Homeಕರ್ನಾಟಕಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಉಸ್ತುವಾರಿ ಸಚಿವರುಗಳೇ ಎಲ್ಲಿದ್ದೀರಿ? ಇತ್ತ ಸ್ವಲ್ಪ ಗಮನಿಸಿ ಪ್ಲೀಸ್!

ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಸುದ್ದಿ ಮಾಡಿದ್ದಕ್ಕಿಂತ ಹೆಚ್ಚು ಸುದ್ದಿ ಮಾಡಿದ ವಿಚಾರ ಏನೆಂದರೆ ಬೆಂಗಳೂರಿನ ಕೊರೊನಾ ಉಸ್ತುವಾರಿ ಸಚಿವರು ಯಾರು ಎಂಬುದು? ಆರಂಭದಿಂದಲೂ ಶ್ರೀರಾಮುಲು ಹಾಗೂ ಕೆ. ಸುಧಾಕರ್ ಈ ವಿಚಾರದಲ್ಲಿ ಪೈಪೋಟಿಗೆ ಬಿದ್ದಿದ್ದರು. ಕೊನೆಗೆ ಇಬ್ಬರನ್ನೂ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಈ ನಡುವೆ ಇದೀಗ ಆರ್. ಅಶೋಕ್ ಅವರನ್ನೂ ಬೆಂಗಳೂರಿನಲ್ಲಿ ಕೊರೊನಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಈ ನಡುವೆ ಬೆಂಗಳೂರನ್ನು 7 ವಿಭಾಗಗಳಾಗಿ ವಿಂಗಡಿಸಿ ಕೊರೊನಾ ನಿಯಂತ್ರಣಕ್ಕಾಗಿ 8 ಸಚಿವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಪ್ರತಿ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಸಲುವಾಗಿ ಓರ್ವ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಟ್ಟದ ಮುತುವರ್ಜಿ ವಹಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಬೆಳವಣಿಗೆ.

ಆದರೆ, ಇದೇ ಮುತುವರ್ಜಿ ಇತರೆ ಜಿಲ್ಲೆಗಳ ಮೇಲೆ ಏಕಿಲ್ಲ? ಬೆಂಗಳೂರಿನ ಕೊರೊನಾ ಉಸ್ತುವಾರಿಗೆ ಇರುವ ಪೈಪೋಟಿ ಇತರೆ ಜಿಲ್ಲೆಗಳಿಗೆ ಏಕಿಲ್ಲ? ಅಸಲಿಗೆ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಮಾಡುತ್ತಿರುವ ಕೆಲಸವಾದರೂ ಏನು? ಉಸ್ತುವಾರಿ ಸಚಿವರುಗಳಿಗೆ ಅನ್ಯ ಜಿಲ್ಲೆಗಳ ಮೇಲೆ ಏಕಿಷ್ಟು ಅಸಡ್ಡೆ? ಯಾವ ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಗೊತ್ತೇ?

ಜಿಲ್ಲಾ ಉಸ್ತುವಾರಿಗಳೇ ಎಲ್ಲಿದ್ದೀರಿ?

ಕರ್ನಾಟಕದಲ್ಲಿ ಈವರೆಗೆ 51,422 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಾರಕ ಸೋಂಕಿಗೆ 1032 ಜನ ಮೃತಪಟ್ಟಿದ್ದಾರೆ. ಕಳೆದ ಎರಡು ವಾರದಿಂದ ಪ್ರತಿದಿನ ಸರಾಸರಿಯಾಗಿ 2,500 ಜನ ರಾಜ್ಯದಲ್ಲಿ ಈ ಮಾರಣಾಂತಿಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ ನಿಜ. ಆದರೆ, ಬೆಂಗಳೂರನ್ನು ಹೊರತುಪಡಿಸಿಯೂ ಧಾರವಾಡ, ದಕ್ಷಿಣ ಕನ್ನಡ, ಗದಗ, ರಾಯಚೂರು, ಬೀದರ್, ಕಲ್ಬುರ್ಗಿ, ಮೈಸೂರು, ಚಿತ್ರದುರ್ಗ, ಮೈಸೂರು, ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಈ ಜಿಲ್ಲೆಗಳಲ್ಲಿ ಒಂದು ದಿನಕ್ಕೆ ಸರಾಸರಿಯಾಗಿ ಕನಿಷ್ಟ 100 ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಈ ಸಂಖ್ಯೆ ಎರಡು ಪಟ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಆದರೆ, ಈ ಯಾವ ಜಿಲ್ಲೆಗಳಲ್ಲೂ ಕೊರೊನಾ ರೋಗಿಗಳನ್ನು ಆರೈಕೆ ಮಾಡಲು ಸೂಕ್ತ ಆಸ್ಪತ್ರೆಗಳಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆಂಬ್ಯುಲೆನ್ಸ್ ಹಾಗೂ ನುರಿತ ವೈದ್ಯರ ಸಂಖ್ಯೆ ಕೂಡ ಜನರ ಅನುಪಾತಕ್ಕೆ ಪೂರಕವಾಗಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಶೇ.50ರಷ್ಟು ಹಾಸಿಗೆಯನ್ನು ಮೀಸಲಿಡಬೇಕು ಎಂದು ಸರ್ಕಾರ ಆದೇಶಿಸಿದೆಯಾದರೂ ಈ ಕುರಿತು ಸ್ಪಷ್ಟ ಮಾರ್ಗಸೂಚಿ ಇಲ್ಲ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಂತೂ ಮಾನವೀಯತೆಯೇ ಇಲ್ಲವೇನೋ ಎಂಬಂತಾಗಿದೆ ಪರಿಸ್ಥಿತಿ.

ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲಾಡಳಿತವೂ ಪ್ರತಿದಿನ ಹೀಗೆ ಇಲ್ಲಗಳ ನಡುವೆಯೇ ದಿನ ಕಳೆಯುತ್ತಿವೆ. ಒಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ಮತ್ತೊಂದೆಡೆ ಅವರ ಚಿಕಿತ್ಸೆಗೆ ಸೂಕ್ತ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ. ಆಸ್ಪತ್ರೆ ಕಡೆ ಬರಲು ಜನ ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣಕ್ಕೆ ಈಗ ಸೋಂಕು ಸಾಮುದಾಯಿಕವಾಗಿ ಹರಡುತ್ತಿದೆ ಎಂದು ಕೂಡ ಹೇಳಲಾಗುತ್ತಿದೆ.

ಹಾಗಾದರೆ, ಜಿಲ್ಲಾ ಭಾಗಗಳಲ್ಲಿ ಜನರಲ್ಲಿ ಆವರಿಸಿರುವ ಈ ಭಯವನ್ನು ಹೋಗಲಾಡಿಸಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸುವ ಕರ್ತವ್ಯ ಯಾರದ್ದು? ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರುಗಳುಗಳಿಗೆ ಈ ಕೂಗು ಕೇಳುತ್ತಿದೆಯೇ?

ಅಸಲಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಳೆದ ಏಪ್ರಿಲ್ 09 ರಂದು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದರು. ಯಾವುದೇ ಜಿಲ್ಲೆಯ ಮೂಲಭೂತ ಸಮಸ್ಯೆಯನ್ನು ಆಲಿಸುವುದು ಮತ್ತು ಆ ಸಮಸ್ಯೆಯ ಪರಿಹಾರಕ್ಕಾಗಿ ಶ್ರಮಿಸುವುದು ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ. ಆದರೆ, ಕೊರೊನಾ ರಾಜ್ಯಾದ್ಯಂತ ವ್ಯಾಪಿಸುತ್ತಿರುವ ಸಮಯದಲ್ಲಿ ಜಿಲ್ಲಾ ಉಸ್ತುವಾರಿಗಳು ಸಚಿವರ ಕೆಲಸ ಹೆಚ್ಚಾಗಿತ್ತು. ಇವರ ತಮ್ಮ ಕರ್ತವ್ಯ ನಿಭಾಯಿಸಿದರೇ?

ಶೂನ್ಯ ದಾಖಲೆ ಬರೆದ ಉಸ್ತುವಾರಿ ಸಚಿವರುಗಳು

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಭೀಕರ ದಿನಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಕೈಜೋಡಿಸಿ ಸೋಂಕು ನಿವಾರಣೆಗಾಗಿ ಉಸ್ತುವಾರಿ ಸಚಿವರು ಹೋರಾಡಬೇಕಿತ್ತು. ತಮ್ಮ ಜಿಲ್ಲೆಗಳಿಗೆ ಅಗತ್ಯವಾದ ವೆಂಟಿಲೇಟರ್, ವೈದ್ಯರಿಗೆ ಪಿಪಿಇ ಕಿಟ್, ಶೀಘ್ರದಲ್ಲಿ ವರದಿ ನೀಡುವ ಸಲುವಾಗಿ ಕೋವಿಡ್ ಲ್ಯಾಬ್, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್‍ಗಳನ್ನು ಒದಗಿಸುವುದು, ಇದಕ್ಕಾಗಿ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸುವುದು ಅವರ ಬದ್ಧತೆಯಾಗಬೇಕಿತ್ತು.

ಆದರೆ, ಯಾವ ಜಿಲ್ಲಾ ಉಸ್ತುವಾರಿ ಸಚಿವರೂ ಕನಿಷ್ಟ ತಮ್ಮ ಕ್ಷೇತ್ರಕ್ಕೆ ಹೋಗಿ ಜನರ ಸಮಸ್ಯೆ ಆಲಿಸಿದ, ಕೊರೋನಾ ಪರಿಸ್ಥಿತಿಯ ಮೇಲುಸ್ತುವಾರಿ ಮಾಡಿದ ಉದಾಹರಣೆ ನಮ್ಮ ಮುಂದೆ ಇಲ್ಲ ಎಂಬುದೇ ನಿಜ.

ಅಸಲಿಗೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ. ಆದರೆ, ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಅವರು ತಮ್ಮ ಉಸ್ತುವಾರಿ ಜಿಲ್ಲೆಗೆ ತೆರಳಿ ಕೊರೊನಾ ಮೇಲುಸ್ತುವಾರಿ ನೋಡಿದ್ದು ಕೇವಲ ಒಂದು ಬಾರಿ ಮಾತ್ರ. ಈ ವೇಳೆಯೂ ಚನ್ನಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇನ್ನೂ ಚಿತ್ರದುರ್ಗದ ಉಸ್ತುವಾರಿಯನ್ನಾಗಿ ಶ್ರೀರಾಮುಲು ಹಾಗೂ ಚಿಕ್ಕಬಳ್ಳಾಪುರದ ಉಸ್ತುವಾರಿಯಾಗಿ ಕೆ. ಸುಧಾಕರ್ ಅವರನ್ನು ನೇಮಿಸಲಾಗಿದೆ. ಆದರೆ, ಬೆಂಗಳೂರು ಉಸ್ತುವಾರಿಗಾಗಿ ಪೈಪೋಟಿಗೆ ಬಿದ್ದು ಹೋರಾಡಿದ ಇವರು ತಮ್ಮ ಜಿಲ್ಲೆಯ ಬಗ್ಗೆ ಎಷ್ಟರ ಮಟ್ಟಿಗೆ ಆಸಕ್ತಿ ತೋರಿದರು ಎಂಬುದು ದೇವರಿಗೆ ಪ್ರೀತಿ.

ಅಶ್ವತ್ಥ್ ನಾರಾಯಣ್, ಶ್ರೀರಾಮುಲು, ಸುಧಾಕರ್, ಆರ್. ಅಶೋಕ್ ಹೊರತಾಗಿಯೂ ಸಹ ಯಾವ ಸಚಿವರೂಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡಿಲ್ಲ. ಇದೇ ಕಾರಣಕ್ಕೆ ಬೆಂಗಳೂರು ಹೊರತು ಬೇರೆ ಯಾವ ಜಿಲ್ಲೆಯೂ ಗಮನ ಸೆಳೆದಿಲ್ಲ ಎಂಬುದೇ ಸತ್ಯ. ಆದರೆ, ಈ ಪೈಕಿ ವಿಜಯಪುರದ ಉಸ್ತುವಾರಿ ಶಶಿಕಲಾ ಜೊಲ್ಲೆ ಮಾತ್ರ ತಮ್ಮ ಜಿಲ್ಲೆಯಲ್ಲಿ ಓಡಾಡಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಸಚಿವರುಗಳಿಗೆ ಬೆಂಗಳೂರಿನ ಮೇಲೆ ಏಕಿಷ್ಟು ಮೋಹ?

ಬೆಂಗಳೂರಿನ ಮೇಲೆ ಮಾತ್ರ ಸಚಿವರಿಗೆ ಏಕಿಷ್ಟು ಮೋಹ? ನಗರದ ಉಸ್ತುವಾರಿಗೆ ಮಾತ್ರ ಏಕೆ ಇಷ್ಟು ಹೋರಾಟ, ಮೇಲಾಟ? ಎಂಬುದು ಪ್ರಶ್ನೆ.

ಅಸಲಿಗೆ ಕೊರೋನಾ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಹಣ ಓಡಾಡುತ್ತಿದೆ. ವೆಂಟಿಲೇಟರ್‍ನಿಂದ ಹಿಡಿದು ಪಿಪಿಇ ಕಿಟ್ ಖರೀದಿವರೆಗೆ ಎಲ್ಲ ವ್ಯವಹಾರಗಳೂ ಬೆಂಗಳೂರಿನಿಂದಲೇ, ಸಚಿವರ ಕಣ್ಣಳತೆಯಲ್ಲೇ ನಡೆಯುತ್ತಿದೆ. 250ರೂ ಬೆಲೆಯ ಸ್ಯಾನಿಟೈಸರ್‍ಗೆ 600ರೂ, 2500 ರೂ ಬೆಲೆಯ ಧರ್ಮಲ್ ಸ್ಕ್ರೀನಿಂಗ್ ಮೆಷಿನ್‍ಗೆ 12,000 ರೂ, 200 ರೂ ಗ್ಲೌಸ್‍ಗೆ 500 ರೂ ಸೇರಿದಂತೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಎಲ್ಲಾ ವಸ್ತುಗಳ ಖರೀದಿಯಲ್ಲೂ ದುಪ್ಪಟ್ಟು ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಖರೀದಿಯ ಹೆಸರಿನಲ್ಲಿ ಸುಮಾರು 25,000 ಕೋಟಿ ಭ್ರಷ್ಟಾಚಾರ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ.

ಇದೇ ಕಾರಣಕ್ಕೆ ಬೆಂಗಳೂರಿನ ಉಸ್ತುವಾರಿಗಾಗಿ ಆರ್. ಅಶೋಕ್, ಶ್ರೀರಾಮುಲು ಹಾಗೂ ಕೆ. ಸುಧಾಕರ್ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕೂಡ ಎತ್ತಲಾಗಿದೆ. ಆದರೆ, ವಿಪರ್ಯಾಸ ನೋಡಿ ಬೆಂಗಳೂರಿನ ಮೇಲೆ ನಮ್ಮ ಸಚಿವರುಗಳು ಇಷ್ಟು ಕಾಳಜಿ ವಹಿಸಿಯೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ತಮಗೆ ಕಳಪೆ ಚಿಕಿತ್ಸೆ ಸಿಗುತ್ತಿದೆ ಎಂದು ವಿಡಿಯೋ ಮಾಡಿ ಸಾಮಾನ್ಯ ಜನ ಗೋಳಾಡುವಂತಾಗಿದೆ. ತುರ್ತು ಚಿಕಿತ್ಸೆ ಇಲ್ಲದೆ ಬೀದಿಯಲ್ಲೇ ಹೆಣವಾಗುತ್ತಿರುವ ವರದಿಗಳು ಬಂದಿವೆ. ಭಯಭೀತರಾಗಿ ಜನ ತಮ್ಮ ಊರುಗಳಿಗೆ ಹಿಂತಿರುಗುತ್ತಿದ್ದಾರೆ.

ಆದರೆ, ಜಿಲ್ಲಾ ಉಸ್ತುವಾರಿ ಸಚಿವರುಗಳ ಅಸಡ್ಡೆಯಿಂದಾಗಿ ಬೆಂಗಳೂರಿನ ಕೊರೊನಾ ಪರಿಸ್ಥಿತಿ ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಆವರಿಸಬಾರದು. ಅದಕ್ಕೂ ಮುನ್ನ ಸರ್ಕಾರ ಮತ್ತು ಸಚಿವರುಗಳು ಎಚ್ಚೆತ್ತುಕೊಳ್ಳಲಿ ಎಂಬುದೇ ಜನಸಾಮಾನ್ಯರ ಆಶಯ.


ಇದನ್ನು ಓದಿ: ಇಂದಿರಾ ಕ್ಯಾಂಟೀನ್‌ದೊಳಗ ಊಟ ಮಾಡಿದಿವಿ ಅಂದರೆ ಕಮಲ ಪಕ್ಷಕ್ಕೆ ಆಗಿ ಬರೋದಿಲ್ಲ…!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....