Homeಮುಖಪುಟಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

ಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ನೋಟು ರದ್ದತಿ, ಜಿಎಸ್‌ಟಿ ಜಾರಿ ನಂತರದಿಂದ ದೇಶದ ಜಿಡಿಪಿ ಇಳಿಮುಖದಲ್ಲಿ ಸಾಗುತ್ತಿದೆ. ಪ್ರಧಾನಿ ಮೋದಿಯವರು ಮೊದಲ ಬಾರಿ ಆಯ್ಕೆಯಾದಾಗ 5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಈವರೆಗೆ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಲೆಕ್ಕಕೊಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಕುತು ಮಾತನಾಡಿದ ಅವರು, ಹೊಸ ಉದ್ಯೋಗ ಸೃಷ್ಟಿಯ ಕತೆ ಇರಲಿ, ಕೋಟ್ಯಂತರ ಮಂದಿ ಇದ್ದ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಒಮ್ಮೆ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ. ಅಲ್ಲಿನ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುವ ಹಂತದಲ್ಲಿವೆ. ದೇಶದ ಆರ್ಥಿಕ ಸ್ಥಿತಿ ಪ್ರಗತಿಯ ಹಾದಿಯಲ್ಲಿದ್ದರೆ ಉದ್ದಿಮೆಗಳೇಕೆ ಬಾಗಿಲು ಮುಚ್ಚುತ್ತವೆ? ನಿನ್ನೆ ಬಿಜೆಪಿ ಸಚಿವರೊಬ್ಬರು ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬದಲಾಗಿದೆ ಅಂದಿದ್ದರು. ಹಾಗಾದರೆ ನಮ್ಮ‌ ರಾಜ್ಯದ ತೆರಿಗೆ ಪಾಲು, ಜಿಎಸ್‌ಟಿ ಪರಿಹಾರ, ವಿಶೇಷ ಅನುದಾನಗಳಿಗೆ ಕೇಂದ್ರ ಕತ್ತರಿ ಹಾಕಿರುವುದು ಯಾಕೆ? ದೇಶದ ಜಿಡಿಪಿ ಕುಂಟುತ್ತಾ ಸಾಗುತ್ತಿರುವಾಗ ಆರ್ಥಿಕತೆ ಹೇಗೆ ಬೆಳೆಯುತ್ತೆ? ಎಂದು ಪ್ರಶ್ನಿಸಿದ್ದಾರೆ.

2013-14 ರಲ್ಲಿ ರೂ.1,04,000 ಕೋಟಿಯಿದ್ದ ಬಜೆಟ್ ಗಾತ್ರ 2018-19ಕ್ಕೆ ರೂ.2,09,000 ಕೋಟಿಗೆ ಏರಿಕೆಯಾಗಿತ್ತು. 2018-19ರಲ್ಲಿ ನಮ್ಮ‌ ಸರ್ಕಾರ ರೂ.41,000 ಕೋಟಿ ಸಾಲ ಮಾಡಿತ್ತು, ಈಗಿನ ಸರ್ಕಾರ ರೂ.52,918 ಕೋಟಿ ಸಾಲ ಮಾಡುತ್ತಿದೆ. ಈಗ ಹೇಳಲಿ ಸಾಲ ಮಾಡಿ ಹೋಳಿಗೆ ತಿನ್ನುತ್ತಿರೋದು ಯಾರು ಅಂತ? 2019-20ನೇ ಸಾಲಿಗೆ ಕೇಂದ್ರದ ಅನುದಾನ ರೂ.19,840 ಕೋಟಿ ಬರಬೇಕಿತ್ತು, ಆದರೆ ಅದು ರೂ.15,444 ಕೋಟಿಗೆ ಇಳಿದಿದೆ. 15ನೇ ಹಣಕಾಸು ಆಯೋಗದ ವರದಿ ಪ್ರಕಾರ 2023-24ಕ್ಕೆ ಕೇಂದ್ರದಿಂದ ಬರುವ ಅನುದಾನ ರೂ.16,705 ಕೋಟಿ ಆಗಲಿದೆ. ವರ್ಷ ಕಳೆದಂತೆ ಈ ಅನುದಾನದ ಪ್ರಮಾಣ ನಮ್ಮ ರಾಜ್ಯಕ್ಕೆ ಮಾತ್ರ ಕಡಿಮೆಯಾಗುವುದು ಯಾಕೆ ಎಂದಿದ್ದಾರೆ.

2023-24 ರ ವೇಳೆಗೆ ರಾಜಸ್ವ ಆದಾಯ ರೂ.2,07,230 ಕೋಟಿ ಇರಲಿದ್ದು, ರಾಜಸ್ವ ಖರ್ಚು ರೂ. 2,54,062 ಕೋಟಿ ತಲುಪಲಿದೆ. ಇದರಿಂದ ರೂ.46,832 ಕೋಟಿ ರಾಜಸ್ವ ಕೊರತೆ ಎದುರಾಗಲಿದೆ. ಹೀಗಾದಾಗ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹೇಗೆ ಸಾಧ್ಯ? ಇದರಿಂದ ಸರ್ಕಾರ ಇನ್ನಷ್ಟು ಸಾಲದ ಮೊರೆ ಹೋಗಬೇಕಾಗುತ್ತದೆ. ಪ್ರಸಕ್ತ ಸಾಲಿನ ರಾಜಸ್ವ ಆದಾಯ ರೂ.1,77,255 ಕೋಟಿ ಇದೆ, ಇದರಲ್ಲಿ ಬದ್ಧತಾ ಖರ್ಚು ರೂ.1,55,191 ಕೋಟಿ. ಅಂದರೆ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ರೂ.22,064 ಕೋಟಿ ಹಣ ಉಳಿಯುತ್ತೆ. ಹೀಗಾದರೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ಎಲ್ಲಿಂದ ತರುತ್ತೆ ಎಂದು ಕೇಳಿದರು.

15ನೇ ಹಣಕಾಸು ಆಯೋಗವು ಜನಸಂಖ್ಯೆ ಆಧಾರದ ಮೇಲೆ ರಾಜ್ಯಗಳ ಪಾಲು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಕರ್ನಾಟಕ ಸರಿಯಾಗಿ ನಿಭಾಯಿಸಿರುವುದಕ್ಕೆ ಬೋನಸ್ ಕೊಡುವುದರ ಬದಲು ನಮ್ಮ ಪಾಲು ಕಡಿತಗೊಳಿಸಿ ಬರೆ ಹಾಕಿದ್ದಾರೆ. ಇದ್ಯಾವ ರೀತಿಯ ನ್ಯಾಯ? ಇನ್ನೂ ಕಾಲ ಮಿಂಚಿಲ್ಲ, ನವೆಂಬರ್ 20ಕ್ಕೆ ಹಣಕಾಸು ಆಯೋಗ ತನ್ನ ಅಂತಿಮ ವರದಿ ನೀಡಲಿದೆ, ಅಷ್ಟರೊಳಗೆ ಪ್ರಧಾನಿಗಳು, ಹಣಕಾಸು ಸಚಿವರ ಜೊತೆ ಮಾತನಾಡಿ ಉಳಿದ 4 ವರ್ಷಗಳಿಗಾದ್ರೂ ನಮಗೆ ನ್ಯಾಯಯುತ ಪಾಲು ನೀಡುವಂತೆ ಮನವರಿಕೆ ಮಾಡಬೇಕು. ರಾಜ್ಯದ ಬಿಜೆಪಿ ಸಂಸದರು, ಸಚಿವರು, ನಾಯಕರುಗಳು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...