Homeಮುಖಪುಟಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

ಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ನೋಟು ರದ್ದತಿ, ಜಿಎಸ್‌ಟಿ ಜಾರಿ ನಂತರದಿಂದ ದೇಶದ ಜಿಡಿಪಿ ಇಳಿಮುಖದಲ್ಲಿ ಸಾಗುತ್ತಿದೆ. ಪ್ರಧಾನಿ ಮೋದಿಯವರು ಮೊದಲ ಬಾರಿ ಆಯ್ಕೆಯಾದಾಗ 5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಈವರೆಗೆ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಲೆಕ್ಕಕೊಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಕುತು ಮಾತನಾಡಿದ ಅವರು, ಹೊಸ ಉದ್ಯೋಗ ಸೃಷ್ಟಿಯ ಕತೆ ಇರಲಿ, ಕೋಟ್ಯಂತರ ಮಂದಿ ಇದ್ದ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಒಮ್ಮೆ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ. ಅಲ್ಲಿನ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುವ ಹಂತದಲ್ಲಿವೆ. ದೇಶದ ಆರ್ಥಿಕ ಸ್ಥಿತಿ ಪ್ರಗತಿಯ ಹಾದಿಯಲ್ಲಿದ್ದರೆ ಉದ್ದಿಮೆಗಳೇಕೆ ಬಾಗಿಲು ಮುಚ್ಚುತ್ತವೆ? ನಿನ್ನೆ ಬಿಜೆಪಿ ಸಚಿವರೊಬ್ಬರು ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬದಲಾಗಿದೆ ಅಂದಿದ್ದರು. ಹಾಗಾದರೆ ನಮ್ಮ‌ ರಾಜ್ಯದ ತೆರಿಗೆ ಪಾಲು, ಜಿಎಸ್‌ಟಿ ಪರಿಹಾರ, ವಿಶೇಷ ಅನುದಾನಗಳಿಗೆ ಕೇಂದ್ರ ಕತ್ತರಿ ಹಾಕಿರುವುದು ಯಾಕೆ? ದೇಶದ ಜಿಡಿಪಿ ಕುಂಟುತ್ತಾ ಸಾಗುತ್ತಿರುವಾಗ ಆರ್ಥಿಕತೆ ಹೇಗೆ ಬೆಳೆಯುತ್ತೆ? ಎಂದು ಪ್ರಶ್ನಿಸಿದ್ದಾರೆ.

2013-14 ರಲ್ಲಿ ರೂ.1,04,000 ಕೋಟಿಯಿದ್ದ ಬಜೆಟ್ ಗಾತ್ರ 2018-19ಕ್ಕೆ ರೂ.2,09,000 ಕೋಟಿಗೆ ಏರಿಕೆಯಾಗಿತ್ತು. 2018-19ರಲ್ಲಿ ನಮ್ಮ‌ ಸರ್ಕಾರ ರೂ.41,000 ಕೋಟಿ ಸಾಲ ಮಾಡಿತ್ತು, ಈಗಿನ ಸರ್ಕಾರ ರೂ.52,918 ಕೋಟಿ ಸಾಲ ಮಾಡುತ್ತಿದೆ. ಈಗ ಹೇಳಲಿ ಸಾಲ ಮಾಡಿ ಹೋಳಿಗೆ ತಿನ್ನುತ್ತಿರೋದು ಯಾರು ಅಂತ? 2019-20ನೇ ಸಾಲಿಗೆ ಕೇಂದ್ರದ ಅನುದಾನ ರೂ.19,840 ಕೋಟಿ ಬರಬೇಕಿತ್ತು, ಆದರೆ ಅದು ರೂ.15,444 ಕೋಟಿಗೆ ಇಳಿದಿದೆ. 15ನೇ ಹಣಕಾಸು ಆಯೋಗದ ವರದಿ ಪ್ರಕಾರ 2023-24ಕ್ಕೆ ಕೇಂದ್ರದಿಂದ ಬರುವ ಅನುದಾನ ರೂ.16,705 ಕೋಟಿ ಆಗಲಿದೆ. ವರ್ಷ ಕಳೆದಂತೆ ಈ ಅನುದಾನದ ಪ್ರಮಾಣ ನಮ್ಮ ರಾಜ್ಯಕ್ಕೆ ಮಾತ್ರ ಕಡಿಮೆಯಾಗುವುದು ಯಾಕೆ ಎಂದಿದ್ದಾರೆ.

2023-24 ರ ವೇಳೆಗೆ ರಾಜಸ್ವ ಆದಾಯ ರೂ.2,07,230 ಕೋಟಿ ಇರಲಿದ್ದು, ರಾಜಸ್ವ ಖರ್ಚು ರೂ. 2,54,062 ಕೋಟಿ ತಲುಪಲಿದೆ. ಇದರಿಂದ ರೂ.46,832 ಕೋಟಿ ರಾಜಸ್ವ ಕೊರತೆ ಎದುರಾಗಲಿದೆ. ಹೀಗಾದಾಗ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹೇಗೆ ಸಾಧ್ಯ? ಇದರಿಂದ ಸರ್ಕಾರ ಇನ್ನಷ್ಟು ಸಾಲದ ಮೊರೆ ಹೋಗಬೇಕಾಗುತ್ತದೆ. ಪ್ರಸಕ್ತ ಸಾಲಿನ ರಾಜಸ್ವ ಆದಾಯ ರೂ.1,77,255 ಕೋಟಿ ಇದೆ, ಇದರಲ್ಲಿ ಬದ್ಧತಾ ಖರ್ಚು ರೂ.1,55,191 ಕೋಟಿ. ಅಂದರೆ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ರೂ.22,064 ಕೋಟಿ ಹಣ ಉಳಿಯುತ್ತೆ. ಹೀಗಾದರೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ಎಲ್ಲಿಂದ ತರುತ್ತೆ ಎಂದು ಕೇಳಿದರು.

15ನೇ ಹಣಕಾಸು ಆಯೋಗವು ಜನಸಂಖ್ಯೆ ಆಧಾರದ ಮೇಲೆ ರಾಜ್ಯಗಳ ಪಾಲು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಕರ್ನಾಟಕ ಸರಿಯಾಗಿ ನಿಭಾಯಿಸಿರುವುದಕ್ಕೆ ಬೋನಸ್ ಕೊಡುವುದರ ಬದಲು ನಮ್ಮ ಪಾಲು ಕಡಿತಗೊಳಿಸಿ ಬರೆ ಹಾಕಿದ್ದಾರೆ. ಇದ್ಯಾವ ರೀತಿಯ ನ್ಯಾಯ? ಇನ್ನೂ ಕಾಲ ಮಿಂಚಿಲ್ಲ, ನವೆಂಬರ್ 20ಕ್ಕೆ ಹಣಕಾಸು ಆಯೋಗ ತನ್ನ ಅಂತಿಮ ವರದಿ ನೀಡಲಿದೆ, ಅಷ್ಟರೊಳಗೆ ಪ್ರಧಾನಿಗಳು, ಹಣಕಾಸು ಸಚಿವರ ಜೊತೆ ಮಾತನಾಡಿ ಉಳಿದ 4 ವರ್ಷಗಳಿಗಾದ್ರೂ ನಮಗೆ ನ್ಯಾಯಯುತ ಪಾಲು ನೀಡುವಂತೆ ಮನವರಿಕೆ ಮಾಡಬೇಕು. ರಾಜ್ಯದ ಬಿಜೆಪಿ ಸಂಸದರು, ಸಚಿವರು, ನಾಯಕರುಗಳು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...