Homeಮುಖಪುಟರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? - ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP...

ರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? – ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP ಮುಖಂಡ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಹಣ ಸಂಗ್ರಹಿಸುವ ಕಾರ್ಯ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿದಂತೆ ಬಹುತೇಕರು “90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಅಡ್ವಾಣಿ ನೇತೃತ್ವದಲ್ಲಿ 90 ರ ದಶಕದಲ್ಲಿ ಸಂಗ್ರಹವಾಗಿದ್ದ ಹಣದ ಲೆಕ್ಕ ನೀಡಿ ಎಂದು ದೇಶದಾದ್ಯಂತ ಬಹುಪಾಲು ಪ್ರಜ್ಞಾವಂತರು ಪ್ರಶ್ನೆ ಕೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎನ್‌ಡಿಟಿವಿ ಕೂಡ ವಿಶ್ವ ಹಿಂದೂ ಪರಿಷತ್‌ ಮುಖಂಡರು ಮತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಅವರನ್ನು ಪ್ರಶ್ನಿಸಿದ್ದರು. ಆದರೆ ಅವರು ಇದಕ್ಕೆ ಸ್ಪಷ್ಟ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನಾಡಿ ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯಿಂದ ಗಲಿಬಿಲಿಗೊಂಡ ಚಂಪತ್‌ ರಾಯ್‌, “ಇದು ನಿಮ್ಮ ಪ್ರಶ್ನೆ ಅಲ್ಲ, ಈ ಪ್ರಶ್ನೆಯನ್ನು ಕೇಳಲು ನಿಮಗೆ ಯಾರು ಹೇಳಿದ್ದಾರೋ, ಅವರು ಮೂರ್ಖರು, ಬುದ್ಧಿಯಿಲ್ಲದವರು” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಯು ಎನ್‌ಡಿಟಿವಿ ಕೇಳುತ್ತಿದೆ ಎಂದು ಸಂದರ್ಶಕಿ ಹೇಳಿದಾಗ, “ಈ ಪ್ರಶ್ನೆಯನ್ನು ಎನ್‌ಡಿಟಿವಿಯಲ್ಲಿನ ಯಾರು ಬರೆದು ನಿಮಗೆ ನೀಡಿದ್ದಾರೋ, ಅವರು ಮೂರ್ಖರು. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಒಟ್ಟು 37,000 ಮಂದಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಿದ್ದೇವೆ. ಮೂರು ಪ್ರಮುಖ ಬ್ಯಾಂಕ್‌ ಗಳಲ್ಲಿ ಅವರು ಖಾತೆಯನ್ನು ಹೊಂದಿದ್ದಾರೆ. ಸಂಗ್ರಹವಾದ ದೇಣಿಗೆಗಳನ್ನು ಅವರು ಮಾತ್ರವೇ ಬ್ಯಾಂಕ್‌ ಗೆ ತಂದೊಪ್ಪಿಸಬಹುದಾಗಿದೆ. ನಾವು ಮನೆಯ ಮುಂದೆ ಸ್ಟಿಕ್ಕರ್‌ ಅಂಟಿಸುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಇನ್ನು ರಾಜಕೀಯದವರು ಚುನಾವಣೆಯ ವೇಳೆ ಕರಪತ್ರ, ಸ್ಟಿಕ್ಕರ್‌, ಧ್ವಜಗಳನ್ನು ಹಾಕುತ್ತಾರೆ. ಇಲ್ಲಿಯೂ ಸ್ಟಿಕ್ಕರ್‌ ಹಾಕಿದರೆ ತಪ್ಪೇನಿಲ್ಲ” ಎಂದು ಸಂದರ್ಶನದಲ್ಲಿ ಚಂಪತ್‌ ರಾಯ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಹಾಗಾಗಿ ಈ ಪ್ರಶ್ನೆಗೆ ಸ್ಪಷ್ಟವಾದ ಉತ್ತರವನ್ನು ಯಾರು ಕೊಡುತ್ತಾರೆ ಎನ್ನುವ ಮತ್ತೊಂದು ಪ್ರಶ್ನೆ ಎದುರಾಗಿದೆ.

2017 ರಲ್ಲಿ ರಾಮ ಜನ್ಮಭೂಮಿ ವಿವಾದದ ಪ್ರಮುಖ ಸಂಘಟನೆಯಾದ ನಿರ್ಮೋಹಿ ಅಖಾಡ, “ರಾಮಮಂದಿರಕ್ಕೆ ಸಂಗ್ರಹವಾದ ಹಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಆರೋಪಿಸಿತ್ತು.


ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರಶ್ನೆಗಳನ್ನು ಕೇಳುವ ಯಾರಿಗೂ ಬುದ್ದಿಯಿಲ್ಲ.
    ಬುದ್ದಿ ಎಲ್ಲ ಇರುವುದು ಇವನಿಗೆ ಮಾತ್ರ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...