Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...