Homeಮುಖಪುಟರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? - ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP...

ರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? – ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP ಮುಖಂಡ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಹಣ ಸಂಗ್ರಹಿಸುವ ಕಾರ್ಯ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿದಂತೆ ಬಹುತೇಕರು “90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಅಡ್ವಾಣಿ ನೇತೃತ್ವದಲ್ಲಿ 90 ರ ದಶಕದಲ್ಲಿ ಸಂಗ್ರಹವಾಗಿದ್ದ ಹಣದ ಲೆಕ್ಕ ನೀಡಿ ಎಂದು ದೇಶದಾದ್ಯಂತ ಬಹುಪಾಲು ಪ್ರಜ್ಞಾವಂತರು ಪ್ರಶ್ನೆ ಕೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎನ್‌ಡಿಟಿವಿ ಕೂಡ ವಿಶ್ವ ಹಿಂದೂ ಪರಿಷತ್‌ ಮುಖಂಡರು ಮತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಅವರನ್ನು ಪ್ರಶ್ನಿಸಿದ್ದರು. ಆದರೆ ಅವರು ಇದಕ್ಕೆ ಸ್ಪಷ್ಟ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನಾಡಿ ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯಿಂದ ಗಲಿಬಿಲಿಗೊಂಡ ಚಂಪತ್‌ ರಾಯ್‌, “ಇದು ನಿಮ್ಮ ಪ್ರಶ್ನೆ ಅಲ್ಲ, ಈ ಪ್ರಶ್ನೆಯನ್ನು ಕೇಳಲು ನಿಮಗೆ ಯಾರು ಹೇಳಿದ್ದಾರೋ, ಅವರು ಮೂರ್ಖರು, ಬುದ್ಧಿಯಿಲ್ಲದವರು” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಯು ಎನ್‌ಡಿಟಿವಿ ಕೇಳುತ್ತಿದೆ ಎಂದು ಸಂದರ್ಶಕಿ ಹೇಳಿದಾಗ, “ಈ ಪ್ರಶ್ನೆಯನ್ನು ಎನ್‌ಡಿಟಿವಿಯಲ್ಲಿನ ಯಾರು ಬರೆದು ನಿಮಗೆ ನೀಡಿದ್ದಾರೋ, ಅವರು ಮೂರ್ಖರು. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಒಟ್ಟು 37,000 ಮಂದಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಿದ್ದೇವೆ. ಮೂರು ಪ್ರಮುಖ ಬ್ಯಾಂಕ್‌ ಗಳಲ್ಲಿ ಅವರು ಖಾತೆಯನ್ನು ಹೊಂದಿದ್ದಾರೆ. ಸಂಗ್ರಹವಾದ ದೇಣಿಗೆಗಳನ್ನು ಅವರು ಮಾತ್ರವೇ ಬ್ಯಾಂಕ್‌ ಗೆ ತಂದೊಪ್ಪಿಸಬಹುದಾಗಿದೆ. ನಾವು ಮನೆಯ ಮುಂದೆ ಸ್ಟಿಕ್ಕರ್‌ ಅಂಟಿಸುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಇನ್ನು ರಾಜಕೀಯದವರು ಚುನಾವಣೆಯ ವೇಳೆ ಕರಪತ್ರ, ಸ್ಟಿಕ್ಕರ್‌, ಧ್ವಜಗಳನ್ನು ಹಾಕುತ್ತಾರೆ. ಇಲ್ಲಿಯೂ ಸ್ಟಿಕ್ಕರ್‌ ಹಾಕಿದರೆ ತಪ್ಪೇನಿಲ್ಲ” ಎಂದು ಸಂದರ್ಶನದಲ್ಲಿ ಚಂಪತ್‌ ರಾಯ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಹಾಗಾಗಿ ಈ ಪ್ರಶ್ನೆಗೆ ಸ್ಪಷ್ಟವಾದ ಉತ್ತರವನ್ನು ಯಾರು ಕೊಡುತ್ತಾರೆ ಎನ್ನುವ ಮತ್ತೊಂದು ಪ್ರಶ್ನೆ ಎದುರಾಗಿದೆ.

2017 ರಲ್ಲಿ ರಾಮ ಜನ್ಮಭೂಮಿ ವಿವಾದದ ಪ್ರಮುಖ ಸಂಘಟನೆಯಾದ ನಿರ್ಮೋಹಿ ಅಖಾಡ, “ರಾಮಮಂದಿರಕ್ಕೆ ಸಂಗ್ರಹವಾದ ಹಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಆರೋಪಿಸಿತ್ತು.


ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರಶ್ನೆಗಳನ್ನು ಕೇಳುವ ಯಾರಿಗೂ ಬುದ್ದಿಯಿಲ್ಲ.
    ಬುದ್ದಿ ಎಲ್ಲ ಇರುವುದು ಇವನಿಗೆ ಮಾತ್ರ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...