Homeಮುಖಪುಟ'ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ': ಅಮಿತ್ ಶಾ ಕರೆ

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು.

“ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು.

“ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, ಶಸ್ತ್ರಸಜ್ಜಿತರು ಮತ್ತು ಅಲ್ಲದವರು ಸೇರಿದಂತೆ ಎಲ್ಲಾ ನಕ್ಸಲ್ ಸಹೋದರರಲ್ಲಿ ನಾನು ವಿನಂತಿಸುತ್ತೇನೆ ‘ನಿಮ್ಮ ಶಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ, ನೀವು ನಮ್ಮವರು. ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ. ಈ ಪ್ರದೇಶ ಅಭಿವೃದ್ಧಿಯನ್ನು ಬಯಸುತ್ತಿದೆ” ಎಂದು ಅಮಿತ್ ಶಾ ಹೇಳಿದರು.

“ಬಸ್ತಾರ್‌ನಲ್ಲಿ ಕಳೆದ 50 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಆದರೆ, ಬಸ್ತಾರ್‌ನಲ್ಲಿ ಶಾಂತಿ ನೆಲೆಸಿದಾಗ, ಮಕ್ಕಳು ಶಾಲೆಗೆ ಹೋದಾಗ, ನಾವು ನಮ್ಮ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ, ಬುಡಕಟ್ಟು ಯುವಕರಲ್ಲಿ ಅಪೌಷ್ಟಿಕತೆ ಕಡಿಮೆಯಾದಾಗ, ಶಿಕ್ಷಣ, ಪ್ರತಿ ಹಳ್ಳಿಯಲ್ಲಿ ಆರೋಗ್ಯ ಸೇವೆಗಳು ದೊರೆತಾಗ, ತಹಸಿಲ್‌ಗಳಲ್ಲಿ ಆಸ್ಪತ್ರೆಗಳಿದ್ದಾಗ ಮತ್ತು ಪ್ರತಿ ಮನೆಗೆ ಪ್ರತಿ ತಿಂಗಳು ಏಳು ಕೆ.ಜಿ ಅಕ್ಕಿ ಸಿಕ್ಕಾಗ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಆರೋಗ್ಯ ವಿಮೆ ದೊರೆತಾಗ ಮಾತ್ರ ಇದು ಸಾಧ್ಯ. ಬಸ್ತಾರ್ ನಕ್ಸಲ್‌ ಮುಕ್ತವಾದರೆ ಇದು ಆಗಬಹುದು” ಎಂದಿದ್ದಾರೆ.

ನಕ್ಸಲರ ಶರಣಾಗತಿ ನೀತಿಯ ಬಗ್ಗೆ ಮಾತನಾಡಿದ ಅಮಿತ್‌ ಶಾ, “ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುವ ಪ್ರತಿಯೊಂದು ಗ್ರಾಮಕ್ಕೂ 1 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುವುದು. “ನಿಮ್ಮ ಹಳ್ಳಿಯಲ್ಲಿರುವ ಎಲ್ಲಾ ನಕ್ಸಲರಿಗೆ ಶರಣಾಗಲು ಹೇಳಿ” ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

“ಇಂದು, ಶರಣಾದ ನಕ್ಸಲರು ಅಭಿವೃದ್ಧಿಗಾಗಿ ನಮಗೆ ಕಂಪ್ಯೂಟರ್‌ಗಳು ಬೇಕು, ಬಂದೂಕುಗಳಲ್ಲ. ಪೆನ್ನುಗಳು ಬೇಕು, ಐಇಡಿ ಅಥವಾ ಬಾಂಬ್‌ಗಳಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. 2025ರ ಕಳೆದ ಮೂರು ತಿಂಗಳಲ್ಲಿ 521 ನಕ್ಸಲರು ಶರಣಾಗಿದ್ದಾರೆ. ಕಳೆದ ವರ್ಷ 881 ನಕ್ಸಲರು ಶರಣಾಗಿದ್ದರು” ಎಂದು ಅಮಿತ್ ಶಾ ಮಾಹಿತಿ ನೀಡಿದರು.

“ನಕ್ಸಲ್ ಪ್ರೊಪಗಂಡ ನಿಮ್ಮ ಯುವಜನರನ್ನು ಕೊಲ್ಲಲಿದೆ. ನನ್ನ ಸಹೋದರ, ಸಹೋದರಿಯರೇ ಯಾರೂ ಕೊಲ್ಲಲು ಬಯಸುವುದಿಲ್ಲ. ನೀವು ಏನೇ ಕೃತ್ಯಗಳನ್ನು (ಹಿಂಸೆ) ಮಾಡಿದ್ದರೂ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಚಿತಪಡಿಸುತ್ತೇವೆ. ಬಂದೂಕುಗಳನ್ನು ಬಳಸುವ ಮೂಲಕ ಬಸ್ತಾರ್‌ನ ಅಭಿವೃದ್ಧಿ ತಡೆಯಲು ನಿಮಗೆ ಸಾಧ್ಯವಿಲ್ಲ. ಇನ್ನೂ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಬಯಸುವವರನ್ನು ಭದ್ರತಾ ಪಡೆಗಳು ನಿಭಾಯಿಸಲಿವೆ. ಏನೇ ಆಗಲಿ, ಮುಂದಿನ ಮಾರ್ಚ್ ವೇಳೆಗೆ ಇಡೀ ದೇಶ ನಕ್ಸಲ್‌ ಮುಕ್ತವಾಬೇಕು ಎಂದರು.

ಬಸ್ತಾರ್‌ನಲ್ಲಿ ತಾವು ಕಾಣಬಯಸುವ ಅಭಿವೃದ್ಧಿಯ ಕುರಿತು ಮಾತನಾಡಿದ ಶಾ, “ಅಭಿವೃದ್ಧಿ ಎಂದರೆ ಸುಕ್ಮಾದ ಸಬ್-ಇನ್ಸ್‌ಪೆಕ್ಟರ್, ಬಸ್ತಾರ್‌ನ ಬ್ಯಾರಿಸ್ಟರ್, ದಂತೇವಾಡದ ವೈದ್ಯರು ಮತ್ತು ಕಾಂಕೇರ್‌ನ ಕಲೆಕ್ಟರ್. ನಾವು ಕಷ್ಟಪಟ್ಟು ಕೆಲಸ ಮಾಡಿದರೆ ಮತ್ತು ಯಾರಿಗೂ ಹೆದರದಿದ್ದರೆ ಈ ಕನಸುಗಳು ನನಸಾಗುತ್ತವೆ. ನಿಮ್ಮ ಸುರಕ್ಷತೆಯನ್ನು ಈ ಡಬಲ್ ಇಂಜಿನ್ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಅಮಿತ್ ಶಾ ಹೇಳಿದರು.

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...