Homeಮುಖಪುಟಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

- Advertisement -
- Advertisement -

ಭಾರತದ ಸಂಸತ್ತಿಗೆ ಡಿ.13ರಂದು ಇಬ್ಬರು ಯುವಕರು ನುಗ್ಗಿದ್ದರು. ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ದೇಶದಲ್ಲಿ ಭಾರೀ ಸುದ್ದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಂಸತ್ತಿನ ಒಳಗೆ ಇಬ್ಬರು ಮತ್ತು ಹೊರಗೆ ಇಬ್ಬರು ಸೇರಿ ಈವರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಆರು ಆರೋಪಿಗಳ ಪೈಕಿ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆಲವು ಮುಖ್ಯವಾಹಿನಿಯ ಮಾಧ್ಯಮಗಳು ಈ ಘಟನೆಯನ್ನು ಭಯೋತ್ಪಾದನಾ ದಾಳಿ ಎಂದು ಹೇಳಿಕೊಂಡಿದೆ. ಅದರೆ ಅವರ ಕುಟುಂಬಗಳು ಮತ್ತು ಸ್ನೇಹಿತರ ಮಾಧ್ಯಮ ಸಂದರ್ಶನಗಳನ್ನು ಗಮನಿಸಿದಾಗ ಈ ನಾಲ್ವರು ನಿರುದ್ಯೋಗ ಸಮಸ್ಯೆಯಿಂದ ಬೇಸತ್ತಿದ್ದರು ಎನ್ನುವುದು ಕಂಡು ಬರುತ್ತದೆ. ಸಂಸತ್ತಿನಲ್ಲಿ ನಡೆದ ಭದ್ರತಾಲೋಪವು ಸಮರ್ಥನೀಯವಲ್ಲ. ಆದರೆ ಅದಕ್ಕೆ ಕಾರಣವಾಗಿ ಆರೋಪಿಗಳು ಮುಂದಿಟ್ಟಿರುವ ವಿಚಾರಗಳ ಬಗ್ಗೆ ಅವಲೋಕನ ಕೂಡ ನಡೆಸಬೇಕಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ಆರೋಪಿಗಳಲ್ಲಿ ಒಬ್ಬರಾದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಕುರಿತು ತನಿಖೆಯ ಅಧಿಕೃತ ವರದಿಗಳು ಇನ್ನೂ ಬಹಿರಂಗವಾಗಿಲ್ಲ. ಆದರೆ ನಾಲ್ವರು ಆರೋಪಿಗಳು ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿದ್ದರು ಎನ್ನುವುದನ್ನು ಅಲ್ಲಗಳೆಯುವಂತಿಲ್ಲ. ಸರಕಾರಗಳು ಯುವ ಸಮುದಾಯಕ್ಕೆ ಉದ್ಯೋಗ ಸೃಷ್ಟಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರುವುದು ಸುಳ್ಳಲ್ಲ. ಇತ್ತೀಚೆಗೆ ದೇಶದಲ್ಲಿ ಯುವ ಸಮುದಾಯಗಳು ಉದ್ಯೋಗ ಸಿಗದೆ ಅಸಮಾಧಾನಿತರಾಗಿದ್ದಾರೆ. ಜನವರಿ 2022ರಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನೇಮಕಾತಿಯಲ್ಲಿ ಅಕ್ರಮಗಳ ಬಗ್ಗೆ ಆಂದೋಲನಗಳನ್ನು ನಡೆಸಿದ್ದರು. ಬಿಹಾರದಲ್ಲಿ ಹಲವಾರು ರೈಲ್ವೇ ಕೋಚ್‌ಗಳನ್ನು ಸುಟ್ಟುಹಾಕಿ ಪ್ರತಿಭಟನೆ ನಡೆಸಿದ್ದರು.

ಜೂನ್ 2022ರಲ್ಲಿ ಸಶಸ್ತ್ರ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯ ಬಗ್ಗೆ ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಯೋಜನೆಯಡಿಯಲ್ಲಿ ಅಭ್ಯರ್ಥಿಗಳನ್ನು ನಾಲ್ಕು ವರ್ಷಗಳ ಅವಧಿಗೆ ಮಾತ್ರ ನೇಮಕ ಮಾಡಲಾಗುತ್ತದೆ ಮತ್ತು ಅಭ್ಯರ್ಥಿಗಳ ವಯಸ್ಸಿನ ಮಿತಿ  ಉದ್ಯೋಗಾಕಾಂಕ್ಷಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಪ್ರತಿಭಟನೆಯ ನಂತರ ಸರ್ಕಾರವು ಆ ಗರಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 23 ಕ್ಕೆ ಏರಿಸಿತು. ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಮಹಾರಾಷ್ಟ್ರದ ಅಮೋಲ್ ಶಿಂಧೆ (25) ಈ ವಯಸ್ಸಿನ ಮಿತಿಯನ್ನು ದಾಟಿದ್ದರಿಂದ ಇತರ ನೇಮಕಾತಿ ಆಯ್ಕೆಗಳನ್ನು ಹುಡುಕುತ್ತಿದ್ದರು ಎಂದು ಲಾತೂರ್‌ನಲ್ಲಿ ಕೃಷಿ ಕೆಲಸಗಾರರಾಗಿರುವ ಅವರ ತಂದೆ ಹೇಳಿದ್ದಾರೆ. ಅಮೋಲ್‌ಗೆ ಸೇನೆ ಅಥವಾ ಪೋಲಿಸ್‌ನಲ್ಲಿ ಕೆಲಸ ನಿರೀಕ್ಷಿಸಿದ್ದ. ಆದರೆ ವಿಫಲ ಪ್ರಯತ್ನಗಳಿಂದ ಹತಾಶನಾಗಿದ್ದ ಎಂದು ಆತನ ತಂದೆ ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದರು.

ಇನ್ನೋರ್ವ ಆರೋಪಿ ನೀಲಂ ಆಜಾದ್ ಹರ್ಯಾಣ ರಾಜ್ಯದವರು.  2022ರಲ್ಲಿ ಹರ್ಯಾಣವು ಭಾರತದಲ್ಲಿ ಅತಿ ಹೆಚ್ಚು ನಿರುದ್ಯೋಗ ದರವನ್ನು 37.4% ಹೊಂದಿದೆ ಎಂದು ತಿಂಕ್ ಟ್ಯಾಂಕ್‌ (think tank) ವರದಿಯು ಬಹಿರಂಗಪಡಿಸಿತ್ತು. ಭಾರತದ ನಿರುದ್ಯೋಗ ದರವು 2022-23ರಲ್ಲಿ 10.05% ಕ್ಕೆ ಏರಿಕೆಯಾಗಿದೆ ಎಂದು CMIE ಡೇಟಾವು ಬಹಿರಂಗಪಡಿಸಿತ್ತು. ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗವು 6.2% ರಿಂದ 10.82% ಕ್ಕೆ ಏರಿಕೆಯಾಗಿದೆ ಎಂದು ವರದಿಯು ತಿಳಿಸಿತ್ತು. ಲೋಕನೀತಿ ಸಿಎಸ್‌ಡಿಸಿ ಇತ್ತೀಚಿನ ಅಧ್ಯಯನವು 15 ರಿಂದ 34 ವರ್ಷ ವಯಸ್ಸಿನ 36% ಭಾರತೀಯರು ನಿರುದ್ಯೋಗವನ್ನು ದೇಶದ ಅತಿದೊಡ್ಡ ಸಮಸ್ಯೆಯಾಗಿ ನೋಡುತ್ತಾರೆ ಎಂದು ಹೇಳಿತ್ತು.

ಮಾಧ್ಯಮ ವರದಿಗಳ ಪ್ರಕಾರ, ನೀಲಂ ಆಜಾದ್ (37) ತನ್ನ ಎಂಫಿಲ್ ಶಿಕ್ಷಣ ಮುಗಿಸಿ ಹರ್ಯಾಣ ಶಿಕ್ಷಕರ ಅರ್ಹತಾ ಪರೀಕ್ಷೆ  ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು(ನೀಟ್‌) ತೇರ್ಗಡೆ ಹೊಂದಿದ್ದರು. ಆದರೆ ಅವರಿಗೆ ಸರಾಕಾರಿ ಹುದ್ದೆ ಸಿಕ್ಕಿರಲಿಲ್ಲ. ಆಕೆ ಕಳೆದ ಕೆಲವು ತಿಂಗಳುಗಳಿಂದ ದೆಹಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಳು. ಬಂಧನದಲ್ಲಿರುವಾಗ ಮಾಧ್ಯಮಗಳಿಗೆ ಹೇಳಿದಂತೆ ಅವಳು ಸಾಮಾನ್ಯ ಕುಟುಂಬದಿಂದ ಬಂದವಳು, ತಂದೆ ಸಿಹಿತಿಂಡಿ ವ್ಯಾಪಾರ ಮಾಡುತ್ತಾರೆ ಮತ್ತು ಸಹೋದರ ಹಾಲು ಮಾರಾಟಗಾರರಾಗಿದ್ದ. ಮಗಳು ಉದ್ಯೋಗ ಸಿಗದೆ ಖಿನ್ನತೆಯಿಂದಿದ್ದಳು ಎಂದು ಆಕೆಯ ತಾಯಿ ಮಾದ್ಯಮದ ಜೊತೆ ಮಾತನಾಡುವಾಗ ಹೇಳಿದ್ದರು.

ಮತ್ತೊಬ್ಬ ಆರೋಪಿ ಸಾಗರ್ ಶರ್ಮಾ (25) ಅಮೋಲ್ ಶಿಂಧೆಯಂತೆಯೇ 12ನೇ ತರಗತಿಯ ನಂತರ ತನ್ನ ಶಿಕ್ಷಣವನ್ನು ನಿಲ್ಲಿಸಿದ್ದ. ಲಕ್ನೋದಲ್ಲಿನ ಬಡಗಿಯೊಬ್ಬರ ಮಗ, ಸಾಗರ್ 2018ರಲ್ಲಿ ಬೆಂಗಳೂರಿಗೆ ಕೆಲಸಕ್ಕಾಗಿ ತೆರಳಿದ್ದ. ಆದರೆ ಕೋವಿಡ್ ಸಾಂಕ್ರಾಮಿಕದ ವೇಳೆ ಮನೆಗೆ ಮರಳಿದ್ದಾನೆ. ಕಳೆದ ಕೆಲವು ತಿಂಗಳುಗಳಿಂದ ಬಾಡಿಗೆಗೆ ರಿಕ್ಷಾವನ್ನು ಓಡಿಸುತ್ತಿದ್ದ. ಆತನಿಗೆ ಸರಿಯಾದ ಉದ್ಯೋಗ ಇರಲಿಲ್ಲ.

ಸಾಗರ್ ಅವರೊಂದಿಗೆ ಲೋಕಸಭೆಯ ಒಳಗೆ ಡಬ್ಬಿಗಳಿಂದ ಬಣ್ಣದ ಹೊಗೆಯನ್ನು ಬಿಡುಗಡೆ ಮಾಡಿದ ಮನೋರಂಜನ್ ಡಿ(33) ಮೈಸೂರಿನಲ್ಲಿ ಇಂಜಿನಿಯರಿಂಗ್ ಪದವೀಧರನಾಗಿದ್ದಾನೆ. ಈ ಹಿಂದೆ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಈಗ ಕೆಲಸ ಬಿಟ್ಟು ತಂದೆಗೆ ಫಾರ್ಮ್‌ವರ್ಕ್‌ನಲ್ಲಿ ಸಹಾಯ ಮಾಡುತ್ತಿದ್ದ. ಆತನಿಗೂ ಸೂಕ್ತ ಉದ್ಯೋಗ ಇರಲಿಲ್ಲ.

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ಪ್ರಕಾರ 2010ರಲ್ಲಿ ಭಾರತದಲ್ಲಿ 15 ರಿಂದ 24 ವರ್ಷ ವಯಸ್ಸಿನ ಯುವಕರಲ್ಲಿನ ನಿರುದ್ಯೋಗ ದರ 19% ದಷ್ಟಿತ್ತು. 2022ರಲ್ಲಿ ಇದು 23% ರಷ್ಟು ಹೆಚ್ಚಳವಾಗಿದೆ. ಈ ಅಂಕಿ ಅಂಶಗಳು ಸೂಚಿಸುವಂತೆ ನಿರುದ್ಯೋಗವು ದೇಶದ ಯುವಜನರ ಮೇಲೆ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿದೆ. ಲಕ್ಷಾಂತರ ರೂ. ವೆಚ್ಚಮಾಡಿ ಉನ್ನತ ಶಿಕ್ಷಣವನ್ನು ಪಡೆದರೂ ಉದ್ಯೋಗ ಸಿಗದೆ ಯುವ ಸಮುದಾಯ ಒತ್ತಡಕ್ಕೆ ಒಳಗಾಗಿದೆ. ಆದ್ದರಿಂದ ಸಂಸತ್ತಿನ ಭದ್ರತಾ ಲೋಪದ ಕುರಿತು ಚರ್ಚಿಸುವಾಗ ಅದಕ್ಕೆ ಆರೋಪಿಗಳು ಮುಂದಿಟ್ಟ ಕಾರಣಗಳನ್ನು ಕೂಡ ಪರಿಶೀಲಿಸಬೇಕಾದ ಅಗತ್ಯವಿದೆ.

ಇದನ್ನು ಓದಿ: ಮಧ್ಯಪ್ರದೇಶ: ಹಿಂದುಳಿದ ವರ್ಗದ ನಾಯಕ ಪಟ್ವಾರಿಗೆ ಕಾಂಗ್ರೆಸ್‌ ಸಾರಥ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...