Homeಅಂಕಣಗಳುನಮ್ಮ ತೋಟದ ಸಾಲಿಗೆ ನೀವೂ ಬನ್ನಿನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-2: ಈ ಹಕ್ಕಿಗಳು ಎಲ್ಲಿರುತ್ತವೋ ಏನೋ?

ನಮ್ಮ ತೋಟದ ಖಾಯಂ ವಾಸಿಗಳೆಂದರೆ ಕೆಂಬೂತ ಎಂದು ಕರೆಯಲ್ಪಡುವ ಸಾಂಬಾರ್ಗಾಗೆಗಳು. ಈ ಸುಂದರ ಪಕ್ಷಿಗಳನ್ನು ಯಾಕೆ ಕೆಂಬೂತ ಎಂದು ಕರೆದರೋ ಎನ್ನುತ್ತಾರೆ ಕೃಷ್ಣಮೂರ್ತಿ ಬಿಳಿಗೆರೆಯವರು...

- Advertisement -
- Advertisement -

ಗ್ರಾಸ್‌ ಕಟರ್‌ನಿಂದ ಹುಲ್ಲು ಹೊಡೆಯುತ್ತಿದ್ದರೆ ಕೊಕ್ಕರೆಗಳು ಹೇಳಿ ಕಳಿಸಿದಂತೆ ನನ್ನ ಹಿಂದೆ ಹಾಜರಿರುತ್ತವೆ. ಅವು ನನ್ನನ್ನು ಸದರ ಮಾಡಿಕೊಂಡು ಯಾವ ಭಯವೂ ಇಲ್ಲದೆ ಸುತ್ತ ನೆರೆದಿರುತ್ತವೆ. ಅವುಗಳಿಗೆ ಈ ಹುಲ್ಲು ಹೊಡೆಯುವ ಸದ್ದು ಊಟದ ಕರೆ ಗಂಟೆಯಂತೆ ಕೇಳಿಸುವುದು ರೂಢಿಯಾಗಿರಬೇಕು. ಹಕ್ಕಿಗಳು ಮನುಷ್ಯರಿಗೆ ಹೆದರುತ್ತವೆ. ಅದಕ್ಕೆ ಅವು ಹಾರುವುದನ್ನು ಕಲಿತಿರುವುದು. ಆದರೆ ನೇಗಿಲಲ್ಲಿ ಉಳುಮೆ ಮಾಡುವ ಮನುಷ್ಯರಿಗೆ ಅವು ಹೆದರುವುದಿಲ್ಲ. ಉಳುಮೆ ಮಾಡುತ್ತಾ ಮುಂದೆ ಸಾಗುತ್ತಿದ್ದಂತೆ ಅವು ನೇಗಿಲ ಗೆರೆಯಲ್ಲಿ ಪ್ರತ್ಯಕ್ಷವಾಗಿಬಿಡುವ ಎರೆಹುಳು, ಗೆದ್ದಲು, ಗೊಣ್ಣೆಹುಳ ಇನ್ನಿತರ ಜೀವ ಜಂತುಗಳ ಸವಿಯೂಟ ಮಾಡುತ್ತಾ ಸಾಗುವವು.

ಹಾಗೆ ನಾನು ಹುಲ್ಲು ಹೊಡೆಯತ್ತಾ ಮುಂದೆ ಸಾಗಿದಂತೆ ಉಣ್ಣೆಗೊರವ ಮತ್ತು ಕೊಕ್ಕರೆಗಳು ಹುಲ್ಲೊಳಗೆ ಕುಂತ, ನಿಂತ, ಮಲಗಿಕೊಂಡಿದ್ದ ಮಿಡತೆ, ಹುಲ್ಲುನೊಣ, ಗೊಣ್ಣೆಹುಳ, ಕಂಬಳಿಹುಳು, ಬಸವನಹುಳು, ಅಂಗುಲದುಳವೇ ಮುಂತಾದ ಕೀಟಗಳು ದಿಢೀರ್‌ ಒದಗಿದ ಆಪತ್ತಿನಿಂದ ತಪ್ಪಿಸಿಕೊಂಡು ಚೆಲ್ಲಾಪಿಲ್ಲಿಯಾಗಿ ನೆಗೆನೆಗೆದು ಓಡತೊಡಗಿದರೆ ಅವುಗಳಲ್ಲಿ ಕೆಲವನ್ನಾದರೂ ಈ ಹಕ್ಕಿಗಳು ಕುಕ್ಕಿ ಕಬಳಿಸುತ್ತವೆ. ಆ ಊಟದ ಆಟ ಅಥವ ಕೀಟದ ಪೀಕಲಾಟ ಸಾಗುತ್ತಿರುತ್ತದೆ. ಒಮ್ಮೊಮ್ಮೆ ಈ ಆಟಕ್ಕೆ ಒಂದೆರಡು ನಾಯಿಗಳು ಸೇರಿಕೊಳ್ಳುತ್ತವೆ. ಅವು ತೋಟದೊಳಗೆ ಇಲಿ ಮತ್ತು ಅಳಿಲುಗಳನ್ನು ಸಾಧ್ಯವಾದರೆ ಮೊಲಗಳನ್ನೂ ಹುಡುಕುತ್ತವೆ. ಅವು ಸಿಗದಿದ್ದಾಗ ಅಲ್ಲಿಯೇ ಕೈಯ್ಯಳತೆಯಲ್ಲಿ ಸಿಗಬಹುದೆಂದು ಭ್ರಮೆ ಹುಟ್ಟಿಸುವ ಕೊಕ್ಕರೆಗಳ ಕತ್ತಿಗೂ ಬಾಯಿ ಹಾಕಲು ವಿಫಲ ಯತ್ನ ನಡೆಸಿ ತಮ್ಮ ಬೇಟೆಯ ಚಟ ತೀರಿಸಿಕೊಳ್ಳುತ್ತವೆ.

ಇನ್ನು ತೋಟದಲ್ಲಿನ ಸೀಬೇ ಮರಗಳು ಕಾಯಿಬಿಟ್ಟು ಸಂಭ್ರಮಿಸುತ್ತಿರುವಾಗ ಹೇಳಿಕಳಿಸಿದಂತೆ ಬರುವ ಗಿಣಿಗಳು ಮರಗಳ ಮೊದಲ ಹಣ್ಣಿನ ರುಚಿ ನೋಡುವುದು ಮಾಮೂಲಿಯಾಗಿದೆ. ಇವು ತಿಂದು ಬಿಟ್ಟ ಗಿಣಿಗಡಕಗಳು ನಮಗೆ. ಗಿಣಿಗಳು ಒಂಟಿಯಾಗಿರುವುದಿಲ್ಲ ಯಾವಾಗಲು ದಂಡು ಕಟ್ಟಿಕೊಂಡೇ ಇರುವುದು, ಬರುವುದು ದಾಳಿ ಮಾಡುವುದು. ಇವು ಮೆಣಸಿನ ಗಿಡಗಳಿಗೆ ಬಿದ್ದರೆ ಅವುಗಳ ಕತೆ ಮುಗಿದಂತೆ, ಆ ಹಸಿರು ಮೆಣಸಿನ ಕಾಯಿಗಳನ್ನು ಸರಿಯಾಗಿ ಅರ್ಧಕ್ಕೆ ಸೀಳಿ ಒಳಗಿನ ಬೀಜಗಳನ್ನು ಸ್ವಾಹ ಮಾಡುವುದು ಇವುಗಳ ವೈಶಿಷ್ಟ್ಯ. ಮೆಣಸಿ ಕಾಯಿ ಮನುಷ್ಯರಿಗೆ ಖಾರವೆನಿಸಿದರೆ ಈ ಗಿಣಿಗಳಿಗೆ ಸಿಹಿ ಜೇನಿರಬಹುದು ಯಾರಿಗೆ ಗೊತ್ತು?

ಇನ್ನು ಹೀರೇ ಹಕ್ಕಿಗಳು ರಾತ್ರಿ ಪಾಳಿಯಲ್ಲಿ ಬಂದು, ಕತ್ತಲ ಬೆಳಕಲ್ಲಿ ಒಳ್ಳೊಳ್ಳೆಯ ಹಣ್ಣುಗಳನ್ನು ಹುಡುಕಿ, ಕೊಕ್ಕಿನಿಂದ ಕಚ್ಚಿ ತಂದು ತೆಂಗಿನ ಮರದ ಗರಿಗಳ ವಾಕವಾದ ಜಾಗಕ್ಕೆ ಕೂತು ತಿಂದು ಹೋಗುತ್ತವೆ. ಕೆಲವು ಹಣ್ಣುಗಳು ಅವುಗಳ ಕೊಕ್ಕಿನ ಹಕ್ಕಿನಿಂದ ತಪ್ಪಿಸಿಕೊಂಡು ಉದುರಿ ಕೆಳಗೆ ಬಿದ್ದ ಹಣ್ಣುಗಳು ನಮಗೆ ಸಿಗುತ್ತವೆ. ನಾವು ಸೀಬೆ ಮರದಡಿಯಲ್ಲಿ ಸೀಬೇ ಹಣ್ಣು ಹುಡುಕುವುದಕ್ಕಿಂತ ತೆಂಗಿನ ಮರದಡಿಯಲ್ಲಿ ಹುಡುಕುವುದೇ ಹೆಚ್ಚು ಫಲಪ್ರದವಾಗಿರುತ್ತದೆ. ಬೆಳಗಾಗುವ ಮುನ್ನವೇ ಹೋಗಿ ಮನುಷ್ಯರ ಮಧ್ಯದ ಆಲದ ಮರಗಳಿಗೆ ತಲೆಕೆಳಗಾಗಿ ನೇತೇ ಬೀಳುವ ಈ ಹಕ್ಕಿಗಳಿಗೆ ಅದೆಷ್ಟು ಧೈರ್ಯವೋ ತಿಳಿಯದು

PC : Pinterest

ನಿಜ ಹೇಳಬೇಕೆಂದರೆ ಈ ಸೀಬೇ ಗಿಡಗಳು ಯಾವುವೂ ನಾವು ನೆಟ್ಟ ಮರಗಳಲ್ಲ. ಅವು ಇದೇ ತೆರನಾಗಿ ಹಕ್ಕಿಗಳೇ ಇಟ್ಟ ಹಿಕ್ಕೆಯ ಜೊತೆಯಲ್ಲಿ ಹುಟ್ಟಿದ ಮರಗಳು. ಅವು ಹಕ್ಕಿಗಳ ಹಕ್ಕಿನ ಮರಗಳು.

ನಮ್ಮ ತೋಟದ ಖಾಯಂ ವಾಸಿಗಳೆಂದರೆ ಕೆಂಬೂತ ಎಂದು ಕರೆಯಲ್ಪಡುವ ಸಾಂಬಾರ್ಗಾಗೆಗಳು. ಈ ಸುಂದರ ಪಕ್ಷಿಗಳನ್ನು ಯಾಕೆ ಕೆಂಬೂತ ಎಂದು ಕರೆದರೋ.

PC : Freepik

ಇವು ಯಾಕಿಷ್ಟು ನಾಚಿಕೆಯನ್ನು ಬೆಳೆಸಿಕೊಂಡಿವೆಯೋ ಗೊತ್ತಿಲ್ಲ. ಅವು ನಮ್ಮ ಕಣ್ಣಿಗೆ ಬಿದ್ದರೆ, ನಾವು ಅವುಗಳ ಕಣ್ಣಿಗೆ ಬಿದ್ದರೆ ಒಡನೆಯೇ ಅವಿತುಕೊಳ್ಳಲು ಹಾತೊರೆಯತ್ತವೆ. ಏನೇ ಇರಲಿ ನಮ್ಮ ತೋಟದೊಳಗೆ ಇವುಗಳನ್ನು ನೋಡದ ದಿನವಿಲ್ಲ. ಅಂದರೆ ಈ ತೋಟ ಸಾಂಬಾರ್ಗಾಗೆಯದು ಎಂಬುದನ್ನು ಒಪ್ಪಲೇಬೇಕು. ಇತರ ಹಕ್ಕಿಗಳಂತೆ ಇವು ಜೋಡಿಯಾಗಿರುವುದಿಲ್ಲ, ಯಾವಾಗಲೂ ಒಂಟಿ. ಆದರೆ ಸ್ವಲ್ಪ ದೂರದಲ್ಲೆ ಅದರ ಸಂಗಾತಿ  ಇರುವುದನ್ನು ಅವುಗಳ ಕೂಗುಗಳಿಂದ ಗುರ್ತಿಸಬಹುದು. ಇವು ಇಲಿ ಪ್ರಿಯ ಹಕ್ಕಿಗಳು, ತೆಂಗಿನ ನೆತ್ತಿ ಸುಳಿಯಲ್ಲಿ ಇಲಿ ಗೂಡುಗಳನ್ನು ಹುಡುಕಿ, ಬೆದಕಿ ಇಲಿ ಮರಿಗಳನ್ನು ಹೆಕ್ಕಿ ತಿನ್ನುತ್ತವೆ. ಈ ಹಕ್ಕಿಗಳು ಹಣ್ಣುಗಳನ್ನು ಅಷ್ಟಾಗಿ ಇಷ್ಟಪಡುವುದಿಲ್ಲ. ಇವು ಹೀಗೆ ಇಲಿಗಳನ್ನು ನಮ್ಮ ತೆಂಗಿನ ತೋಟಗಳಲ್ಲಿ ನಿಯಂತ್ರಿಸದಿದ್ದರೆ ಒಂದು ಎಳನೀರನ್ನು ಕಾಣಲಾಗುತ್ತಿರಲಿಲ್ಲವೇನೋ. ಇಷ್ಟಾಗಿಯೂ ಇಲಿ ಬುಲ್ಡೆಗಳು ಮರದ ಬುಡದಲ್ಲಿ ಇಟ್ಟಾಡುತ್ತಿರುವುದು ಇಲಿಗಳ ಬುದ್ಧಿವಂತಿಕೆಗೆ ಸಾಕ್ಷಿ. ಎಲ್ಲಾ ಕಡೆಯೂ ಹಕ್ಕಿಗಳು ಹಾರಡುತ್ತವೆ, ಆದರೆ ನಮ್ಮ ತೋಟದಲ್ಲಿ ವಾಸಮಾಡುತ್ತವೆ.

ಸೋಬಾನೆ ಹಕ್ಕಿಗಳು ಬೆಳಗು, ಸಂಜೆ ಬೇಲಿ ಸಾಲುಗಳಲ್ಲಿ ಆಡುವುದನ್ನು ನೋಡಬೇಕು,  ತಿಂಡಿ ತಿಂದು ಅರ್ಜೆಂಟಾಗಿ ಎಲ್ಲಿಗೋ ಹೋಗಬೇಕು ಎನ್ನುವಂತೆ ಚಡಪಡಿಸುತ್ತಿರುತ್ತವೆ. ಅವುಗಳು ಬೇಲಿ ಸಾಲಿನಲ್ಲಿ ನಿಖರವಾಗಿ ಏನೇನು ತಿನ್ನುತ್ತವೆ ಎಂದು ಕಂಡುಹಿಡಿಯುವುದು ನನಗಿನ್ನೂ ಸಾಧ್ಯವಾಗಿಲ್ಲ. ಕೀಟಗಳು ಅವುಗಳ ಮುಖ್ಯ ಆಹಾರವೆಂಬುದು ನಿಜ, ಅವು ಎಳೆ ಹುಲ್ಲನ್ನು, ಹುಲ್ಲಿನ ಬೀಜಗಳನ್ನು ತಿನ್ನುತ್ತವೆ ಎನ್ನುವುದು ನನ್ನ ಅನುಮಾನ. ಗುಂಪು ಗುಂಪಾಗಿಯೆ ಇರುವ ಈ ಸೋಬಾನೆ ಹಕ್ಕಿಗಳು ಅವುಗಳ ಚಲನೆಯಲ್ಲಿ ಸ್ವಲ್ಪ “ಮದ್ದ” ಅನಿಸಿದರೂ ತಮ್ಮ ತಮ್ಮಲ್ಲಿ ಅತಿ ಎನ್ನಿಸುವಷ್ಟು ಮಾತಾಡುತ್ತಿರುತ್ತವೆ. ಈ ವಿಷಯದಲ್ಲಿ ಇವು ಮೇಷ್ಟ್ರರ ಜಾತಿ.

ಈ ನವಿಲುಗಳನ್ನು ಪಕ್ಷಿ ಎನ್ನಬೇಕೋ ಪ್ರಾಣಿ ಎನ್ನಬೇಕೋ ಹಾಗಿರುತ್ತದೆ ಅವುಗಳ ನಡೆ ನುಡಿ. ನಡೆದಾಡುವ ಪಕ್ಷಿಗಳು ಎಂದರೆ ಸ್ವಲ್ಪ ಸರಿ. ಹಾರುವ ಪ್ರಾಣಿ ಎಂದರೆ ಅದೂ ಸ್ವಲ್ಪ ಸರಿ. ಕೂಗುವುದು ಪ್ರಾಣಿಗಳ ಹಾಗೆ, ಕಾಣುವುದು ಪಕ್ಷಿಗಳ ಹಾಗೆ. ಇತ್ತೀಚೆಗೆ ಇವು ನಮ್ಮ ಬಯಲು ಸೀಮೆಯಲ್ಲಿ ಅತಿ ಎನ್ನಿಸುವಷ್ಟು ಹೆಚ್ಚಿವೆ. ಇವುಗಳನ್ನು ಬೇಟೆಯಾಡುವ ಪ್ರಾಣಿಗಳು ಕಾಡು ಮೇಡು ತೊರೆದು ಹಗಲು ಹೊತ್ತಲ್ಲಿ ತೋಟದ ಸಾಲಿಗೆ ಬರದಿರುವುದು ಇದಕ್ಕೆ ಕಾರಣವಿರಬಹುದು.

ಈ ನವಿಲುಗಳು ಹುಲ್ಲಿನ ಪೊದೆಗಳಲ್ಲಿ ಯಾವ ಭಯವೂ ಇಲ್ಲದೆ ಮೊಟ್ಟೆ ಇಟ್ಟು ಮರಿಮಾಡಿಕೊಂಡು ಹೋಗುವುದನ್ನು ರೂಢಿಮಾಡಿಕೊಂಡಿವೆ. ಮನುಷ್ಯರಿಗೆ ಇವುಗಳನ್ನು ಬೇಟೆಯಾಡಲು ಆಸೆ ಆದರೆ ಜೈಲು ಸೇರುವ ಭಯದಲ್ಲಿ ಅವುಗಳನ್ನು ನೋಡಿ, ಎಷ್ಟು ಕೇಜಿ ಮಾಂಸ ಬರಬಹುದು ಎಂದು ಊಹಿಸಿಕೊಂಡು ಜೊಲ್ಲು ಸುರಿಸಿ ಸುಮ್ಮನಾಗುತ್ತಾರೆ. ಹೊಲದಲ್ಲಿ ಬಿತ್ತಿದ ತೊಗರಿ, ಅವರೆ ಕಾಳುಗಳನ್ನು ಸಾಲು ಹಿಡಿದು ತಿನ್ನುವ ಈ ನವಿಲುಗಳನ್ನು ಕಂಡರೆ ನಮ್ಮ ರೈತರಿಗೀಗ ಅಭಿಮಾನವಿಲ್ಲ, ಕೊಲ್ಲುವಷ್ಟು ಸಿಟ್ಟು ಬಂದಿದೆ. ಇವು ಈಗ ಮಾಡುತ್ತಿರುವ ಹಾನಿ ಅತಿಯಾಗಿದೆ. ಎಳೆಯ ಪೈರುಗಳನ್ನು ಸ್ವಾಹ ಮಾಡುತ್ತವೆ. ಆಹಾರದ ಕೊರತೆಯಾದಾಗ ಅವು ಊರೊಳಕ್ಕು ಬರುವುದನ್ನು ರೂಢಿ ಮಾಡಿಕೊಳ್ಳುತ್ತಿವೆ. ರಾಷ್ಟ್ರಪಕ್ಷಿಯಾದ ನವಿಲು ಎಂಜಲು ಮುಸುರೆಯನ್ನು ಕುಡಿಯುವ ವಾಸ್ತವ ನಮ್ಮ ಕಣ್ಣ ಮುಂದಿದೆ. ಕಾಡುಗಳನ್ನು ಇನ್ನಿಲ್ಲದಂತೆ ಸವರಿ ಹಾಕಿ ಒತ್ತುವರಿ ಮಾಡಿದ್ದು, ಬೆಟ್ಟ ಗುಡ್ಡಗಳೆಲ್ಲೆಡೆಯಲ್ಲಿನ ಗಣಿಗಾರಿಕೆ ನೆಪದಲ್ಲಿ ಸಿಡಿಸುವ ಡೈನಾಮೈಟ್‌ ಸಾವಿನ ಸದ್ದು, ಹುಲ್ಲುಗಾವಲುಗಳ ಕಣ್ಮರೆ, ನವಿಲಷ್ಟೇ ಅಲ್ಲ ಇತರ ಕಾಡು ಪ್ರಾಣಿಗಳ ಅಬ್ಬೇಪಾರಿತನ್ನಕ್ಕೆ ಕಾರಣವಾಗಿದೆ.

ಗುಚ್ಚಕ್ಕಿ ತೋಟಕ್ಕೆ ಬರುವುದಿಲ್ಲ. ಅವು ಊರೊಳಗೆ ಮಾತ್ರ ತಮ್ಮ ವಸತಿ ಮಾಡಿಕೊಂಡಿರುತ್ತವೆ. ಅದಕ್ಕೆ ಅವು ಬೇಗ ರೋಗ ರುಜಿನಗಳಿಗೆ ತುತ್ತಾಗಿ ಈಗ ಅಲ್ಪ ಸಂಖ್ಯಾತವಾಗಿವೆ. ಕಾಗೆಗಳು ಉಭಯವಾಸಿಗಳು ತೋಟ ಹೊಲ ಮತ್ತು ಊರೊಳಗೆ ಎರಡೂ ಕಡೆ ತಮ್ಮ ನೆಲೆ ಕಂಡುಕೊಂಡಿವೆ. ನಮ್ಮ ತೋಟದಲ್ಲಿ ಅವು ಕಾ ಕಾ ಎಂದು ಕೂಗಿದವೆಂದರೆ ಪರಂಗಿ ಗಿಡದಲ್ಲಿ ಹಣ್ಣುಗಳು ರೆಡಿ ಇವೆ ಎಂದೇ ಅರ್ಥ. ಅವು ಇಲಿಗಳನ್ನು ಹಿಡಿದು ತಿನ್ನುವುದು ನಿಜವಾದರೂ ಅವಕ್ಕೆ ಪರಂಗಿ, ಹಲಸು, ಸತ್ತ ಪ್ರಾಣಿಗಳು, ಮೆಣಸಿನಕಾಯಿ ಎಂದರೆ ಬಲು ಇಷ್ಟ.

ಮರಕುಟುಕ ಹಕ್ಕಿಗಳು ಯಾಕೋ ಕಮ್ಮಿಯಾದಂತೆ ಅನಿಸಿದೆ. ಎಲ್ಲೋ ಒಂದೊಂದು ಮರಕುಟುಕ ಮಿಡತೆ, ಜೇನುಹುಳ, ಕಡಜ ಮುಂತಾದ ಕೀಟಗಳನ್ನು ಕೊಕ್ಕಲ್ಲಿ ಹಿಡಿದು ಮರಕ್ಕೆ ಬಡಿದು ಸಾಯಿಸಿ ತಿನ್ನುವ ದೃಶ್ಯವನ್ನು ನೋಡಬಹುದಾಗಿದೆ. ಈ ಮೊದಲು ಅವು ಮರದ ಟೊಳ್ಳು ಭಾಗವನ್ನು ತಮ್ಮ ಕೊಕ್ಕಿನಿಂದ ಟಪ್‌ ಟಪ್‌ ಎಂದು ಕುಕ್ಕುತ್ತಾ, ಆ ಕುಕ್ಕಿದ ಭಾಗದಿಂದ ಈಚೆ ಹೊರಡುವ ಅಮಾಯಕ ಹುಳುಗಳನ್ನು ಕಬಳಿಸುವ ದೃಶ್ಯವನ್ನು ತೋಟದ ಅನೇಕ ಭಾಗಗಳಲ್ಲಿ ನೋಡಬಹುದಾಗಿತ್ತು. ಅಂಥಾ ಚೂಟಿ ಹಕ್ಕಿಗಳು ಎಲ್ಲಿ ಹೋದವೋ ಯಾರಿಗೆ ಗೊತ್ತು.

  • ಕೃಷ್ಣಮೂರ್ತಿ ಬಿಳಿಗೆರೆ

(ಹುಳಿಯಾರು ಬಿಎಂಎಸ್‌ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು. ತಮ್ಮ ತೋಟದಲ್ಲಿ ಸಹಜ ಕೃಷಿ ಮಾಡುತ್ತಲೇ ಕೃಷಿ ಶೋಧನೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾವಿರ ಕಣ್ಣಿನ ನವಿಲು, ಕಿಂಚಿತ್ತು ಪ್ರೀತಿಯ ಬದುಕು, ದಾಸಯ್ಯ ಇದು ಕನಸೇನಯ್ಯ, ಧರೆ ಮೇಲೆ ಉರಿಪಾದ, ಮಳೆ ನೀರ ಕುಡಿ. ಅನ್ನ ದೇವರ ಮುಂದೆ, ಮರದಡಿಯ ಮನುಷ್ಯ ಸೇರಿದಂತೆ ಹಲವು ಪುಸ್ತಕಗಳನ್ನು ರಚಿಸಿದ್ದಾರೆ.)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ: ಕೋಟಿ ಕೀಟಗಳ ಉಳುಮೆ, ಹುಲ್ಲು ಬೇರಿನ ಮಹಿಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...