Homeಮುಖಪುಟರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? - ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP...

ರಾಮ ಮಂದಿರಕ್ಕಾಗಿ ಈ ಹಿಂದೆ ಸಂಗ್ರಹಿಸಿದ ಹಣ ಎಲ್ಲೋಯ್ತು? – ಪತ್ರಕರ್ತರ ಪ್ರಶ್ನೆಗೆ ತತ್ತರಿಸಿದ VHP ಮುಖಂಡ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕಾಗಿ ಹಣ ಸಂಗ್ರಹಿಸುವ ಕಾರ್ಯ ಆರಂಭವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿದಂತೆ ಬಹುತೇಕರು “90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು?” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದೂ ಹೇಳಿದ್ದಾರೆ.

ಅಡ್ವಾಣಿ ನೇತೃತ್ವದಲ್ಲಿ 90 ರ ದಶಕದಲ್ಲಿ ಸಂಗ್ರಹವಾಗಿದ್ದ ಹಣದ ಲೆಕ್ಕ ನೀಡಿ ಎಂದು ದೇಶದಾದ್ಯಂತ ಬಹುಪಾಲು ಪ್ರಜ್ಞಾವಂತರು ಪ್ರಶ್ನೆ ಕೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಎನ್‌ಡಿಟಿವಿ ಕೂಡ ವಿಶ್ವ ಹಿಂದೂ ಪರಿಷತ್‌ ಮುಖಂಡರು ಮತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಅವರನ್ನು ಪ್ರಶ್ನಿಸಿದ್ದರು. ಆದರೆ ಅವರು ಇದಕ್ಕೆ ಸ್ಪಷ್ಟ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನಾಡಿ ನುಣುಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ಸಂದರ್ಶನದಲ್ಲಿ ಕೇಳಿದ ಪ್ರಶ್ನೆಯಿಂದ ಗಲಿಬಿಲಿಗೊಂಡ ಚಂಪತ್‌ ರಾಯ್‌, “ಇದು ನಿಮ್ಮ ಪ್ರಶ್ನೆ ಅಲ್ಲ, ಈ ಪ್ರಶ್ನೆಯನ್ನು ಕೇಳಲು ನಿಮಗೆ ಯಾರು ಹೇಳಿದ್ದಾರೋ, ಅವರು ಮೂರ್ಖರು, ಬುದ್ಧಿಯಿಲ್ಲದವರು” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಈ ಪ್ರಶ್ನೆಯು ಎನ್‌ಡಿಟಿವಿ ಕೇಳುತ್ತಿದೆ ಎಂದು ಸಂದರ್ಶಕಿ ಹೇಳಿದಾಗ, “ಈ ಪ್ರಶ್ನೆಯನ್ನು ಎನ್‌ಡಿಟಿವಿಯಲ್ಲಿನ ಯಾರು ಬರೆದು ನಿಮಗೆ ನೀಡಿದ್ದಾರೋ, ಅವರು ಮೂರ್ಖರು. ಅವರಿಗೆ ಸ್ವಲ್ಪವೂ ಬುದ್ಧಿಯಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಒಟ್ಟು 37,000 ಮಂದಿ ಕಾರ್ಯಕರ್ತರನ್ನು ಈ ಕಾರ್ಯಕ್ಕೆ ನಿಯೋಜನೆ ಮಾಡಿದ್ದೇವೆ. ಮೂರು ಪ್ರಮುಖ ಬ್ಯಾಂಕ್‌ ಗಳಲ್ಲಿ ಅವರು ಖಾತೆಯನ್ನು ಹೊಂದಿದ್ದಾರೆ. ಸಂಗ್ರಹವಾದ ದೇಣಿಗೆಗಳನ್ನು ಅವರು ಮಾತ್ರವೇ ಬ್ಯಾಂಕ್‌ ಗೆ ತಂದೊಪ್ಪಿಸಬಹುದಾಗಿದೆ. ನಾವು ಮನೆಯ ಮುಂದೆ ಸ್ಟಿಕ್ಕರ್‌ ಅಂಟಿಸುವಂತೆ ಯಾರನ್ನೂ ಕೇಳಿಕೊಂಡಿಲ್ಲ. ಇನ್ನು ರಾಜಕೀಯದವರು ಚುನಾವಣೆಯ ವೇಳೆ ಕರಪತ್ರ, ಸ್ಟಿಕ್ಕರ್‌, ಧ್ವಜಗಳನ್ನು ಹಾಕುತ್ತಾರೆ. ಇಲ್ಲಿಯೂ ಸ್ಟಿಕ್ಕರ್‌ ಹಾಕಿದರೆ ತಪ್ಪೇನಿಲ್ಲ” ಎಂದು ಸಂದರ್ಶನದಲ್ಲಿ ಚಂಪತ್‌ ರಾಯ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ಹಾಗಾಗಿ ಈ ಪ್ರಶ್ನೆಗೆ ಸ್ಪಷ್ಟವಾದ ಉತ್ತರವನ್ನು ಯಾರು ಕೊಡುತ್ತಾರೆ ಎನ್ನುವ ಮತ್ತೊಂದು ಪ್ರಶ್ನೆ ಎದುರಾಗಿದೆ.

2017 ರಲ್ಲಿ ರಾಮ ಜನ್ಮಭೂಮಿ ವಿವಾದದ ಪ್ರಮುಖ ಸಂಘಟನೆಯಾದ ನಿರ್ಮೋಹಿ ಅಖಾಡ, “ರಾಮಮಂದಿರಕ್ಕೆ ಸಂಗ್ರಹವಾದ ಹಣವನ್ನು ಬಿಜೆಪಿ ತನ್ನ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಆರೋಪಿಸಿತ್ತು.


ಇದನ್ನೂ ಓದಿ: PM Cares ಲೆಕ್ಕವನ್ನೇ ಕೊಡದವರು, ರಾಮಮಂದಿರಕ್ಕೆ ಸಂಗ್ರಹಿಸುವ ಹಣದ ಲೆಕ್ಕ ಕೊಡುತ್ತಾರಾ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರಶ್ನೆಗಳನ್ನು ಕೇಳುವ ಯಾರಿಗೂ ಬುದ್ದಿಯಿಲ್ಲ.
    ಬುದ್ದಿ ಎಲ್ಲ ಇರುವುದು ಇವನಿಗೆ ಮಾತ್ರ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...