Homeಮುಖಪುಟ'ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ': ಅಮಿತ್ ಶಾ ಕರೆ

‘ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ, ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’: ಅಮಿತ್ ಶಾ ಕರೆ

- Advertisement -
- Advertisement -

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಶನಿವಾರ (ಏ.5) ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮವಾದ ‘ಬಸ್ತಾರ್ ಪಾಂಡುಮ್‌’ನ ಸಮಾರೋಪ ಸಮಾರಂಭದಲ್ಲಿ ನಕ್ಸಲರನ್ನು ‘ಸಹೋದರರು’ ಎಂದು ಉಲ್ಲೇಖಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ’ ಎಂದು ಕರೆ ನೀಡಿದರು.

“ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶ ಮತ್ತು ಇಡೀ ದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು (ಎಲ್‌ಡಬ್ಲ್ಯುಇ) ನಿರ್ಮೂಲನೆ ಮಾಡುತ್ತೇವೆ” ಎಂಬ ಮಾರ್ಚ್ 2026ರ ಗಡುವನ್ನು ಅವರು ಪುನರುಚ್ಚರಿಸಿದರು.

“ಬಸ್ತಾರ್‌ನಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳು ನಡೆಯುವ ಯುಗ ಕಳೆದುಹೋಗಿದೆ. ಈಗಲೂ, ಶಸ್ತ್ರಸಜ್ಜಿತರು ಮತ್ತು ಅಲ್ಲದವರು ಸೇರಿದಂತೆ ಎಲ್ಲಾ ನಕ್ಸಲ್ ಸಹೋದರರಲ್ಲಿ ನಾನು ವಿನಂತಿಸುತ್ತೇನೆ ‘ನಿಮ್ಮ ಶಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ, ನೀವು ನಮ್ಮವರು. ನಕ್ಸಲರ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ. ಈ ಪ್ರದೇಶ ಅಭಿವೃದ್ಧಿಯನ್ನು ಬಯಸುತ್ತಿದೆ” ಎಂದು ಅಮಿತ್ ಶಾ ಹೇಳಿದರು.

“ಬಸ್ತಾರ್‌ನಲ್ಲಿ ಕಳೆದ 50 ವರ್ಷಗಳಲ್ಲಿ ಮಾಡಲಾಗದ ಅಭಿವೃದ್ಧಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಐದು ವರ್ಷಗಳಲ್ಲಿ ಮಾಡಲು ಬಯಸಿದ್ದಾರೆ. ಆದರೆ, ಬಸ್ತಾರ್‌ನಲ್ಲಿ ಶಾಂತಿ ನೆಲೆಸಿದಾಗ, ಮಕ್ಕಳು ಶಾಲೆಗೆ ಹೋದಾಗ, ನಾವು ನಮ್ಮ ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಾಗ, ಬುಡಕಟ್ಟು ಯುವಕರಲ್ಲಿ ಅಪೌಷ್ಟಿಕತೆ ಕಡಿಮೆಯಾದಾಗ, ಶಿಕ್ಷಣ, ಪ್ರತಿ ಹಳ್ಳಿಯಲ್ಲಿ ಆರೋಗ್ಯ ಸೇವೆಗಳು ದೊರೆತಾಗ, ತಹಸಿಲ್‌ಗಳಲ್ಲಿ ಆಸ್ಪತ್ರೆಗಳಿದ್ದಾಗ ಮತ್ತು ಪ್ರತಿ ಮನೆಗೆ ಪ್ರತಿ ತಿಂಗಳು ಏಳು ಕೆ.ಜಿ ಅಕ್ಕಿ ಸಿಕ್ಕಾಗ, ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಆರೋಗ್ಯ ವಿಮೆ ದೊರೆತಾಗ ಮಾತ್ರ ಇದು ಸಾಧ್ಯ. ಬಸ್ತಾರ್ ನಕ್ಸಲ್‌ ಮುಕ್ತವಾದರೆ ಇದು ಆಗಬಹುದು” ಎಂದಿದ್ದಾರೆ.

ನಕ್ಸಲರ ಶರಣಾಗತಿ ನೀತಿಯ ಬಗ್ಗೆ ಮಾತನಾಡಿದ ಅಮಿತ್‌ ಶಾ, “ನಕ್ಸಲ್ ಮುಕ್ತ ಎಂದು ಘೋಷಿಸಿಕೊಳ್ಳುವ ಪ್ರತಿಯೊಂದು ಗ್ರಾಮಕ್ಕೂ 1 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುವುದು. “ನಿಮ್ಮ ಹಳ್ಳಿಯಲ್ಲಿರುವ ಎಲ್ಲಾ ನಕ್ಸಲರಿಗೆ ಶರಣಾಗಲು ಹೇಳಿ” ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

“ಇಂದು, ಶರಣಾದ ನಕ್ಸಲರು ಅಭಿವೃದ್ಧಿಗಾಗಿ ನಮಗೆ ಕಂಪ್ಯೂಟರ್‌ಗಳು ಬೇಕು, ಬಂದೂಕುಗಳಲ್ಲ. ಪೆನ್ನುಗಳು ಬೇಕು, ಐಇಡಿ ಅಥವಾ ಬಾಂಬ್‌ಗಳಲ್ಲ ಎಂದು ಅರ್ಥಮಾಡಿಕೊಂಡಿದ್ದಾರೆ. 2025ರ ಕಳೆದ ಮೂರು ತಿಂಗಳಲ್ಲಿ 521 ನಕ್ಸಲರು ಶರಣಾಗಿದ್ದಾರೆ. ಕಳೆದ ವರ್ಷ 881 ನಕ್ಸಲರು ಶರಣಾಗಿದ್ದರು” ಎಂದು ಅಮಿತ್ ಶಾ ಮಾಹಿತಿ ನೀಡಿದರು.

“ನಕ್ಸಲ್ ಪ್ರೊಪಗಂಡ ನಿಮ್ಮ ಯುವಜನರನ್ನು ಕೊಲ್ಲಲಿದೆ. ನನ್ನ ಸಹೋದರ, ಸಹೋದರಿಯರೇ ಯಾರೂ ಕೊಲ್ಲಲು ಬಯಸುವುದಿಲ್ಲ. ನೀವು ಏನೇ ಕೃತ್ಯಗಳನ್ನು (ಹಿಂಸೆ) ಮಾಡಿದ್ದರೂ, ನಿಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ. ನಿಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ನಾವು ಖಚಿತಪಡಿಸುತ್ತೇವೆ. ಬಂದೂಕುಗಳನ್ನು ಬಳಸುವ ಮೂಲಕ ಬಸ್ತಾರ್‌ನ ಅಭಿವೃದ್ಧಿ ತಡೆಯಲು ನಿಮಗೆ ಸಾಧ್ಯವಿಲ್ಲ. ಇನ್ನೂ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಬಯಸುವವರನ್ನು ಭದ್ರತಾ ಪಡೆಗಳು ನಿಭಾಯಿಸಲಿವೆ. ಏನೇ ಆಗಲಿ, ಮುಂದಿನ ಮಾರ್ಚ್ ವೇಳೆಗೆ ಇಡೀ ದೇಶ ನಕ್ಸಲ್‌ ಮುಕ್ತವಾಬೇಕು ಎಂದರು.

ಬಸ್ತಾರ್‌ನಲ್ಲಿ ತಾವು ಕಾಣಬಯಸುವ ಅಭಿವೃದ್ಧಿಯ ಕುರಿತು ಮಾತನಾಡಿದ ಶಾ, “ಅಭಿವೃದ್ಧಿ ಎಂದರೆ ಸುಕ್ಮಾದ ಸಬ್-ಇನ್ಸ್‌ಪೆಕ್ಟರ್, ಬಸ್ತಾರ್‌ನ ಬ್ಯಾರಿಸ್ಟರ್, ದಂತೇವಾಡದ ವೈದ್ಯರು ಮತ್ತು ಕಾಂಕೇರ್‌ನ ಕಲೆಕ್ಟರ್. ನಾವು ಕಷ್ಟಪಟ್ಟು ಕೆಲಸ ಮಾಡಿದರೆ ಮತ್ತು ಯಾರಿಗೂ ಹೆದರದಿದ್ದರೆ ಈ ಕನಸುಗಳು ನನಸಾಗುತ್ತವೆ. ನಿಮ್ಮ ಸುರಕ್ಷತೆಯನ್ನು ಈ ಡಬಲ್ ಇಂಜಿನ್ ಸರ್ಕಾರ ನೋಡಿಕೊಳ್ಳುತ್ತದೆ” ಎಂದು ಅಮಿತ್ ಶಾ ಹೇಳಿದರು.

ತನ್ನ ಕಲಾವಿದರ ಪಟ್ಟಿಯಿಂದ ಕುನಾಲ್‌ ಕಾಮ್ರಾರನ್ನು ಹೊರಗಿಟ್ಟ ಬುಕ್‌ಮೈಶೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...