Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...