Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಮ್ಮ ತೋಟದ ಖಾಯಂ ವಾಸಿಗಳೆಂದರೆ ಕೆಂಬೂತ ಎಂದು ಕರೆಯಲ್ಪಡುವ ಸಾಂಬಾರ್ಗಾಗೆಗಳು. ಈ ಸುಂದರ ಪಕ್ಷಿಗಳನ್ನು ಯಾಕೆ ಕೆಂಬೂತ ಎಂದು ಕರೆದರೋ ಎನ್ನುತ್ತಾರೆ ಕೃಷ್ಣಮೂರ್ತಿ ಬಿಳಿಗೆರೆಯವರು...

- Advertisement -
- Advertisement -

ಗ್ರಾಸ್‌ ಕಟರ್‌ನಿಂದ ಹುಲ್ಲು ಹೊಡೆಯುತ್ತಿದ್ದರೆ ಕೊಕ್ಕರೆಗಳು ಹೇಳಿ ಕಳಿಸಿದಂತೆ ನನ್ನ ಹಿಂದೆ ಹಾಜರಿರುತ್ತವೆ. ಅವು ನನ್ನನ್ನು ಸದರ ಮಾಡಿಕೊಂಡು ಯಾವ ಭಯವೂ ಇಲ್ಲದೆ ಸುತ್ತ ನೆರೆದಿರುತ್ತವೆ. ಅವುಗಳಿಗೆ ಈ ಹುಲ್ಲು ಹೊಡೆಯುವ ಸದ್ದು ಊಟದ ಕರೆ ಗಂಟೆಯಂತೆ ಕೇಳಿಸುವುದು ರೂಢಿಯಾಗಿರಬೇಕು. ಹಕ್ಕಿಗಳು ಮನುಷ್ಯರಿಗೆ ಹೆದರುತ್ತವೆ. ಅದಕ್ಕೆ ಅವು ಹಾರುವುದನ್ನು ಕಲಿತಿರುವುದು. ಆದರೆ ನೇಗಿಲಲ್ಲಿ ಉಳುಮೆ ಮಾಡುವ ಮನುಷ್ಯರಿಗೆ ಅವು ಹೆದರುವುದಿಲ್ಲ. ಉಳುಮೆ ಮಾಡುತ್ತಾ ಮುಂದೆ ಸಾಗುತ್ತಿದ್ದಂತೆ ಅವು ನೇಗಿಲ ಗೆರೆಯಲ್ಲಿ ಪ್ರತ್ಯಕ್ಷವಾಗಿಬಿಡುವ ಎರೆಹುಳು, ಗೆದ್ದಲು, ಗೊಣ್ಣೆಹುಳ ಇನ್ನಿತರ ಜೀವ ಜಂತುಗಳ ಸವಿಯೂಟ ಮಾಡುತ್ತಾ ಸಾಗುವವು.

ಹಾಗೆ ನಾನು ಹುಲ್ಲು ಹೊಡೆಯತ್ತಾ ಮುಂದೆ ಸಾಗಿದಂತೆ ಉಣ್ಣೆಗೊರವ ಮತ್ತು ಕೊಕ್ಕರೆಗಳು ಹುಲ್ಲೊಳಗೆ ಕುಂತ, ನಿಂತ, ಮಲಗಿಕೊಂಡಿದ್ದ ಮಿಡತೆ, ಹುಲ್ಲುನೊಣ, ಗೊಣ್ಣೆಹುಳ, ಕಂಬಳಿಹುಳು, ಬಸವನಹುಳು, ಅಂಗುಲದುಳವೇ ಮುಂತಾದ ಕೀಟಗಳು ದಿಢೀರ್‌ ಒದಗಿದ ಆಪತ್ತಿನಿಂದ ತಪ್ಪಿಸಿಕೊಂಡು ಚೆಲ್ಲಾಪಿಲ್ಲಿಯಾಗಿ ನೆಗೆನೆಗೆದು ಓಡತೊಡಗಿದರೆ ಅವುಗಳಲ್ಲಿ ಕೆಲವನ್ನಾದರೂ ಈ ಹಕ್ಕಿಗಳು ಕುಕ್ಕಿ ಕಬಳಿಸುತ್ತವೆ. ಆ ಊಟದ ಆಟ ಅಥವ ಕೀಟದ ಪೀಕಲಾಟ ಸಾಗುತ್ತಿರುತ್ತದೆ. ಒಮ್ಮೊಮ್ಮೆ ಈ ಆಟಕ್ಕೆ ಒಂದೆರಡು ನಾಯಿಗಳು ಸೇರಿಕೊಳ್ಳುತ್ತವೆ. ಅವು ತೋಟದೊಳಗೆ ಇಲಿ ಮತ್ತು ಅಳಿಲುಗಳನ್ನು ಸಾಧ್ಯವಾದರೆ ಮೊಲಗಳನ್ನೂ ಹುಡುಕುತ್ತವೆ. ಅವು ಸಿಗದಿದ್ದಾಗ ಅಲ್ಲಿಯೇ ಕೈಯ್ಯಳತೆಯಲ್ಲಿ ಸಿಗಬಹುದೆಂದು ಭ್ರಮೆ ಹುಟ್ಟಿಸುವ ಕೊಕ್ಕರೆಗಳ ಕತ್ತಿಗೂ ಬಾಯಿ ಹಾಕಲು ವಿಫಲ ಯತ್ನ ನಡೆಸಿ ತಮ್ಮ ಬೇಟೆಯ ಚಟ ತೀರಿಸಿಕೊಳ್ಳುತ್ತವೆ.

ಇನ್ನು ತೋಟದಲ್ಲಿನ ಸೀಬೇ ಮರಗಳು ಕಾಯಿಬಿಟ್ಟು ಸಂಭ್ರಮಿಸುತ್ತಿರುವಾಗ ಹೇಳಿಕಳಿಸಿದಂತೆ ಬರುವ ಗಿಣಿಗಳು ಮರಗಳ ಮೊದಲ ಹಣ್ಣಿನ ರುಚಿ ನೋಡುವುದು ಮಾಮೂಲಿಯಾಗಿದೆ. ಇವು ತಿಂದು ಬಿಟ್ಟ ಗಿಣಿಗಡಕಗಳು ನಮಗೆ. ಗಿಣಿಗಳು ಒಂಟಿಯಾಗಿರುವುದಿಲ್ಲ ಯಾವಾಗಲು ದಂಡು ಕಟ್ಟಿಕೊಂಡೇ ಇರುವುದು, ಬರುವುದು ದಾಳಿ ಮಾಡುವುದು. ಇವು ಮೆಣಸಿನ ಗಿಡಗಳಿಗೆ ಬಿದ್ದರೆ ಅವುಗಳ ಕತೆ ಮುಗಿದಂತೆ, ಆ ಹಸಿರು ಮೆಣಸಿನ ಕಾಯಿಗಳನ್ನು ಸರಿಯಾಗಿ ಅರ್ಧಕ್ಕೆ ಸೀಳಿ ಒಳಗಿನ ಬೀಜಗಳನ್ನು ಸ್ವಾಹ ಮಾಡುವುದು ಇವುಗಳ ವೈಶಿಷ್ಟ್ಯ. ಮೆಣಸಿ ಕಾಯಿ ಮನುಷ್ಯರಿಗೆ ಖಾರವೆನಿಸಿದರೆ ಈ ಗಿಣಿಗಳಿಗೆ ಸಿಹಿ ಜೇನಿರಬಹುದು ಯಾರಿಗೆ ಗೊತ್ತು?

ಇನ್ನು ಹೀರೇ ಹಕ್ಕಿಗಳು ರಾತ್ರಿ ಪಾಳಿಯಲ್ಲಿ ಬಂದು, ಕತ್ತಲ ಬೆಳಕಲ್ಲಿ ಒಳ್ಳೊಳ್ಳೆಯ ಹಣ್ಣುಗಳನ್ನು ಹುಡುಕಿ, ಕೊಕ್ಕಿನಿಂದ ಕಚ್ಚಿ ತಂದು ತೆಂಗಿನ ಮರದ ಗರಿಗಳ ವಾಕವಾದ ಜಾಗಕ್ಕೆ ಕೂತು ತಿಂದು ಹೋಗುತ್ತವೆ. ಕೆಲವು ಹಣ್ಣುಗಳು ಅವುಗಳ ಕೊಕ್ಕಿನ ಹಕ್ಕಿನಿಂದ ತಪ್ಪಿಸಿಕೊಂಡು ಉದುರಿ ಕೆಳಗೆ ಬಿದ್ದ ಹಣ್ಣುಗಳು ನಮಗೆ ಸಿಗುತ್ತವೆ. ನಾವು ಸೀಬೆ ಮರದಡಿಯಲ್ಲಿ ಸೀಬೇ ಹಣ್ಣು ಹುಡುಕುವುದಕ್ಕಿಂತ ತೆಂಗಿನ ಮರದಡಿಯಲ್ಲಿ ಹುಡುಕುವುದೇ ಹೆಚ್ಚು ಫಲಪ್ರದವಾಗಿರುತ್ತದೆ. ಬೆಳಗಾಗುವ ಮುನ್ನವೇ ಹೋಗಿ ಮನುಷ್ಯರ ಮಧ್ಯದ ಆಲದ ಮರಗಳಿಗೆ ತಲೆಕೆಳಗಾಗಿ ನೇತೇ ಬೀಳುವ ಈ ಹಕ್ಕಿಗಳಿಗೆ ಅದೆಷ್ಟು ಧೈರ್ಯವೋ ತಿಳಿಯದು

PC : Pinterest

ನಿಜ ಹೇಳಬೇಕೆಂದರೆ ಈ ಸೀಬೇ ಗಿಡಗಳು ಯಾವುವೂ ನಾವು ನೆಟ್ಟ ಮರಗಳಲ್ಲ. ಅವು ಇದೇ ತೆರನಾಗಿ ಹಕ್ಕಿಗಳೇ ಇಟ್ಟ ಹಿಕ್ಕೆಯ ಜೊತೆಯಲ್ಲಿ ಹುಟ್ಟಿದ ಮರಗಳು. ಅವು ಹಕ್ಕಿಗಳ ಹಕ್ಕಿನ ಮರಗಳು.

ನಮ್ಮ ತೋಟದ ಖಾಯಂ ವಾಸಿಗಳೆಂದರೆ ಕೆಂಬೂತ ಎಂದು ಕರೆಯಲ್ಪಡುವ ಸಾಂಬಾರ್ಗಾಗೆಗಳು. ಈ ಸುಂದರ ಪಕ್ಷಿಗಳನ್ನು ಯಾಕೆ ಕೆಂಬೂತ ಎಂದು ಕರೆದರೋ.

PC : Freepik

ಇವು ಯಾಕಿಷ್ಟು ನಾಚಿಕೆಯನ್ನು ಬೆಳೆಸಿಕೊಂಡಿವೆಯೋ ಗೊತ್ತಿಲ್ಲ. ಅವು ನಮ್ಮ ಕಣ್ಣಿಗೆ ಬಿದ್ದರೆ, ನಾವು ಅವುಗಳ ಕಣ್ಣಿಗೆ ಬಿದ್ದರೆ ಒಡನೆಯೇ ಅವಿತುಕೊಳ್ಳಲು ಹಾತೊರೆಯತ್ತವೆ. ಏನೇ ಇರಲಿ ನಮ್ಮ ತೋಟದೊಳಗೆ ಇವುಗಳನ್ನು ನೋಡದ ದಿನವಿಲ್ಲ. ಅಂದರೆ ಈ ತೋಟ ಸಾಂಬಾರ್ಗಾಗೆಯದು ಎಂಬುದನ್ನು ಒಪ್ಪಲೇಬೇಕು. ಇತರ ಹಕ್ಕಿಗಳಂತೆ ಇವು ಜೋಡಿಯಾಗಿರುವುದಿಲ್ಲ, ಯಾವಾಗಲೂ ಒಂಟಿ. ಆದರೆ ಸ್ವಲ್ಪ ದೂರದಲ್ಲೆ ಅದರ ಸಂಗಾತಿ  ಇರುವುದನ್ನು ಅವುಗಳ ಕೂಗುಗಳಿಂದ ಗುರ್ತಿಸಬಹುದು. ಇವು ಇಲಿ ಪ್ರಿಯ ಹಕ್ಕಿಗಳು, ತೆಂಗಿನ ನೆತ್ತಿ ಸುಳಿಯಲ್ಲಿ ಇಲಿ ಗೂಡುಗಳನ್ನು ಹುಡುಕಿ, ಬೆದಕಿ ಇಲಿ ಮರಿಗಳನ್ನು ಹೆಕ್ಕಿ ತಿನ್ನುತ್ತವೆ. ಈ ಹಕ್ಕಿಗಳು ಹಣ್ಣುಗಳನ್ನು ಅಷ್ಟಾಗಿ ಇಷ್ಟಪಡುವುದಿಲ್ಲ. ಇವು ಹೀಗೆ ಇಲಿಗಳನ್ನು ನಮ್ಮ ತೆಂಗಿನ ತೋಟಗಳಲ್ಲಿ ನಿಯಂತ್ರಿಸದಿದ್ದರೆ ಒಂದು ಎಳನೀರನ್ನು ಕಾಣಲಾಗುತ್ತಿರಲಿಲ್ಲವೇನೋ. ಇಷ್ಟಾಗಿಯೂ ಇಲಿ ಬುಲ್ಡೆಗಳು ಮರದ ಬುಡದಲ್ಲಿ ಇಟ್ಟಾಡುತ್ತಿರುವುದು ಇಲಿಗಳ ಬುದ್ಧಿವಂತಿಕೆಗೆ ಸಾಕ್ಷಿ. ಎಲ್ಲಾ ಕಡೆಯೂ ಹಕ್ಕಿಗಳು ಹಾರಡುತ್ತವೆ, ಆದರೆ ನಮ್ಮ ತೋಟದಲ್ಲಿ ವಾಸಮಾಡುತ್ತವೆ.

ಸೋಬಾನೆ ಹಕ್ಕಿಗಳು ಬೆಳಗು, ಸಂಜೆ ಬೇಲಿ ಸಾಲುಗಳಲ್ಲಿ ಆಡುವುದನ್ನು ನೋಡಬೇಕು,  ತಿಂಡಿ ತಿಂದು ಅರ್ಜೆಂಟಾಗಿ ಎಲ್ಲಿಗೋ ಹೋಗಬೇಕು ಎನ್ನುವಂತೆ ಚಡಪಡಿಸುತ್ತಿರುತ್ತವೆ. ಅವುಗಳು ಬೇಲಿ ಸಾಲಿನಲ್ಲಿ ನಿಖರವಾಗಿ ಏನೇನು ತಿನ್ನುತ್ತವೆ ಎಂದು ಕಂಡುಹಿಡಿಯುವುದು ನನಗಿನ್ನೂ ಸಾಧ್ಯವಾಗಿಲ್ಲ. ಕೀಟಗಳು ಅವುಗಳ ಮುಖ್ಯ ಆಹಾರವೆಂಬುದು ನಿಜ, ಅವು ಎಳೆ ಹುಲ್ಲನ್ನು, ಹುಲ್ಲಿನ ಬೀಜಗಳನ್ನು ತಿನ್ನುತ್ತವೆ ಎನ್ನುವುದು ನನ್ನ ಅನುಮಾನ. ಗುಂಪು ಗುಂಪಾಗಿಯೆ ಇರುವ ಈ ಸೋಬಾನೆ ಹಕ್ಕಿಗಳು ಅವುಗಳ ಚಲನೆಯಲ್ಲಿ ಸ್ವಲ್ಪ “ಮದ್ದ” ಅನಿಸಿದರೂ ತಮ್ಮ ತಮ್ಮಲ್ಲಿ ಅತಿ ಎನ್ನಿಸುವಷ್ಟು ಮಾತಾಡುತ್ತಿರುತ್ತವೆ. ಈ ವಿಷಯದಲ್ಲಿ ಇವು ಮೇಷ್ಟ್ರರ ಜಾತಿ.

ಈ ನವಿಲುಗಳನ್ನು ಪಕ್ಷಿ ಎನ್ನಬೇಕೋ ಪ್ರಾಣಿ ಎನ್ನಬೇಕೋ ಹಾಗಿರುತ್ತದೆ ಅವುಗಳ ನಡೆ ನುಡಿ. ನಡೆದಾಡುವ ಪಕ್ಷಿಗಳು ಎಂದರೆ ಸ್ವಲ್ಪ ಸರಿ. ಹಾರುವ ಪ್ರಾಣಿ ಎಂದರೆ ಅದೂ ಸ್ವಲ್ಪ ಸರಿ. ಕೂಗುವುದು ಪ್ರಾಣಿಗಳ ಹಾಗೆ, ಕಾಣುವುದು ಪಕ್ಷಿಗಳ ಹಾಗೆ. ಇತ್ತೀಚೆಗೆ ಇವು ನಮ್ಮ ಬಯಲು ಸೀಮೆಯಲ್ಲಿ ಅತಿ ಎನ್ನಿಸುವಷ್ಟು ಹೆಚ್ಚಿವೆ. ಇವುಗಳನ್ನು ಬೇಟೆಯಾಡುವ ಪ್ರಾಣಿಗಳು ಕಾಡು ಮೇಡು ತೊರೆದು ಹಗಲು ಹೊತ್ತಲ್ಲಿ ತೋಟದ ಸಾಲಿಗೆ ಬರದಿರುವುದು ಇದಕ್ಕೆ ಕಾರಣವಿರಬಹುದು.

ಈ ನವಿಲುಗಳು ಹುಲ್ಲಿನ ಪೊದೆಗಳಲ್ಲಿ ಯಾವ ಭಯವೂ ಇಲ್ಲದೆ ಮೊಟ್ಟೆ ಇಟ್ಟು ಮರಿಮಾಡಿಕೊಂಡು ಹೋಗುವುದನ್ನು ರೂಢಿಮಾಡಿಕೊಂಡಿವೆ. ಮನುಷ್ಯರಿಗೆ ಇವುಗಳನ್ನು ಬೇಟೆಯಾಡಲು ಆಸೆ ಆದರೆ ಜೈಲು ಸೇರುವ ಭಯದಲ್ಲಿ ಅವುಗಳನ್ನು ನೋಡಿ, ಎಷ್ಟು ಕೇಜಿ ಮಾಂಸ ಬರಬಹುದು ಎಂದು ಊಹಿಸಿಕೊಂಡು ಜೊಲ್ಲು ಸುರಿಸಿ ಸುಮ್ಮನಾಗುತ್ತಾರೆ. ಹೊಲದಲ್ಲಿ ಬಿತ್ತಿದ ತೊಗರಿ, ಅವರೆ ಕಾಳುಗಳನ್ನು ಸಾಲು ಹಿಡಿದು ತಿನ್ನುವ ಈ ನವಿಲುಗಳನ್ನು ಕಂಡರೆ ನಮ್ಮ ರೈತರಿಗೀಗ ಅಭಿಮಾನವಿಲ್ಲ, ಕೊಲ್ಲುವಷ್ಟು ಸಿಟ್ಟು ಬಂದಿದೆ. ಇವು ಈಗ ಮಾಡುತ್ತಿರುವ ಹಾನಿ ಅತಿಯಾಗಿದೆ. ಎಳೆಯ ಪೈರುಗಳನ್ನು ಸ್ವಾಹ ಮಾಡುತ್ತವೆ. ಆಹಾರದ ಕೊರತೆಯಾದಾಗ ಅವು ಊರೊಳಕ್ಕು ಬರುವುದನ್ನು ರೂಢಿ ಮಾಡಿಕೊಳ್ಳುತ್ತಿವೆ. ರಾಷ್ಟ್ರಪಕ್ಷಿಯಾದ ನವಿಲು ಎಂಜಲು ಮುಸುರೆಯನ್ನು ಕುಡಿಯುವ ವಾಸ್ತವ ನಮ್ಮ ಕಣ್ಣ ಮುಂದಿದೆ. ಕಾಡುಗಳನ್ನು ಇನ್ನಿಲ್ಲದಂತೆ ಸವರಿ ಹಾಕಿ ಒತ್ತುವರಿ ಮಾಡಿದ್ದು, ಬೆಟ್ಟ ಗುಡ್ಡಗಳೆಲ್ಲೆಡೆಯಲ್ಲಿನ ಗಣಿಗಾರಿಕೆ ನೆಪದಲ್ಲಿ ಸಿಡಿಸುವ ಡೈನಾಮೈಟ್‌ ಸಾವಿನ ಸದ್ದು, ಹುಲ್ಲುಗಾವಲುಗಳ ಕಣ್ಮರೆ, ನವಿಲಷ್ಟೇ ಅಲ್ಲ ಇತರ ಕಾಡು ಪ್ರಾಣಿಗಳ ಅಬ್ಬೇಪಾರಿತನ್ನಕ್ಕೆ ಕಾರಣವಾಗಿದೆ.

ಗುಚ್ಚಕ್ಕಿ ತೋಟಕ್ಕೆ ಬರುವುದಿಲ್ಲ. ಅವು ಊರೊಳಗೆ ಮಾತ್ರ ತಮ್ಮ ವಸತಿ ಮಾಡಿಕೊಂಡಿರುತ್ತವೆ. ಅದಕ್ಕೆ ಅವು ಬೇಗ ರೋಗ ರುಜಿನಗಳಿಗೆ ತುತ್ತಾಗಿ ಈಗ ಅಲ್ಪ ಸಂಖ್ಯಾತವಾಗಿವೆ. ಕಾಗೆಗಳು ಉಭಯವಾಸಿಗಳು ತೋಟ ಹೊಲ ಮತ್ತು ಊರೊಳಗೆ ಎರಡೂ ಕಡೆ ತಮ್ಮ ನೆಲೆ ಕಂಡುಕೊಂಡಿವೆ. ನಮ್ಮ ತೋಟದಲ್ಲಿ ಅವು ಕಾ ಕಾ ಎಂದು ಕೂಗಿದವೆಂದರೆ ಪರಂಗಿ ಗಿಡದಲ್ಲಿ ಹಣ್ಣುಗಳು ರೆಡಿ ಇವೆ ಎಂದೇ ಅರ್ಥ. ಅವು ಇಲಿಗಳನ್ನು ಹಿಡಿದು ತಿನ್ನುವುದು ನಿಜವಾದರೂ ಅವಕ್ಕೆ ಪರಂಗಿ, ಹಲಸು, ಸತ್ತ ಪ್ರಾಣಿಗಳು, ಮೆಣಸಿನಕಾಯಿ ಎಂದರೆ ಬಲು ಇಷ್ಟ.

ಮರಕುಟುಕ ಹಕ್ಕಿಗಳು ಯಾಕೋ ಕಮ್ಮಿಯಾದಂತೆ ಅನಿಸಿದೆ. ಎಲ್ಲೋ ಒಂದೊಂದು ಮರಕುಟುಕ ಮಿಡತೆ, ಜೇನುಹುಳ, ಕಡಜ ಮುಂತಾದ ಕೀಟಗಳನ್ನು ಕೊಕ್ಕಲ್ಲಿ ಹಿಡಿದು ಮರಕ್ಕೆ ಬಡಿದು ಸಾಯಿಸಿ ತಿನ್ನುವ ದೃಶ್ಯವನ್ನು ನೋಡಬಹುದಾಗಿದೆ. ಈ ಮೊದಲು ಅವು ಮರದ ಟೊಳ್ಳು ಭಾಗವನ್ನು ತಮ್ಮ ಕೊಕ್ಕಿನಿಂದ ಟಪ್‌ ಟಪ್‌ ಎಂದು ಕುಕ್ಕುತ್ತಾ, ಆ ಕುಕ್ಕಿದ ಭಾಗದಿಂದ ಈಚೆ ಹೊರಡುವ ಅಮಾಯಕ ಹುಳುಗಳನ್ನು ಕಬಳಿಸುವ ದೃಶ್ಯವನ್ನು ತೋಟದ ಅನೇಕ ಭಾಗಗಳಲ್ಲಿ ನೋಡಬಹುದಾಗಿತ್ತು. ಅಂಥಾ ಚೂಟಿ ಹಕ್ಕಿಗಳು ಎಲ್ಲಿ ಹೋದವೋ ಯಾರಿಗೆ ಗೊತ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...