Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...