Homeಮುಖಪುಟತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವಂತೆಯೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ-ಹಿಂಸೆಗಳು ಹೆಚ್ಚತೊಡಗಿವೆ. ಕೊರೊನಾ ಭಯೋತ್ಪಾದನೆ, ಕೊರೊನಾ ಜಿಹಾದ್, ಕೊರೊನಾ ಬಾಂಬ್, ತಬ್ಲಿಘಿ ಹ್ಯಾಷ್ ಟ್ಯಾಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ದೃಶ್ಯಮಾಧ್ಯಮಗಳಲ್ಲಿ ಸುಳ್ಳು ಹರಡುತ್ತ ಸಮುದಾಯವನ್ನು ಅವಮಾನಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದರಿಂದ ಹೊರಟ ಆತಂಕದ ಅಲೆಗಳು ಸಮಾಜದ ನಡುವೆ ಅಪ್ಪಳಿಸುತ್ತಲೇ ಇವೆ. ಸುಳ್ಳು-ಅಪಪ್ರಚಾರವನ್ನು ಮಾಡಲಾಗುತ್ತಿದೆ. ಇದರ ನಡುವೆ ಮುಸ್ಲಿಮರಿಗೆ ವ್ಯಾಪರಕ್ಕೆ ಅಡ್ಡಿ, ಅವರ ಮನೆಗಳ ಮೇಲೆ ಕಲ್ಲುತೂರಾಟ, ಮುಸ್ಲಿಮರನ್ನು ನಿಂದಿಸುವ ಪ್ರಕರಣಗಳು ವರದಿ ಆಗುತ್ತಿದ್ದರೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುವ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಜಿಲ್ಲೆಯಲ್ಲಿ ಮೂರು ಘಟನೆಗಳು ನಾಗರೀಕ ಸಮಾಜವನ್ನು ತಲ್ಲಣಗೊಳಿಸುವಂತೆ ಮಾಡಿವೆ. ತುಮಕೂರಿನ ಸದಾಶಿವ ನಗರದಲ್ಲಿ ತಳ್ಳುವಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಹೋದ ಮುಸ್ಲಿಂ ವ್ಯಾಪಾರಿಗಳನ್ನು ನೀವು ರಸ್ತೆಗೆ ಇಳಿಯಬೇಡಿ, ತರಕಾರಿ ಮಾರಾಟ ಮಾಡಬೇಡಿ, ನೀವೇ ಕೊರೋನಾ ಹರಡುತ್ತಿರುವುದು, ನೀವು ಮನೆಬಿಟ್ಟು ಹೊರಬರಬೇಡಿ ಎಂದು ಹಿಂದೂ ಯುವಕರು ಧಮಕಿಹಾಕಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ಮೌನವಾಗಿ ಹಿಂದಿರುಗಿದ್ದಾರೆ. ಇಂತಹ ಅಮಾನವೀಯ ಘಟನೆಗಳಿಂದ ನೊಂದಿರುವ ಸಮುದಾಯ ನೋವನ್ನು ನುಂಗಿಕೊಂಡಿದೆ. ಇದು ಕೆಲ ವಿದ್ಯಾವಂತ ಮುಸ್ಲಿಂ ಸಮುದಾಯ ತಮ್ಮ ನಡುವೆಯೇ ಚರ್ಚೆ ನಡೆಸುತ್ತಿದ್ದು ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದೆ.

ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಮೂರುದಿನಗಳ ಹಿಂದೆ ಕಲ್ಲುತೂರಾಟ ನಡೆಸಲಾಗಿದೆ. ಸಂಘಪರಿವಾರ ಪ್ರೇರಿತ ಯುವಕರು ಕಲ್ಲುತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಮುಸ್ಲಿಮರು ಆತಂಕಗೊಂಡಿದ್ದಾರೆ. ಕಲ್ಲುತೂರಾಟದಿಂದ ಭೀತರಾಗಿರುವ ಮುಸ್ಲಿಂ ಸಮುದಾಯ ಜೀವವನ್ನು ಕೈಯಲ್ಲಿಡಿದು ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಜ್ಞಾವಂತ ಮುಸ್ಲಿಂ ಯುವಕರಿಂದ ನಡೆಯುತ್ತಿದೆ

ಕೊರೊನಾ ಸೋಂಕಿಗೆ ಸಿರಾ ತಾಲೂಕಿನ ವ್ಯಕ್ತಿಯೊಬ್ಬರು ಬಲಿಯಾದ ಮೇಲೆ ಸೂಕ್ಷ್ಮವಾತಾವರಣ ಏರ್ಪಟ್ಟಿದೆ. ಕೆಲ ಯುವಕ ಗುಂಪುಗಳು ಜನರ ನಡುವೆ ದ್ವೇಷ ಮೂಡಿಸುವಂತಹ ಕೆಲಸದಲ್ಲಿ ತೊಡಗಿವೆ. ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿವೆ. ಎಪ್ರಿಲ್ 16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲು ತರಲು ಹೋಗಿದ್ದಾರೆ. ಹಾಲು ತೆಗೆದುಕೊಳ್ಳುತ್ತಿದ್ದಾಗ ಬ್ರಾಹ್ಮಣ ವ್ಯಕ್ತಿಯೊಬ್ಬರು ನೀವು ಮುಸ್ಲಿಮರು, ಕೊರೊನಾ ಹರಡುತ್ತಿರುವುದು ನಿಮ್ಮಿಂದಲೇ, ನೀವು ಹೀಗೆಲ್ಲ ಬರಬೇಡಿ ಎಂದು ಹೇಳಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಎರಡು ಕೋಮುಗಳ ನಡುವೆ ಜಗಳವಾಗಿದೆ. ಈ ಪ್ರಕರಣ ಪೊಲೀಸ್ ಮೆಟ್ಟಿಲು ಹತ್ತಿದ್ದು ಎಫ್ಐಆರ್ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಕೆಲಸ ಮಾಡಿದ ವ್ಯಕ್ತಿಯನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳು ನಡಯುತ್ತಿವೆ.

ದೇಶದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಂದ ಹಿರಿಯ ಜೀವಗಳು ಬೆಚ್ಚಿಬಿದ್ದಿವೆ. ಸೊಗಡು ಶಿವಣ್ಣರಂಥ ಮಾಜಿ ಸಚಿವರು ಕೂಡ ಮನಸ್ಸಿಗೆ ತೋಚಿದಂತೆ ಮಾತನಾಡುತ್ತಿರುವುದು, ಧರ್ಮ-ಧರ್ಮಗಳ ನಡುವೆ ಸೇಡಿನ ಮನೋಭಾವ, ದ್ವೇಷ ಮೂಡಿಸುವ ಕೆಲಸ ಮಾಡುತ್ತಿರುವುದನ್ನು ನೋಡಿ ದೇಶ ಎತ್ತಸಾಗುತ್ತಿದೆ ಎನ್ನುವಂತಾಗಿದೆ. ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀಗೆ ವರ್ತಿಸಿದರೆ ಹೇಗೆ ಎಂಬ ಪ್ರಶ್ನೆ ಏಳತೊಡಗಿವೆ. ಇದು ಎಲ್ಲಿಗೆ ಹೋಗಿ ತಲುಪುತ್ತೋ ಎಂಬ ಆತಂಕ ವ್ಯಕ್ತವಾಗಿದೆ. ಮನುಕುಲದ ಉದ್ದಾರಕ್ಕೆ ಶ್ರಮಿಸಬೇಕಾದ ವ್ಯಕ್ತಿಗಳು ಸಮಾಜದವನ್ನು ಒಡೆಯುವಂತಹ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ ಎಂದು ಹಿರಿಯ ಜೀವಗಳು ಮರುಗತೊಡಗಿವೆ. ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಜನರ ನೆಮ್ಮದಿಗೆ ಭಂಗ ತರತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please do not think in a single angle.try to think in both angle then you will solve the problem .first you should try to educate the Muslim people regarding corona through the news .and create awerness to them.otherwise your news also nothing but all news

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...