Homeಕರ್ನಾಟಕಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಸುದ್ದಿ ಮಾಡಿದ ವಿಚಾರ ಏನೆಂದರೆ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವರು ಯಾರು ಎಂಬುದು? ಆರಂಭದಿಂದಲೂ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಈ ವಿಚಾರದಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಗೆ ಇಬ್ಬರನ್ನೂ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ನಡುವೆ ಇದೀಗ ಆರ್. ಅಶೋಕ್ ಅವರನ್ನೂ ಬೆಂಗಳೂರಿನಲ್ಲಿ ಕೊರೊನಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ನಡುವೆ ಬೆಂಗಳೂರನ್ನು 7 ವಿಭಾಗಗಳಾಗಿ ವಿಂಗಡಿಸಿ ಕೊರೊನಾ ನಿಯಂತ್ರಣಕ್ಕಾಗಿ 8 ಸಚಿವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿ ಓರ್ವ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಟ್ಟದ ಮುತುವರ್ಜಿ ವಹಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ.

ಆದರೆ, ಇದೇ ಮುತುವರ್ಜಿ ಇತರೆ ಜಿಲ್ಲೆಗಳ ಮೇಲೆ ಏಕಿಲ್ಲ? ಬೆಂಗಳೂರಿನ ಕೊರೊನಾ ಉಸ್ತುವಾರಿಗೆ ಇರುವ ಪೈಪೋಟಿ ಇತರೆ ಜಿಲ್ಲೆಗಳಿಗೆ ಏಕಿಲ್ಲ? ಅಸಲಿಗೆ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮಾಡುತ್ತಿರುವ ಕೆಲಸವಾದರೂ ಏನು? ಉಸ್ತುವಾರಿ ಸಚಿವರುಗಳಿಗೆ ಅನ್ಯ ಜಿಲ್ಲೆಗಳ ಮೇಲೆ ಏಕಿಷ್ಟು ಅಸಡ್ಡೆ? ಯಾವ ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಗೊತ್ತೇ?

ಜಿಲ್ಲಾ ಉಸ್ತುವಾರಿಗಳೇ ಎಲ್ಲಿದ್ದೀರಿ?

ಕರ್ನಾಟಕದಲ್ಲಿ ಈವರೆಗೆ 51,422 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಾರಕ ಸೋಂಕಿಗೆ 1032 ಜನ ಮೃತಪಟ್ಟಿದ್ದಾರೆ. ಕಳೆದ ಎರಡು ವಾರದಿಂದ ಪ್ರತಿದಿನ ಸರಾಸರಿಯಾಗಿ 2,500 ಜನ ರಾಜ್ಯದಲ್ಲಿ ಈ ಮಾರಣಾಂತಿಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ ನಿಜ. ಆದರೆ, ಬೆಂಗಳೂರನ್ನು ಹೊರತುಪಡಿಸಿಯೂ ಧಾರವಾಡ, ದಕ್ಷಿಣ ಕನ್ನಡ, ಗದಗ, ರಾಯಚೂರು, ಬೀದರ್, ಕಲ್ಬುರ್ಗಿ, ಮೈಸೂರು, ಚಿತ್ರದುರ್ಗ, ಮೈಸೂರು, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಜಿಲ್ಲೆಗಳಲ್ಲಿ ಒಂದು ದಿನಕ್ಕೆ ಸರಾಸರಿಯಾಗಿ ಕನಿಷ್ಟ 100 ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಈ ಸಂಖ್ಯೆ ಎರಡು ಪಟ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಆದರೆ, ಈ ಯಾವ ಜಿಲ್ಲೆಗಳಲ್ಲೂ ಕೊರೊನಾ ರೋಗಿಗಳನ್ನು ಆರೈಕೆ ಮಾಡಲು ಸೂಕ್ತ ಆಸ್ಪತ್ರೆಗಳಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆಂಬ್ಯುಲೆನ್ಸ್ ಹಾಗೂ ನುರಿತ ವೈದ್ಯರ ಸಂಖ್ಯೆ ಕೂಡ ಜನರ ಅನುಪಾತಕ್ಕೆ ಪೂರಕವಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಶೇ.50ರಷ್ಟು ಹಾಸಿಗೆಯನ್ನು ಮೀಸಲಿಡಬೇಕು ಎಂದು ಸರ್ಕಾರ ಆದೇಶಿಸಿದೆಯಾದರೂ ಈ ಕುರಿತು ಸ್ಪಷ್ಟ ಮಾರ್ಗಸೂಚಿ ಇಲ್ಲ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಂತೂ ಮಾನವೀಯತೆಯೇ ಇಲ್ಲವೇನೋ ಎಂಬಂತಾಗಿದೆ ಪರಿಸ್ಥಿತಿ.

ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲಾಡಳಿತವೂ ಪ್ರತಿದಿನ ಹೀಗೆ ಇಲ್ಲಗಳ ನಡುವೆಯೇ ದಿನ ಕಳೆಯುತ್ತಿವೆ. ಒಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ಮತ್ತೊಂದೆಡೆ ಅವರ ಚಿಕಿತ್ಸೆಗೆ ಸೂಕ್ತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ. ಆಸ್ಪತ್ರೆ ಕಡೆ ಬರಲು ಜನ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣಕ್ಕೆ ಈಗ ಸೋಂಕು ಸಾಮುದಾಯಿಕವಾಗಿ ಹರಡುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ.

ಹಾಗಾದರೆ, ಜಿಲ್ಲಾ ಭಾಗಗಳಲ್ಲಿ ಜನರಲ್ಲಿ ಆವರಿಸಿರುವ ಈ ಭಯವನ್ನು ಹೋಗಲಾಡಿಸಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸುವ ಕರ್ತವ್ಯ ಯಾರದ್ದು? ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರುಗಳುಗಳಿಗೆ ಈ ಕೂಗು ಕೇಳುತ್ತಿದೆಯೇ?

ಅಸಲಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಳೆದ ಏಪ್ರಿಲ್ 09 ರಂದು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದರು. ಯಾವುದೇ ಜಿಲ್ಲೆಯ ಮೂಲಭೂತ ಸಮಸ್ಯೆಯನ್ನು ಆಲಿಸುವುದು ಮತ್ತು ಆ ಸಮಸ್ಯೆಯ ಪರಿಹಾರಕ್ಕಾಗಿ ಶ್ರಮಿಸುವುದು ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ. ಆದರೆ, ಕೊರೊನಾ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳು ಸಚಿವರ ಕೆಲಸ ಹೆಚ್ಚಾಗಿತ್ತು. ಇವರ ತಮ್ಮ ಕರ್ತವ್ಯ ನಿಭಾಯಿಸಿದರೇ?

ಶೂನ್ಯ ದಾಖಲೆ ಬರೆದ ಉಸ್ತುವಾರಿ ಸಚಿವರುಗಳು

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಭೀಕರ ದಿನಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಕೈಜೋಡಿಸಿ ಸೋಂಕು ನಿವಾರಣೆಗಾಗಿ ಉಸ್ತುವಾರಿ ಸಚಿವರು ಹೋರಾಡಬೇಕಿತ್ತು. ತಮ್ಮ ಜಿಲ್ಲೆಗಳಿಗೆ ಅಗತ್ಯವಾದ ವೆಂಟಿಲೇಟರ್, ವೈದ್ಯರಿಗೆ ಪಿಪಿಇ ಕಿಟ್, ಶೀಘ್ರದಲ್ಲಿ ವರದಿ ನೀಡುವ ಸಲುವಾಗಿ ಕೋವಿಡ್ ಲ್ಯಾಬ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‍ಗಳನ್ನು ಒದಗಿಸುವುದು, ಇದಕ್ಕಾಗಿ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸುವುದು ಅವರ ಬದ್ಧತೆಯಾಗಬೇಕಿತ್ತು.

ಆದರೆ, ಯಾವ ಜಿಲ್ಲಾ ಉಸ್ತುವಾರಿ ಸಚಿವರೂ ಕನಿಷ್ಟ ತಮ್ಮ ಕ್ಷೇತ್ರಕ್ಕೆ ಹೋಗಿ ಜನರ ಸಮಸ್ಯೆ ಆಲಿಸಿದ, ಕೊರೋನಾ ಪರಿಸ್ಥಿತಿಯ ಮೇಲುಸ್ತುವಾರಿ ಮಾಡಿದ ಉದಾಹರಣೆ ನಮ್ಮ ಮುಂದೆ ಇಲ್ಲ ಎಂಬುದೇ ನಿಜ.

ಅಸಲಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಆದರೆ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅವರು ತಮ್ಮ ಉಸ್ತುವಾರಿ ಜಿಲ್ಲೆಗೆ ತೆರಳಿ ಕೊರೊನಾ ಮೇಲುಸ್ತುವಾರಿ ನೋಡಿದ್ದು ಕೇವಲ ಒಂದು ಬಾರಿ ಮಾತ್ರ. ಈ ವೇಳೆಯೂ ಚನ್ನಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇನ್ನೂ ಚಿತ್ರದುರ್ಗದ ಉಸ್ತುವಾರಿಯನ್ನಾಗಿ ಶ್ರೀರಾಮುಲು ಹಾಗೂ ಚಿಕ್ಕಬಳ್ಳಾಪುರದ ಉಸ್ತುವಾರಿಯಾಗಿ ಕೆ. ಸುಧಾಕರ್ ಅವರನ್ನು ನೇಮಿಸಲಾಗಿದೆ. ಆದರೆ, ಬೆಂಗಳೂರು ಉಸ್ತುವಾರಿಗಾಗಿ ಪೈಪೋಟಿಗೆ ಬಿದ್ದು ಹೋರಾಡಿದ ಇವರು ತಮ್ಮ ಜಿಲ್ಲೆಯ ಬಗ್ಗೆ ಎಷ್ಟರ ಮಟ್ಟಿಗೆ ಆಸಕ್ತಿ ತೋರಿದರು ಎಂಬುದು ದೇವರಿಗೆ ಪ್ರೀತಿ.

ಅಶ್ವತ್ಥ್ ನಾರಾಯಣ್, ಶ್ರೀರಾಮುಲು, ಸುಧಾಕರ್, ಆರ್. ಅಶೋಕ್ ಹೊರತಾಗಿಯೂ ಸಹ ಯಾವ ಸಚಿವರೂಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ಹೊರತು ಬೇರೆ ಯಾವ ಜಿಲ್ಲೆಯೂ ಗಮನ ಸೆಳೆದಿಲ್ಲ ಎಂಬುದೇ ಸತ್ಯ. ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಚಿವರುಗಳಿಗೆ ಬೆಂಗಳೂರಿನ ಮೇಲೆ ಏಕಿಷ್ಟು ಮೋಹ?

ಬೆಂಗಳೂರಿನ ಮೇಲೆ ಮಾತ್ರ ಸಚಿವರಿಗೆ ಏಕಿಷ್ಟು ಮೋಹ? ನಗರದ ಉಸ್ತುವಾರಿಗೆ ಮಾತ್ರ ಏಕೆ ಇಷ್ಟು ಹೋರಾಟ, ಮೇಲಾಟ? ಎಂಬುದು ಪ್ರಶ್ನೆ.

ಅಸಲಿಗೆ ಕೊರೋನಾ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಹಣ ಓಡಾಡುತ್ತಿದೆ. ವೆಂಟಿಲೇಟರ್‍ನಿಂದ ಹಿಡಿದು ಪಿಪಿಇ ಕಿಟ್ ಖರೀದಿವರೆಗೆ ಎಲ್ಲ ವ್ಯವಹಾರಗಳೂ ಬೆಂಗಳೂರಿನಿಂದಲೇ, ಸಚಿವರ ಕಣ್ಣಳತೆಯಲ್ಲೇ ನಡೆಯುತ್ತಿದೆ. 250ರೂ ಬೆಲೆಯ ಸ್ಯಾನಿಟೈಸರ್‍ಗೆ 600ರೂ, 2500 ರೂ ಬೆಲೆಯ ಧರ್ಮಲ್ ಸ್ಕ್ರೀನಿಂಗ್ ಮೆಷಿನ್‍ಗೆ 12,000 ರೂ, 200 ರೂ ಗ್ಲೌಸ್‍ಗೆ 500 ರೂ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳ ಖರೀದಿಯಲ್ಲೂ ದುಪ್ಪಟ್ಟು ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಖರೀದಿಯ ಹೆಸರಿನಲ್ಲಿ ಸುಮಾರು 25,000 ಕೋಟಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಇದೇ ಕಾರಣಕ್ಕೆ ಬೆಂಗಳೂರಿನ ಉಸ್ತುವಾರಿಗಾಗಿ ಆರ್. ಅಶೋಕ್, ಶ್ರೀರಾಮುಲು ಹಾಗೂ ಕೆ. ಸುಧಾಕರ್ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕೂಡ ಎತ್ತಲಾಗಿದೆ. ಆದರೆ, ವಿಪರ್ಯಾಸ ನೋಡಿ ಬೆಂಗಳೂರಿನ ಮೇಲೆ ನಮ್ಮ ಸಚಿವರುಗಳು ಇಷ್ಟು ಕಾಳಜಿ ವಹಿಸಿಯೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ತಮಗೆ ಕಳಪೆ ಚಿಕಿತ್ಸೆ ಸಿಗುತ್ತಿದೆ ಎಂದು ವಿಡಿಯೋ ಮಾಡಿ ಸಾಮಾನ್ಯ ಜನ ಗೋಳಾಡುವಂತಾಗಿದೆ. ತುರ್ತು ಚಿಕಿತ್ಸೆ ಇಲ್ಲದೆ ಬೀದಿಯಲ್ಲೇ ಹೆಣವಾಗುತ್ತಿರುವ ವರದಿಗಳು ಬಂದಿವೆ. ಭಯಭೀತರಾಗಿ ಜನ ತಮ್ಮ ಊರುಗಳಿಗೆ ಹಿಂತಿರುಗುತ್ತಿದ್ದಾರೆ.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ಅಸಡ್ಡೆಯಿಂದಾಗಿ ಬೆಂಗಳೂರಿನ ಕೊರೊನಾ ಪರಿಸ್ಥಿತಿ ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಆವರಿಸಬಾರದು. ಅದಕ್ಕೂ ಮುನ್ನ ಸರ್ಕಾರ ಮತ್ತು ಸಚಿವರುಗಳು ಎಚ್ಚೆತ್ತುಕೊಳ್ಳಲಿ ಎಂಬುದೇ ಜನಸಾಮಾನ್ಯರ ಆಶಯ.


ಇದನ್ನು ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...