Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...