Homeಮುಖಪುಟರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? - ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP...

ರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? – ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP ಮುಖಂಡ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಹಣ ಸಂಗ್ರಹಿಸುವ ಕಾರ್ಯ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿದಂತೆ ಬಹುತೇಕರು “90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಅಡ್ವಾಣಿ ನೇತೃತ್ವದಲ್ಲಿ 90 ರ ದಶಕದಲ್ಲಿ ಸಂಗ್ರಹವಾಗಿದ್ದ ಹಣದ ಲೆಕ್ಕ ನೀಡಿ ಎಂದು ದೇಶದಾದ್ಯಂತ ಬಹುಪಾಲು ಪ್ರಜ್ಞಾವಂತರು ಪ್ರಶ್ನೆ ಕೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎನ್‌ಡಿಟಿವಿ ಕೂಡ ವಿಶ್ವ ಹಿಂದೂ ಪರಿಷತ್‌ ಮುಖಂಡರು ಮತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಅವರನ್ನು ಪ್ರಶ್ನಿಸಿದ್ದರು. ಆದರೆ ಅವರು ಇದಕ್ಕೆ ಸ್ಪಷ್ಟ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನಾಡಿ ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯಿಂದ ಗಲಿಬಿಲಿಗೊಂಡ ಚಂಪತ್‌ ರಾಯ್‌, “ಇದು ನಿಮ್ಮ ಪ್ರಶ್ನೆ ಅಲ್ಲ, ಈ ಪ್ರಶ್ನೆಯನ್ನು ಕೇಳಲು ನಿಮಗೆ ಯಾರು ಹೇಳಿದ್ದಾರೋ, ಅವರು ಮೂರ್ಖರು, ಬುದ್ಧಿಯಿಲ್ಲದವರು” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಯು ಎನ್‌ಡಿಟಿವಿ ಕೇಳುತ್ತಿದೆ ಎಂದು ಸಂದರ್ಶಕಿ ಹೇಳಿದಾಗ, “ಈ ಪ್ರಶ್ನೆಯನ್ನು ಎನ್‌ಡಿಟಿವಿಯಲ್ಲಿನ ಯಾರು ಬರೆದು ನಿಮಗೆ ನೀಡಿದ್ದಾರೋ, ಅವರು ಮೂರ್ಖರು. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಒಟ್ಟು 37,000 ಮಂದಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಿದ್ದೇವೆ. ಮೂರು ಪ್ರಮುಖ ಬ್ಯಾಂಕ್‌ ಗಳಲ್ಲಿ ಅವರು ಖಾತೆಯನ್ನು ಹೊಂದಿದ್ದಾರೆ. ಸಂಗ್ರಹವಾದ ದೇಣಿಗೆಗಳನ್ನು ಅವರು ಮಾತ್ರವೇ ಬ್ಯಾಂಕ್‌ ಗೆ ತಂದೊಪ್ಪಿಸಬಹುದಾಗಿದೆ. ನಾವು ಮನೆಯ ಮುಂದೆ ಸ್ಟಿಕ್ಕರ್‌ ಅಂಟಿಸುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಇನ್ನು ರಾಜಕೀಯದವರು ಚುನಾವಣೆಯ ವೇಳೆ ಕರಪತ್ರ, ಸ್ಟಿಕ್ಕರ್‌, ಧ್ವಜಗಳನ್ನು ಹಾಕುತ್ತಾರೆ. ಇಲ್ಲಿಯೂ ಸ್ಟಿಕ್ಕರ್‌ ಹಾಕಿದರೆ ತಪ್ಪೇನಿಲ್ಲ” ಎಂದು ಸಂದರ್ಶನದಲ್ಲಿ ಚಂಪತ್‌ ರಾಯ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಹಾಗಾಗಿ ಈ ಪ್ರಶ್ನೆಗೆ ಸ್ಪಷ್ಟವಾದ ಉತ್ತರವನ್ನು ಯಾರು ಕೊಡುತ್ತಾರೆ ಎನ್ನುವ ಮತ್ತೊಂದು ಪ್ರಶ್ನೆ ಎದುರಾಗಿದೆ.

2017 ರಲ್ಲಿ ರಾಮ ಜನ್ಮಭೂಮಿ ವಿವಾದದ ಪ್ರಮುಖ ಸಂಘಟನೆಯಾದ ನಿರ್ಮೋಹಿ ಅಖಾಡ, “ರಾಮಮಂದಿರಕ್ಕೆ ಸಂಗ್ರಹವಾದ ಹಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಆರೋಪಿಸಿತ್ತು.


ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರಶ್ನೆಗಳನ್ನು ಕೇಳುವ ಯಾರಿಗೂ ಬುದ್ದಿಯಿಲ್ಲ.
    ಬುದ್ದಿ ಎಲ್ಲ ಇರುವುದು ಇವನಿಗೆ ಮಾತ್ರ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...