Homeಮುಖಪುಟಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

- Advertisement -
- Advertisement -

ಭಾರತದ ಸಂಸತ್ತಿಗೆ ಡಿ.13ರಂದು ಇಬ್ಬರು ಯುವಕರು ನುಗ್ಗಿದ್ದರು. ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಂಸತ್ತಿನ ಒಳಗೆ ಇಬ್ಬರು ಮತ್ತು ಹೊರಗೆ ಇಬ್ಬರು ಸೇರಿ ಈವರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಆರು ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ಘಟನೆಯನ್ನು ಭಯೋತ್ಪಾದನಾ ದಾಳಿ ಎಂದು ಹೇಳಿಕೊಂಡಿದೆ. ಅದರೆ ಅವರ ಕುಟುಂಬಗಳು ಮತ್ತು ಸ್ನೇಹಿತರ ಮಾಧ್ಯಮ ಸಂದರ್ಶನಗಳನ್ನು ಗಮನಿಸಿದಾಗ ಈ ನಾಲ್ವರು ನಿರುದ್ಯೋಗ ಸಮಸ್ಯೆಯಿಂದ ಬೇಸತ್ತಿದ್ದರು ಎನ್ನುವುದು ಕಂಡು ಬರುತ್ತದೆ. ಸಂಸತ್ತಿನಲ್ಲಿ ನಡೆದ ಭದ್ರತಾಲೋಪವು ಸಮರ್ಥನೀಯವಲ್ಲ. ಆದರೆ ಅದಕ್ಕೆ ಕಾರಣವಾಗಿ ಆರೋಪಿಗಳು ಮುಂದಿಟ್ಟಿರುವ ವಿಚಾರಗಳ ಬಗ್ಗೆ ಅವಲೋಕನ ಕೂಡ ನಡೆಸಬೇಕಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ಆರೋಪಿಗಳಲ್ಲಿ ಒಬ್ಬರಾದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಕುರಿತು ತನಿಖೆಯ ಅಧಿಕೃತ ವರದಿಗಳು ಇನ್ನೂ ಬಹಿರಂಗವಾಗಿಲ್ಲ. ಆದರೆ ನಾಲ್ವರು ಆರೋಪಿಗಳು ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿದ್ದರು ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸರಕಾರಗಳು ಯುವ ಸಮುದಾಯಕ್ಕೆ ಉದ್ಯೋಗ ಸೃಷ್ಟಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರುವುದು ಸುಳ್ಳಲ್ಲ. ಇತ್ತೀಚೆಗೆ ದೇಶದಲ್ಲಿ ಯುವ ಸಮುದಾಯಗಳು ಉದ್ಯೋಗ ಸಿಗದೆ ಅಸಮಾಧಾನಿತರಾಗಿದ್ದಾರೆ. ಜನವರಿ 2022ರಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಯಲ್ಲಿ ಅಕ್ರಮಗಳ ಬಗ್ಗೆ ಆಂದೋಲನಗಳನ್ನು ನಡೆಸಿದ್ದರು. ಬಿಹಾರದಲ್ಲಿ ಹಲವಾರು ರೈಲ್ವೇ ಕೋಚ್‌ಗಳನ್ನು ಸುಟ್ಟುಹಾಕಿ ಪ್ರತಿಭಟನೆ ನಡೆಸಿದ್ದರು.

ಜೂನ್ 2022ರಲ್ಲಿ ಸಶಸ್ತ್ರ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಯೋಜನೆಯಡಿಯಲ್ಲಿ ಅಭ್ಯರ್ಥಿಗಳನ್ನು ನಾಲ್ಕು ವರ್ಷಗಳ ಅವಧಿಗೆ ಮಾತ್ರ ನೇಮಕ ಮಾಡಲಾಗುತ್ತದೆ ಮತ್ತು ಅಭ್ಯರ್ಥಿಗಳ ವಯಸ್ಸಿನ ಮಿತಿ  ಉದ್ಯೋಗಾಕಾಂಕ್ಷಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಪ್ರತಿಭಟನೆಯ ನಂತರ ಸರ್ಕಾರವು ಆ ಗರಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 23 ಕ್ಕೆ ಏರಿಸಿತು. ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಮಹಾರಾಷ್ಟ್ರದ ಅಮೋಲ್ ಶಿಂಧೆ (25) ಈ ವಯಸ್ಸಿನ ಮಿತಿಯನ್ನು ದಾಟಿದ್ದರಿಂದ ಇತರ ನೇಮಕಾತಿ ಆಯ್ಕೆಗಳನ್ನು ಹುಡುಕುತ್ತಿದ್ದರು ಎಂದು ಲಾತೂರ್‌ನಲ್ಲಿ ಕೃಷಿ ಕೆಲಸಗಾರರಾಗಿರುವ ಅವರ ತಂದೆ ಹೇಳಿದ್ದಾರೆ. ಅಮೋಲ್‌ಗೆ ಸೇನೆ ಅಥವಾ ಪೋಲಿಸ್‌ನಲ್ಲಿ ಕೆಲಸ ನಿರೀಕ್ಷಿಸಿದ್ದ. ಆದರೆ ವಿಫಲ ಪ್ರಯತ್ನಗಳಿಂದ ಹತಾಶನಾಗಿದ್ದ ಎಂದು ಆತನ ತಂದೆ ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದರು.

ಇನ್ನೋರ್ವ ಆರೋಪಿ ನೀಲಂ ಆಜಾದ್ ಹರ್ಯಾಣ ರಾಜ್ಯದವರು.  2022ರಲ್ಲಿ ಹರ್ಯಾಣವು ಭಾರತದಲ್ಲಿ ಅತಿ ಹೆಚ್ಚು ನಿರುದ್ಯೋಗ ದರವನ್ನು 37.4% ಹೊಂದಿದೆ ಎಂದು ತಿಂಕ್ ಟ್ಯಾಂಕ್‌ (think tank) ವರದಿಯು ಬಹಿರಂಗಪಡಿಸಿತ್ತು. ಭಾರತದ ನಿರುದ್ಯೋಗ ದರವು 2022-23ರಲ್ಲಿ 10.05% ಕ್ಕೆ ಏರಿಕೆಯಾಗಿದೆ ಎಂದು CMIE ಡೇಟಾವು ಬಹಿರಂಗಪಡಿಸಿತ್ತು. ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗವು 6.2% ರಿಂದ 10.82% ಕ್ಕೆ ಏರಿಕೆಯಾಗಿದೆ ಎಂದು ವರದಿಯು ತಿಳಿಸಿತ್ತು. ಲೋಕನೀತಿ ಸಿಎಸ್‌ಡಿಸಿ ಇತ್ತೀಚಿನ ಅಧ್ಯಯನವು 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗವನ್ನು ದೇಶದ ಅತಿದೊಡ್ಡ ಸಮಸ್ಯೆಯಾಗಿ ನೋಡುತ್ತಾರೆ ಎಂದು ಹೇಳಿತ್ತು.

ಮಾಧ್ಯಮ ವರದಿಗಳ ಪ್ರಕಾರ, ನೀಲಂ ಆಜಾದ್ (37) ತನ್ನ ಎಂಫಿಲ್ ಶಿಕ್ಷಣ ಮುಗಿಸಿ ಹರ್ಯಾಣ ಶಿಕ್ಷಕರ ಅರ್ಹತಾ ಪರೀಕ್ಷೆ  ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು(ನೀಟ್‌) ತೇರ್ಗಡೆ ಹೊಂದಿದ್ದರು. ಆದರೆ ಅವರಿಗೆ ಸರಾಕಾರಿ ಹುದ್ದೆ ಸಿಕ್ಕಿರಲಿಲ್ಲ. ಆಕೆ ಕಳೆದ ಕೆಲವು ತಿಂಗಳುಗಳಿಂದ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಳು. ಬಂಧನದಲ್ಲಿರುವಾಗ ಮಾಧ್ಯಮಗಳಿಗೆ ಹೇಳಿದಂತೆ ಅವಳು ಸಾಮಾನ್ಯ ಕುಟುಂಬದಿಂದ ಬಂದವಳು, ತಂದೆ ಸಿಹಿತಿಂಡಿ ವ್ಯಾಪಾರ ಮಾಡುತ್ತಾರೆ ಮತ್ತು ಸಹೋದರ ಹಾಲು ಮಾರಾಟಗಾರರಾಗಿದ್ದ. ಮಗಳು ಉದ್ಯೋಗ ಸಿಗದೆ ಖಿನ್ನತೆಯಿಂದಿದ್ದಳು ಎಂದು ಆಕೆಯ ತಾಯಿ ಮಾದ್ಯಮದ ಜೊತೆ ಮಾತನಾಡುವಾಗ ಹೇಳಿದ್ದರು.

ಮತ್ತೊಬ್ಬ ಆರೋಪಿ ಸಾಗರ್ ಶರ್ಮಾ (25) ಅಮೋಲ್ ಶಿಂಧೆಯಂತೆಯೇ 12ನೇ ತರಗತಿಯ ನಂತರ ತನ್ನ ಶಿಕ್ಷಣವನ್ನು ನಿಲ್ಲಿಸಿದ್ದ. ಲಕ್ನೋದಲ್ಲಿನ ಬಡಗಿಯೊಬ್ಬರ ಮಗ, ಸಾಗರ್ 2018ರಲ್ಲಿ ಬೆಂಗಳೂರಿಗೆ ಕೆಲಸಕ್ಕಾಗಿ ತೆರಳಿದ್ದ. ಆದರೆ ಕೋವಿಡ್ ಸಾಂಕ್ರಾಮಿಕದ ವೇಳೆ ಮನೆಗೆ ಮರಳಿದ್ದಾನೆ. ಕಳೆದ ಕೆಲವು ತಿಂಗಳುಗಳಿಂದ ಬಾಡಿಗೆಗೆ ರಿಕ್ಷಾವನ್ನು ಓಡಿಸುತ್ತಿದ್ದ. ಆತನಿಗೆ ಸರಿಯಾದ ಉದ್ಯೋಗ ಇರಲಿಲ್ಲ.

ಸಾಗರ್ ಅವರೊಂದಿಗೆ ಲೋಕಸಭೆಯ ಒಳಗೆ ಡಬ್ಬಿಗಳಿಂದ ಬಣ್ಣದ ಹೊಗೆಯನ್ನು ಬಿಡುಗಡೆ ಮಾಡಿದ ಮನೋರಂಜನ್ ಡಿ(33) ಮೈಸೂರಿನಲ್ಲಿ ಇಂಜಿನಿಯರಿಂಗ್ ಪದವೀಧರನಾಗಿದ್ದಾನೆ. ಈ ಹಿಂದೆ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಈಗ ಕೆಲಸ ಬಿಟ್ಟು ತಂದೆಗೆ ಫಾರ್ಮ್‌ವರ್ಕ್‌ನಲ್ಲಿ ಸಹಾಯ ಮಾಡುತ್ತಿದ್ದ. ಆತನಿಗೂ ಸೂಕ್ತ ಉದ್ಯೋಗ ಇರಲಿಲ್ಲ.

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ಪ್ರಕಾರ 2010ರಲ್ಲಿ ಭಾರತದಲ್ಲಿ 15 ರಿಂದ 24 ವರ್ಷ ವಯಸ್ಸಿನ ಯುವಕರಲ್ಲಿನ ನಿರುದ್ಯೋಗ ದರ 19% ದಷ್ಟಿತ್ತು. 2022ರಲ್ಲಿ ಇದು 23% ರಷ್ಟು ಹೆಚ್ಚಳವಾಗಿದೆ. ಈ ಅಂಕಿ ಅಂಶಗಳು ಸೂಚಿಸುವಂತೆ ನಿರುದ್ಯೋಗವು ದೇಶದ ಯುವಜನರ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದೆ. ಲಕ್ಷಾಂತರ ರೂ. ವೆಚ್ಚಮಾಡಿ ಉನ್ನತ ಶಿಕ್ಷಣವನ್ನು ಪಡೆದರೂ ಉದ್ಯೋಗ ಸಿಗದೆ ಯುವ ಸಮುದಾಯ ಒತ್ತಡಕ್ಕೆ ಒಳಗಾಗಿದೆ. ಆದ್ದರಿಂದ ಸಂಸತ್ತಿನ ಭದ್ರತಾ ಲೋಪದ ಕುರಿತು ಚರ್ಚಿಸುವಾಗ ಅದಕ್ಕೆ ಆರೋಪಿಗಳು ಮುಂದಿಟ್ಟ ಕಾರಣಗಳನ್ನು ಕೂಡ ಪರಿಶೀಲಿಸಬೇಕಾದ ಅಗತ್ಯವಿದೆ.

ಇದನ್ನು ಓದಿ: ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...