರೆಸ್‌ ಪಕ್ಷ ತಿರುಗೇಟು ನೀಡಿದ್ದು, ಕರ್ನಾಟಕದ ಪ್ರಮುಖ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ‘ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆಯಲ್ಲಿನ ವಿಳಂಬವನ್ನು ಪ್ರಶ್ನಿಸಿರುವ ಕೈ ಪಕ್ಷವು, ‘ರಾಜ್ಯದ ಮನರೇಗಾ (ಎಂಜಿಎನ್‌ಆರ್‌ಇಜಿಎ) ಕಾರ್ಮಿಕರಿಗೆ ಅವರ ವೇತನವನ್ನು ಯಾವಾಗ ಪಾವತಿಸುತ್ತೀರಾ’ ಎಂದು ಪ್ರಶ್ನಿಸಿದೆ.

ಕರ್ನಾಟಕದ ಬಾಗಲಕೋಟೆಯಲ್ಲಿ ನಡೆಯಲಿರುವ ರ್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ.

“ಬಾಗಲಕೋಟೆ-ಕುಡಚಿ ರೈಲು ಮಾರ್ಗವನ್ನು ನೀಡಲು ಮೋದಿ ಸರ್ಕಾರ ಏಕೆ ವಿಫಲವಾಗಿದೆ? ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಏಕೆ ತಡೆಹಿಡಿಯುತ್ತಿದೆ? ಕರ್ನಾಟಕದ ಎಂಜಿಎನ್‌ಆರ್‌ಇಜಿಎ ಕಾರ್ಮಿಕರಿಗೆ ಪ್ರಧಾನಿ ಮೋದಿ ವೇತನ ಯಾವಾಗ ಪಾವತಿಸುತ್ತಾರೆ” ಎಂದು ರಮೇಶ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ನೈಋತ್ಯ ರೈಲ್ವೆಯ ಬಾಗಲಕೋಟೆ-ಕುಡಚಿ ಮಾರ್ಗವು ಈಗ ಎಂಟು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. ಇಂದಿನವರೆಗೆ ಶೇ.33ರಷ್ಟು ಅಂದರೆ, 142 ಕಿ.ಮೀ ಮಾರ್ಗದಲ್ಲಿ 46 ಕಿ.ಮೀ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ ಎಂದರು.

“ಮೂಲತಃ 2010-11 ರಲ್ಲಿ ₹986 ಕೋಟಿ ವೆಚ್ಚದಲ್ಲಿ ಈ ಯೋಜನೆ ಮಂಜೂರು ಮಾಡಲಾಗಿತ್ತು. ಈಗ ಅದರ ವೆಚ್ಚವನ್ನು ₹1,649 ಕೋಟಿ ರೂಪಾಯಿಗಳಿಗೆ ಏರಿಕೆ ಕಂಡಿದೆ. 2016ರ ಮಾರ್ಚ್‌ನಲ್ಲೇ ಪೂರ್ಣಗೊಳ್ಳಬೇಕಿದ್ದ ಯೋಜನೆಯು 2027 ರಲ್ಲಿ ಪೂರ್ಣಗೊಳ್ಳಲಿದೆ” ಎಂದು ರಮೇಶ್ ಪ್ರತಿಪಾದಿಸಿದರು. .

ಕರ್ನಾಟಕ ಸರ್ಕಾರವು ಯೋಜನೆಗೆ ಭೂಮಿಯನ್ನು ಉಚಿತವಾಗಿ ನೀಡಿದ್ದರೂ ಮತ್ತು ನಿರ್ಮಾಣ ವೆಚ್ಚದ ಶೇಕಡಾ 50 ರಷ್ಟು ಕೊಡುಗೆ ನೀಡಿದ್ದರೂ, ಮೋದಿ ಸರ್ಕಾರವು ಈ ಯೋಜನೆಯನ್ನು ನೀಡಲು “ವಿಫಲವಾಗಿದೆ” ಎಂದು ಅವರು ಹೇಳಿದರು.

“ಈ ಮಹತ್ವದ ರೈಲು ಯೋಜನೆಯು 11 ವರ್ಷಗಳ ವಿಳಂಬವನ್ನು ಏಕೆ ಎದುರಿಸುತ್ತಿದೆ? ಇದಕ್ಕೆ ಮೋದಿ ಸರ್ಕಾರದ ಅದಕ್ಷತೆ ಅಥವಾ ಅದರ ಕರ್ನಾಟಕ ವಿರೋಧಿ ಪ್ರವೃತ್ತಿ ಕಾರಣವೇ?” ಎಂದು ರಮೇಶ್ ಕೇಳಿದ್ದಾರೆ.

ಕಳೆದ ವರ್ಷದ ಕೇಂದ್ರ ಬಜೆಟ್‌ನಲ್ಲಿ ಮೋದಿ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನವನ್ನು ಹೆಮ್ಮೆಯಿಂದ ಘೋಷಿಸಿತ್ತು. ಆದರೆ, ಒಂದು ವರ್ಷಕ್ಕಿಂತ ಹೆಚ್ಚು ನಂತರ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇದರಲ್ಲಿ ಒಂದು ಪೈಸೆಯೂ ಬಂದಿಲ್ಲ್ಲಲ ಎಂದು ಬಹಿರಂಗಪಡಿಸಿದ್ದಾರೆ.

“ತಮ್ಮ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಯಲ್ಲಿ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದರು. ಆದರೆ, ಈ ವರ್ಷದ ಆರಂಭದಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯವು ಯೋಜನೆಗೆ ಅನುಮತಿಯನ್ನು ಮುಂದೂಡಿದೆ” ಎಂದು ರಮೇಶ್ ಹೇಳಿದರು.

ತೀವ್ರ ಬರಗಾಲದಲ್ಲಿ ತತ್ತರಿಸಿರುವ ರಾಜ್ಯದಲ್ಲಿ ಕುಡಿಯುವ ನೀರು ಮತ್ತು ನೀರಾವರಿ ಪ್ರವೇಶವನ್ನು ವಿಸ್ತರಿಸಲು ಈ ಯೋಜನೆಗಳು ನಿರ್ಣಾಯಕವಾಗಿವೆ. ಈ ಅಗತ್ಯ ಮೂಲಸೌಕರ್ಯ ಯೋಜನೆಗಳನ್ನು ಮೋದಿ ಸರ್ಕಾರ ಏಕೆ ನಿರ್ಲಕ್ಷಿಸಿದೆ ಎಂದು ರಮೇಶ್ ಪ್ರಶ್ನಿಸಿದರು.

“ಪ್ರಧಾನಿ ಕರ್ನಾಟಕದ ಜನರ ವಿರುದ್ಧ ಏನು ಸೇಡು ತೀರಿಸಿಕೊಂಡಿದ್ದಾರೆ?” ಎಂದು ಕಾಂಗ್ರೆಸ್ ಮುಖಂಡರು ಕೇಳಿದ್ದಾರೆ.

ಗ್ರಾಮೀಣ ಆರ್ಥಿಕತೆಯ ಮೇಲಿನ ಬರ-ಸಂಬಂಧಿತ ಒತ್ತಡವನ್ನು ನಿವಾರಿಸಲು ಸಹಾಯ ಮಾಡಲು, ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು.

“ಬರಗಾಲದ ಅವಧಿಯಲ್ಲಿ ಹಾಗೆ ಮಾಡಲು ಯೋಜನೆಯಲ್ಲಿ ಅವಕಾಶವಿದೆ. ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸುವಲ್ಲಿ ವಿಫಲವಾಗಿದೆ. ಅದು ಅವರಿಗೆ ವೇತನ ಪಾವತಿಗೆ ₹1600 ಕೋಟಿ ಬಿಡುಗಡೆ ಮಾಡಲು ವಿಫಲವಾಗಿದೆ” ಎಂದು ರಮೇಶ್ ಹೇಳಿದರು.

‘ಕರ್ನಾಟಕದ ಎಂಜಿಎನ್‌ಆರ್‌ಇಜಿಎಸ್ ಕಾರ್ಮಿಕರಿಗೆ ಮೋದಿ ಸರ್ಕಾರ ಯಾವಾಗ ವೇತನ ನೀಡಲಿದೆ’ ಎಂದು ರಮೇಶ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಗೋಬೆಲ್ಸ್‌ನಿಂದ ಸ್ಫೂರ್ತಿ ಪಡೆದು ಕಾಂಗ್ರೆಸ್ ‘ನ್ಯಾಯ ಪತ್ರ’ ಟೀಕಿಸುತ್ತಿರುವ ಪ್ರಧಾನಿ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...