Homeಮುಖಪುಟಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

ಮೋದಿ ಸೃಷ್ಟಿಸಿದ 10ಕೋಟಿ ಉದ್ಯೋಗಗಳು ಎಲ್ಲಿವೆ? ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ನೋಟು ರದ್ದತಿ, ಜಿಎಸ್‌ಟಿ ಜಾರಿ ನಂತರದಿಂದ ದೇಶದ ಜಿಡಿಪಿ ಇಳಿಮುಖದಲ್ಲಿ ಸಾಗುತ್ತಿದೆ. ಪ್ರಧಾನಿ ಮೋದಿಯವರು ಮೊದಲ ಬಾರಿ ಆಯ್ಕೆಯಾದಾಗ 5 ವರ್ಷಗಳಲ್ಲಿ 10 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಅಂದಿದ್ದರು. ಈವರೆಗೆ ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ಲೆಕ್ಕಕೊಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಧಿವೇಶನದಲ್ಲಿ ಬಜೆಟ್‌ ಮೇಲಿನ ಚರ್ಚೆಯ ಕುತು ಮಾತನಾಡಿದ ಅವರು, ಹೊಸ ಉದ್ಯೋಗ ಸೃಷ್ಟಿಯ ಕತೆ ಇರಲಿ, ಕೋಟ್ಯಂತರ ಮಂದಿ ಇದ್ದ ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಒಮ್ಮೆ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ. ಅಲ್ಲಿನ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುವ ಹಂತದಲ್ಲಿವೆ. ದೇಶದ ಆರ್ಥಿಕ ಸ್ಥಿತಿ ಪ್ರಗತಿಯ ಹಾದಿಯಲ್ಲಿದ್ದರೆ ಉದ್ದಿಮೆಗಳೇಕೆ ಬಾಗಿಲು ಮುಚ್ಚುತ್ತವೆ? ನಿನ್ನೆ ಬಿಜೆಪಿ ಸಚಿವರೊಬ್ಬರು ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬದಲಾಗಿದೆ ಅಂದಿದ್ದರು. ಹಾಗಾದರೆ ನಮ್ಮ‌ ರಾಜ್ಯದ ತೆರಿಗೆ ಪಾಲು, ಜಿಎಸ್‌ಟಿ ಪರಿಹಾರ, ವಿಶೇಷ ಅನುದಾನಗಳಿಗೆ ಕೇಂದ್ರ ಕತ್ತರಿ ಹಾಕಿರುವುದು ಯಾಕೆ? ದೇಶದ ಜಿಡಿಪಿ ಕುಂಟುತ್ತಾ ಸಾಗುತ್ತಿರುವಾಗ ಆರ್ಥಿಕತೆ ಹೇಗೆ ಬೆಳೆಯುತ್ತೆ? ಎಂದು ಪ್ರಶ್ನಿಸಿದ್ದಾರೆ.

2013-14 ರಲ್ಲಿ ರೂ.1,04,000 ಕೋಟಿಯಿದ್ದ ಬಜೆಟ್ ಗಾತ್ರ 2018-19ಕ್ಕೆ ರೂ.2,09,000 ಕೋಟಿಗೆ ಏರಿಕೆಯಾಗಿತ್ತು. 2018-19ರಲ್ಲಿ ನಮ್ಮ‌ ಸರ್ಕಾರ ರೂ.41,000 ಕೋಟಿ ಸಾಲ ಮಾಡಿತ್ತು, ಈಗಿನ ಸರ್ಕಾರ ರೂ.52,918 ಕೋಟಿ ಸಾಲ ಮಾಡುತ್ತಿದೆ. ಈಗ ಹೇಳಲಿ ಸಾಲ ಮಾಡಿ ಹೋಳಿಗೆ ತಿನ್ನುತ್ತಿರೋದು ಯಾರು ಅಂತ? 2019-20ನೇ ಸಾಲಿಗೆ ಕೇಂದ್ರದ ಅನುದಾನ ರೂ.19,840 ಕೋಟಿ ಬರಬೇಕಿತ್ತು, ಆದರೆ ಅದು ರೂ.15,444 ಕೋಟಿಗೆ ಇಳಿದಿದೆ. 15ನೇ ಹಣಕಾಸು ಆಯೋಗದ ವರದಿ ಪ್ರಕಾರ 2023-24ಕ್ಕೆ ಕೇಂದ್ರದಿಂದ ಬರುವ ಅನುದಾನ ರೂ.16,705 ಕೋಟಿ ಆಗಲಿದೆ. ವರ್ಷ ಕಳೆದಂತೆ ಈ ಅನುದಾನದ ಪ್ರಮಾಣ ನಮ್ಮ ರಾಜ್ಯಕ್ಕೆ ಮಾತ್ರ ಕಡಿಮೆಯಾಗುವುದು ಯಾಕೆ ಎಂದಿದ್ದಾರೆ.

2023-24 ರ ವೇಳೆಗೆ ರಾಜಸ್ವ ಆದಾಯ ರೂ.2,07,230 ಕೋಟಿ ಇರಲಿದ್ದು, ರಾಜಸ್ವ ಖರ್ಚು ರೂ. 2,54,062 ಕೋಟಿ ತಲುಪಲಿದೆ. ಇದರಿಂದ ರೂ.46,832 ಕೋಟಿ ರಾಜಸ್ವ ಕೊರತೆ ಎದುರಾಗಲಿದೆ. ಹೀಗಾದಾಗ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹೇಗೆ ಸಾಧ್ಯ? ಇದರಿಂದ ಸರ್ಕಾರ ಇನ್ನಷ್ಟು ಸಾಲದ ಮೊರೆ ಹೋಗಬೇಕಾಗುತ್ತದೆ. ಪ್ರಸಕ್ತ ಸಾಲಿನ ರಾಜಸ್ವ ಆದಾಯ ರೂ.1,77,255 ಕೋಟಿ ಇದೆ, ಇದರಲ್ಲಿ ಬದ್ಧತಾ ಖರ್ಚು ರೂ.1,55,191 ಕೋಟಿ. ಅಂದರೆ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ರೂ.22,064 ಕೋಟಿ ಹಣ ಉಳಿಯುತ್ತೆ. ಹೀಗಾದರೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸರ್ಕಾರ ಹಣ ಎಲ್ಲಿಂದ ತರುತ್ತೆ ಎಂದು ಕೇಳಿದರು.

15ನೇ ಹಣಕಾಸು ಆಯೋಗವು ಜನಸಂಖ್ಯೆ ಆಧಾರದ ಮೇಲೆ ರಾಜ್ಯಗಳ ಪಾಲು ಹಂಚಿಕೆ ಮಾಡಿದೆ. ಜನಸಂಖ್ಯಾ ನಿಯಂತ್ರಣವನ್ನು ಕರ್ನಾಟಕ ಸರಿಯಾಗಿ ನಿಭಾಯಿಸಿರುವುದಕ್ಕೆ ಬೋನಸ್ ಕೊಡುವುದರ ಬದಲು ನಮ್ಮ ಪಾಲು ಕಡಿತಗೊಳಿಸಿ ಬರೆ ಹಾಕಿದ್ದಾರೆ. ಇದ್ಯಾವ ರೀತಿಯ ನ್ಯಾಯ? ಇನ್ನೂ ಕಾಲ ಮಿಂಚಿಲ್ಲ, ನವೆಂಬರ್ 20ಕ್ಕೆ ಹಣಕಾಸು ಆಯೋಗ ತನ್ನ ಅಂತಿಮ ವರದಿ ನೀಡಲಿದೆ, ಅಷ್ಟರೊಳಗೆ ಪ್ರಧಾನಿಗಳು, ಹಣಕಾಸು ಸಚಿವರ ಜೊತೆ ಮಾತನಾಡಿ ಉಳಿದ 4 ವರ್ಷಗಳಿಗಾದ್ರೂ ನಮಗೆ ನ್ಯಾಯಯುತ ಪಾಲು ನೀಡುವಂತೆ ಮನವರಿಕೆ ಮಾಡಬೇಕು. ರಾಜ್ಯದ ಬಿಜೆಪಿ ಸಂಸದರು, ಸಚಿವರು, ನಾಯಕರುಗಳು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...