Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...