Homeಮುಖಪುಟ'ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ': ಅಮಿತ್ ಶಾ ಕರೆ

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು.

“ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು.

“ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, ಶಸ್ತ್ರಸಜ್ಜಿತರು ಮತ್ತು ಅಲ್ಲದವರು ಸೇರಿದಂತೆ ಎಲ್ಲಾ ನಕ್ಸಲ್ ಸಹೋದರರಲ್ಲಿ ನಾನು ವಿನಂತಿಸುತ್ತೇನೆ ‘ನಿಮ್ಮ ಶಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ, ನೀವು ನಮ್ಮವರು. ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ. ಈ ಪ್ರದೇಶ ಅಭಿವೃದ್ಧಿಯನ್ನು ಬಯಸುತ್ತಿದೆ” ಎಂದು ಅಮಿತ್ ಶಾ ಹೇಳಿದರು.

“ಬಸ್ತಾರ್‌ನಲ್ಲಿ ಕಳೆದ 50 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಆದರೆ, ಬಸ್ತಾರ್‌ನಲ್ಲಿ ಶಾಂತಿ ನೆಲೆಸಿದಾಗ, ಮಕ್ಕಳು ಶಾಲೆಗೆ ಹೋದಾಗ, ನಾವು ನಮ್ಮ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ, ಬುಡಕಟ್ಟು ಯುವಕರಲ್ಲಿ ಅಪೌಷ್ಟಿಕತೆ ಕಡಿಮೆಯಾದಾಗ, ಶಿಕ್ಷಣ, ಪ್ರತಿ ಹಳ್ಳಿಯಲ್ಲಿ ಆರೋಗ್ಯ ಸೇವೆಗಳು ದೊರೆತಾಗ, ತಹಸಿಲ್‌ಗಳಲ್ಲಿ ಆಸ್ಪತ್ರೆಗಳಿದ್ದಾಗ ಮತ್ತು ಪ್ರತಿ ಮನೆಗೆ ಪ್ರತಿ ತಿಂಗಳು ಏಳು ಕೆ.ಜಿ ಅಕ್ಕಿ ಸಿಕ್ಕಾಗ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಆರೋಗ್ಯ ವಿಮೆ ದೊರೆತಾಗ ಮಾತ್ರ ಇದು ಸಾಧ್ಯ. ಬಸ್ತಾರ್ ನಕ್ಸಲ್‌ ಮುಕ್ತವಾದರೆ ಇದು ಆಗಬಹುದು” ಎಂದಿದ್ದಾರೆ.

ನಕ್ಸಲರ ಶರಣಾಗತಿ ನೀತಿಯ ಬಗ್ಗೆ ಮಾತನಾಡಿದ ಅಮಿತ್‌ ಶಾ, “ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುವ ಪ್ರತಿಯೊಂದು ಗ್ರಾಮಕ್ಕೂ 1 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುವುದು. “ನಿಮ್ಮ ಹಳ್ಳಿಯಲ್ಲಿರುವ ಎಲ್ಲಾ ನಕ್ಸಲರಿಗೆ ಶರಣಾಗಲು ಹೇಳಿ” ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

“ಇಂದು, ಶರಣಾದ ನಕ್ಸಲರು ಅಭಿವೃದ್ಧಿಗಾಗಿ ನಮಗೆ ಕಂಪ್ಯೂಟರ್‌ಗಳು ಬೇಕು, ಬಂದೂಕುಗಳಲ್ಲ. ಪೆನ್ನುಗಳು ಬೇಕು, ಐಇಡಿ ಅಥವಾ ಬಾಂಬ್‌ಗಳಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. 2025ರ ಕಳೆದ ಮೂರು ತಿಂಗಳಲ್ಲಿ 521 ನಕ್ಸಲರು ಶರಣಾಗಿದ್ದಾರೆ. ಕಳೆದ ವರ್ಷ 881 ನಕ್ಸಲರು ಶರಣಾಗಿದ್ದರು” ಎಂದು ಅಮಿತ್ ಶಾ ಮಾಹಿತಿ ನೀಡಿದರು.

“ನಕ್ಸಲ್ ಪ್ರೊಪಗಂಡ ನಿಮ್ಮ ಯುವಜನರನ್ನು ಕೊಲ್ಲಲಿದೆ. ನನ್ನ ಸಹೋದರ, ಸಹೋದರಿಯರೇ ಯಾರೂ ಕೊಲ್ಲಲು ಬಯಸುವುದಿಲ್ಲ. ನೀವು ಏನೇ ಕೃತ್ಯಗಳನ್ನು (ಹಿಂಸೆ) ಮಾಡಿದ್ದರೂ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಚಿತಪಡಿಸುತ್ತೇವೆ. ಬಂದೂಕುಗಳನ್ನು ಬಳಸುವ ಮೂಲಕ ಬಸ್ತಾರ್‌ನ ಅಭಿವೃದ್ಧಿ ತಡೆಯಲು ನಿಮಗೆ ಸಾಧ್ಯವಿಲ್ಲ. ಇನ್ನೂ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಬಯಸುವವರನ್ನು ಭದ್ರತಾ ಪಡೆಗಳು ನಿಭಾಯಿಸಲಿವೆ. ಏನೇ ಆಗಲಿ, ಮುಂದಿನ ಮಾರ್ಚ್ ವೇಳೆಗೆ ಇಡೀ ದೇಶ ನಕ್ಸಲ್‌ ಮುಕ್ತವಾಬೇಕು ಎಂದರು.

ಬಸ್ತಾರ್‌ನಲ್ಲಿ ತಾವು ಕಾಣಬಯಸುವ ಅಭಿವೃದ್ಧಿಯ ಕುರಿತು ಮಾತನಾಡಿದ ಶಾ, “ಅಭಿವೃದ್ಧಿ ಎಂದರೆ ಸುಕ್ಮಾದ ಸಬ್-ಇನ್ಸ್‌ಪೆಕ್ಟರ್, ಬಸ್ತಾರ್‌ನ ಬ್ಯಾರಿಸ್ಟರ್, ದಂತೇವಾಡದ ವೈದ್ಯರು ಮತ್ತು ಕಾಂಕೇರ್‌ನ ಕಲೆಕ್ಟರ್. ನಾವು ಕಷ್ಟಪಟ್ಟು ಕೆಲಸ ಮಾಡಿದರೆ ಮತ್ತು ಯಾರಿಗೂ ಹೆದರದಿದ್ದರೆ ಈ ಕನಸುಗಳು ನನಸಾಗುತ್ತವೆ. ನಿಮ್ಮ ಸುರಕ್ಷತೆಯನ್ನು ಈ ಡಬಲ್ ಇಂಜಿನ್ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಅಮಿತ್ ಶಾ ಹೇಳಿದರು.

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...