Homeಮುಖಪುಟ'ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ': ಅಮಿತ್ ಶಾ ಕರೆ

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು.

“ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು.

“ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, ಶಸ್ತ್ರಸಜ್ಜಿತರು ಮತ್ತು ಅಲ್ಲದವರು ಸೇರಿದಂತೆ ಎಲ್ಲಾ ನಕ್ಸಲ್ ಸಹೋದರರಲ್ಲಿ ನಾನು ವಿನಂತಿಸುತ್ತೇನೆ ‘ನಿಮ್ಮ ಶಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ, ನೀವು ನಮ್ಮವರು. ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ. ಈ ಪ್ರದೇಶ ಅಭಿವೃದ್ಧಿಯನ್ನು ಬಯಸುತ್ತಿದೆ” ಎಂದು ಅಮಿತ್ ಶಾ ಹೇಳಿದರು.

“ಬಸ್ತಾರ್‌ನಲ್ಲಿ ಕಳೆದ 50 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಆದರೆ, ಬಸ್ತಾರ್‌ನಲ್ಲಿ ಶಾಂತಿ ನೆಲೆಸಿದಾಗ, ಮಕ್ಕಳು ಶಾಲೆಗೆ ಹೋದಾಗ, ನಾವು ನಮ್ಮ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ, ಬುಡಕಟ್ಟು ಯುವಕರಲ್ಲಿ ಅಪೌಷ್ಟಿಕತೆ ಕಡಿಮೆಯಾದಾಗ, ಶಿಕ್ಷಣ, ಪ್ರತಿ ಹಳ್ಳಿಯಲ್ಲಿ ಆರೋಗ್ಯ ಸೇವೆಗಳು ದೊರೆತಾಗ, ತಹಸಿಲ್‌ಗಳಲ್ಲಿ ಆಸ್ಪತ್ರೆಗಳಿದ್ದಾಗ ಮತ್ತು ಪ್ರತಿ ಮನೆಗೆ ಪ್ರತಿ ತಿಂಗಳು ಏಳು ಕೆ.ಜಿ ಅಕ್ಕಿ ಸಿಕ್ಕಾಗ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಆರೋಗ್ಯ ವಿಮೆ ದೊರೆತಾಗ ಮಾತ್ರ ಇದು ಸಾಧ್ಯ. ಬಸ್ತಾರ್ ನಕ್ಸಲ್‌ ಮುಕ್ತವಾದರೆ ಇದು ಆಗಬಹುದು” ಎಂದಿದ್ದಾರೆ.

ನಕ್ಸಲರ ಶರಣಾಗತಿ ನೀತಿಯ ಬಗ್ಗೆ ಮಾತನಾಡಿದ ಅಮಿತ್‌ ಶಾ, “ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುವ ಪ್ರತಿಯೊಂದು ಗ್ರಾಮಕ್ಕೂ 1 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುವುದು. “ನಿಮ್ಮ ಹಳ್ಳಿಯಲ್ಲಿರುವ ಎಲ್ಲಾ ನಕ್ಸಲರಿಗೆ ಶರಣಾಗಲು ಹೇಳಿ” ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

“ಇಂದು, ಶರಣಾದ ನಕ್ಸಲರು ಅಭಿವೃದ್ಧಿಗಾಗಿ ನಮಗೆ ಕಂಪ್ಯೂಟರ್‌ಗಳು ಬೇಕು, ಬಂದೂಕುಗಳಲ್ಲ. ಪೆನ್ನುಗಳು ಬೇಕು, ಐಇಡಿ ಅಥವಾ ಬಾಂಬ್‌ಗಳಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. 2025ರ ಕಳೆದ ಮೂರು ತಿಂಗಳಲ್ಲಿ 521 ನಕ್ಸಲರು ಶರಣಾಗಿದ್ದಾರೆ. ಕಳೆದ ವರ್ಷ 881 ನಕ್ಸಲರು ಶರಣಾಗಿದ್ದರು” ಎಂದು ಅಮಿತ್ ಶಾ ಮಾಹಿತಿ ನೀಡಿದರು.

“ನಕ್ಸಲ್ ಪ್ರೊಪಗಂಡ ನಿಮ್ಮ ಯುವಜನರನ್ನು ಕೊಲ್ಲಲಿದೆ. ನನ್ನ ಸಹೋದರ, ಸಹೋದರಿಯರೇ ಯಾರೂ ಕೊಲ್ಲಲು ಬಯಸುವುದಿಲ್ಲ. ನೀವು ಏನೇ ಕೃತ್ಯಗಳನ್ನು (ಹಿಂಸೆ) ಮಾಡಿದ್ದರೂ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಚಿತಪಡಿಸುತ್ತೇವೆ. ಬಂದೂಕುಗಳನ್ನು ಬಳಸುವ ಮೂಲಕ ಬಸ್ತಾರ್‌ನ ಅಭಿವೃದ್ಧಿ ತಡೆಯಲು ನಿಮಗೆ ಸಾಧ್ಯವಿಲ್ಲ. ಇನ್ನೂ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಬಯಸುವವರನ್ನು ಭದ್ರತಾ ಪಡೆಗಳು ನಿಭಾಯಿಸಲಿವೆ. ಏನೇ ಆಗಲಿ, ಮುಂದಿನ ಮಾರ್ಚ್ ವೇಳೆಗೆ ಇಡೀ ದೇಶ ನಕ್ಸಲ್‌ ಮುಕ್ತವಾಬೇಕು ಎಂದರು.

ಬಸ್ತಾರ್‌ನಲ್ಲಿ ತಾವು ಕಾಣಬಯಸುವ ಅಭಿವೃದ್ಧಿಯ ಕುರಿತು ಮಾತನಾಡಿದ ಶಾ, “ಅಭಿವೃದ್ಧಿ ಎಂದರೆ ಸುಕ್ಮಾದ ಸಬ್-ಇನ್ಸ್‌ಪೆಕ್ಟರ್, ಬಸ್ತಾರ್‌ನ ಬ್ಯಾರಿಸ್ಟರ್, ದಂತೇವಾಡದ ವೈದ್ಯರು ಮತ್ತು ಕಾಂಕೇರ್‌ನ ಕಲೆಕ್ಟರ್. ನಾವು ಕಷ್ಟಪಟ್ಟು ಕೆಲಸ ಮಾಡಿದರೆ ಮತ್ತು ಯಾರಿಗೂ ಹೆದರದಿದ್ದರೆ ಈ ಕನಸುಗಳು ನನಸಾಗುತ್ತವೆ. ನಿಮ್ಮ ಸುರಕ್ಷತೆಯನ್ನು ಈ ಡಬಲ್ ಇಂಜಿನ್ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಅಮಿತ್ ಶಾ ಹೇಳಿದರು.

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...