Homeಕರ್ನಾಟಕಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

ಮಾತಿನ ಶೂರ ಮೋದಿಯವರು ಈಗ ಎಲ್ಲಿದ್ದಾರೆ: ವ್ಯಾಕ್ಸಿನೇಷನ್ ಮುಂದೂಡಿಕೆಗೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18 ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ‌ಮಾಡಿದವರು‌ ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಪ್ರಶ್ನಿಸಿದ್ದಾರೆ.

“18 ರಿಂದ 25 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಪ್ರಧಾನಿಯವರಿಗೆ ಗೊತ್ತಿರಲಿಲ್ಲವೇ? ಮುಖ್ಯಮಂತ್ರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿಲ್ಲವೇ? ಮಾತು ತಪ್ಪಿದ ಪ್ರಧಾನಿ ಅವರು ಟಿವಿಯಲ್ಲಿ‌ ಕಾಣಿಸಿಕೊಂಡು ನಿಜ‌ ಸಂಗತಿ ತಿಳಿಸಿ ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ಲಸಿಕೆ ಪಡೆದುಕೊಳ್ಳಲು ಆನ್‌ಲೈನ್ ಮೂಲಕ ಜನರು ಹೆಸರನ್ನು ನೋಂದಣಿ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಈ ಆನ್‌ಲೈನ್ ನೋಂದಣಿ ಕಷ್ಟದ ಕೆಲಸ. ಹೀಗಾಗಿ ಕೊರೊನಾ ಲಸಿಕೆ ನೀಡುವುದನ್ನು ಪೋಲಿಯೋ ಲಸಿಕೆ ಮಾದರಿಯಲ್ಲೆ ಒಂದು ಅಭಿಯಾನವಾಗಿ ರೂಪಿಸಿ, ಜನರ ಬಳಿಗೆ ಹೋಗಿ ಲಸಿಕೆ ನೀಡಬೇಕು” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಕಾಂಗ್ರೆಸ್‌ಗೆ ಭರ್ಜರಿ ಜಯ – ಬಿಜೆಪಿಗೆ ಮುಖಭಂಗ

“ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ತುಂಬಾ ಕಡಿಮೆ ಇದೆ. ಹೀಗಾಗಿ ರಾಜ್ಯದಲ್ಲಿರುವ 18 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಎಲ್ಲರಿಗೂ ಶೀಘ್ರವಾಗಿ ಲಸಿಕೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡಬೇಕು” ಎಂದು ಹೇಳಿದ್ದಾರೆ.

“ಸರ್ಕಾರದ ಮುಖ್ಯಕಾರ್ಯದರ್ಶಿಯವರ ಜೊತೆ ಲಸಿಕೆ ವಿಚಾರವಾಗಿ ಚರ್ಚಿಸಿದ್ದೇನೆ. ಆರುವರೆ ಕೋಟಿ ಲಸಿಕೆಯ ಅಗತ್ಯವಿದೆ ಎಂದಿದ್ದಾರೆ. ನನ್ನ ಪ್ರಕಾರ ಈ ತಿಂಗಳ ಅಂತ್ಯದ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದನ್ನು ಪ್ರಾರಂಭಿಸಲು ಸಾಧ್ಯವಾಗದು. ಬೇಗ ಸಿಕ್ಕಿದ್ದರೆ ಸೋಂಕು ಇನ್ನಷ್ಟು ಕಡಿಮೆಯಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಲಸಿಕೆ ತಯಾರಿಕೆ ಸಂಬಂಧ 162 ಯುನಿಟ್ ಗಳಿಗೆ ಕೇಂದ್ರ ಸರ್ಕಾರ ಟೆಂಡರ್ ಕರೆದಿತ್ತು. ಈ ಪೈಕಿ 30 ಯುನಿಟ್ ಗಳಷ್ಟೇ ಕಾರ್ಯಾರಂಭ ಮಾಡಿವೆ. ದೇಶದಲ್ಲಿ ಲಸಿಕೆಯ ಅಭಾವ ಉಂಟಾಗಲು ಇದೇ ಮುಖ್ಯ ಕಾರಣ. ಒಟ್ಟಿನಲ್ಲಿ ಕೇಂದ್ರ ಸರ್ಕಾರದ ತಾತ್ಸಾರ ಧೋರಣೆಗೆ ಜನ ಜೀವ ತೆರುವಂತಾಗಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

“45 ವರ್ಷ ಮೇಲ್ಪಟ್ಟವರಿಗೆ ನೀಡುವ ಲಸಿಕೆಗಷ್ಟೇ ಕೇಂದ್ರ ಸರ್ಕಾರ ಹಣ ಕೊಡುವುದು. ಅದಕ್ಕಿಂತ ಕೆಳಗಿನ ವಯೋಮಾನದ ಜನರಿಗೆ ನೀಡುವ ಲಸಿಕೆಗೆ ರಾಜ್ಯಗಳೇ ಹಣ ಹಾಕಬೇಕು. ಸದ್ಯದ ಪರಿಸ್ಥಿತಿಯಲ್ಲಿ ಲಸಿಕೆ ಪಡೆಯುವುದೊಂದೆ ಸೋಂಕು ತಡೆಗಟ್ಟಲು ಇರುವ ದಾರಿ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಎಲ್ಲರಿಗೂ ಲಸಿಕೆ ನೀಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

“ಈ ವರೆಗೆ 45 ವರ್ಷ ಮೇಲ್ಪಟ್ಟ ಶೇ.25 ಜನರಿಗಷ್ಟೇ ಕೊರೊನಾ ಲಸಿಕೆ ನೀಡಲಾಗಿದೆ. ನಮ್ಮಲ್ಲೇ ಲಸಿಕೆಯ ಅಗತ್ಯತೆ ಹೆಚ್ಚಿರುವಾಗ ಪ್ರಧಾನಿ ಮೋದಿ ಅವರು ವಿದೇಶಗಳಿಗೆ 6 ಕೋಟಿ ಲಸಿಕೆ ನೀಡಿ ಭಾರತೀಯರು ಲಸಿಕೆಗಾಗಿ ಪರದಾಡುವಂತೆ ಮಾಡಿದ್ದಾರೆ. ಸೋಂಕು ಹರಡಲು ಇದೂ ಒಂದು ಕಾರಣ. ನಿತ್ಯ ಕೊರೊನಾ ಸೋಂಕು ಮಿತಿಮೀರಿ ಏರಿಕೆಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ” ಎಂದು ಅವರು ಕಿಡಿ ಕಾರಿದ್ದಾರೆ.

“ಬಿಜೆಪಿ ನಾಯಕರು ಕೊರೊನಾ ಸೋಂಕು ತಡೆಗಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಲಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಲಿ. ಸರ್ಕಾರದ ಅದಕ್ಷತೆ ಹಾಗೂ ದುರಾಡಳಿತಕ್ಕೆ ಅಮಾಯಕ ಜನರು ಬಲಿಯಾಗುವುದು ಬೇಡ.
ರಾಜ್ಯ ಕಾಂಗ್ರೆಸ್ ಪಕ್ಷವು ಬಡರೋಗಿಗಳಿಗಾಗಿ 10 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿ ಅವುಗಳ ಮೂಲಕ ಉಚಿತ ಸೇವೆ ನೀಡುತ್ತಿದೆ ಹಾಗೂ ಕೊರೊನಾ ಸಹಾಯವಾಣಿಯನ್ನು ತೆರೆದು ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡುತ್ತಿದೆ. ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಇಂಥಾ ಸಂಕಷ್ಟದ ಸಮಯದಲ್ಲಿ ಜನರ ಜೊತೆ ನಿಂತು, ನೆರವಾಗಬೇಕು” ಪಕ್ಷಕ್ಕೆ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...