Homeಮುಖಪುಟತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವಂತೆಯೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ-ಹಿಂಸೆಗಳು ಹೆಚ್ಚತೊಡಗಿವೆ. ಕೊರೊನಾ ಭಯೋತ್ಪಾದನೆ, ಕೊರೊನಾ ಜಿಹಾದ್, ಕೊರೊನಾ ಬಾಂಬ್, ತಬ್ಲಿಘಿ ಹ್ಯಾಷ್ ಟ್ಯಾಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ದೃಶ್ಯಮಾಧ್ಯಮಗಳಲ್ಲಿ ಸುಳ್ಳು ಹರಡುತ್ತ ಸಮುದಾಯವನ್ನು ಅವಮಾನಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದರಿಂದ ಹೊರಟ ಆತಂಕದ ಅಲೆಗಳು ಸಮಾಜದ ನಡುವೆ ಅಪ್ಪಳಿಸುತ್ತಲೇ ಇವೆ. ಸುಳ್ಳು-ಅಪಪ್ರಚಾರವನ್ನು ಮಾಡಲಾಗುತ್ತಿದೆ. ಇದರ ನಡುವೆ ಮುಸ್ಲಿಮರಿಗೆ ವ್ಯಾಪರಕ್ಕೆ ಅಡ್ಡಿ, ಅವರ ಮನೆಗಳ ಮೇಲೆ ಕಲ್ಲುತೂರಾಟ, ಮುಸ್ಲಿಮರನ್ನು ನಿಂದಿಸುವ ಪ್ರಕರಣಗಳು ವರದಿ ಆಗುತ್ತಿದ್ದರೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುವ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಜಿಲ್ಲೆಯಲ್ಲಿ ಮೂರು ಘಟನೆಗಳು ನಾಗರೀಕ ಸಮಾಜವನ್ನು ತಲ್ಲಣಗೊಳಿಸುವಂತೆ ಮಾಡಿವೆ. ತುಮಕೂರಿನ ಸದಾಶಿವ ನಗರದಲ್ಲಿ ತಳ್ಳುವಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಹೋದ ಮುಸ್ಲಿಂ ವ್ಯಾಪಾರಿಗಳನ್ನು ನೀವು ರಸ್ತೆಗೆ ಇಳಿಯಬೇಡಿ, ತರಕಾರಿ ಮಾರಾಟ ಮಾಡಬೇಡಿ, ನೀವೇ ಕೊರೋನಾ ಹರಡುತ್ತಿರುವುದು, ನೀವು ಮನೆಬಿಟ್ಟು ಹೊರಬರಬೇಡಿ ಎಂದು ಹಿಂದೂ ಯುವಕರು ಧಮಕಿಹಾಕಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ಮೌನವಾಗಿ ಹಿಂದಿರುಗಿದ್ದಾರೆ. ಇಂತಹ ಅಮಾನವೀಯ ಘಟನೆಗಳಿಂದ ನೊಂದಿರುವ ಸಮುದಾಯ ನೋವನ್ನು ನುಂಗಿಕೊಂಡಿದೆ. ಇದು ಕೆಲ ವಿದ್ಯಾವಂತ ಮುಸ್ಲಿಂ ಸಮುದಾಯ ತಮ್ಮ ನಡುವೆಯೇ ಚರ್ಚೆ ನಡೆಸುತ್ತಿದ್ದು ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದೆ.

ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಮೂರುದಿನಗಳ ಹಿಂದೆ ಕಲ್ಲುತೂರಾಟ ನಡೆಸಲಾಗಿದೆ. ಸಂಘಪರಿವಾರ ಪ್ರೇರಿತ ಯುವಕರು ಕಲ್ಲುತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಮುಸ್ಲಿಮರು ಆತಂಕಗೊಂಡಿದ್ದಾರೆ. ಕಲ್ಲುತೂರಾಟದಿಂದ ಭೀತರಾಗಿರುವ ಮುಸ್ಲಿಂ ಸಮುದಾಯ ಜೀವವನ್ನು ಕೈಯಲ್ಲಿಡಿದು ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಜ್ಞಾವಂತ ಮುಸ್ಲಿಂ ಯುವಕರಿಂದ ನಡೆಯುತ್ತಿದೆ

ಕೊರೊನಾ ಸೋಂಕಿಗೆ ಸಿರಾ ತಾಲೂಕಿನ ವ್ಯಕ್ತಿಯೊಬ್ಬರು ಬಲಿಯಾದ ಮೇಲೆ ಸೂಕ್ಷ್ಮವಾತಾವರಣ ಏರ್ಪಟ್ಟಿದೆ. ಕೆಲ ಯುವಕ ಗುಂಪುಗಳು ಜನರ ನಡುವೆ ದ್ವೇಷ ಮೂಡಿಸುವಂತಹ ಕೆಲಸದಲ್ಲಿ ತೊಡಗಿವೆ. ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿವೆ. ಎಪ್ರಿಲ್ 16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲು ತರಲು ಹೋಗಿದ್ದಾರೆ. ಹಾಲು ತೆಗೆದುಕೊಳ್ಳುತ್ತಿದ್ದಾಗ ಬ್ರಾಹ್ಮಣ ವ್ಯಕ್ತಿಯೊಬ್ಬರು ನೀವು ಮುಸ್ಲಿಮರು, ಕೊರೊನಾ ಹರಡುತ್ತಿರುವುದು ನಿಮ್ಮಿಂದಲೇ, ನೀವು ಹೀಗೆಲ್ಲ ಬರಬೇಡಿ ಎಂದು ಹೇಳಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಎರಡು ಕೋಮುಗಳ ನಡುವೆ ಜಗಳವಾಗಿದೆ. ಈ ಪ್ರಕರಣ ಪೊಲೀಸ್ ಮೆಟ್ಟಿಲು ಹತ್ತಿದ್ದು ಎಫ್ಐಆರ್ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಕೆಲಸ ಮಾಡಿದ ವ್ಯಕ್ತಿಯನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳು ನಡಯುತ್ತಿವೆ.

ದೇಶದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಂದ ಹಿರಿಯ ಜೀವಗಳು ಬೆಚ್ಚಿಬಿದ್ದಿವೆ. ಸೊಗಡು ಶಿವಣ್ಣರಂಥ ಮಾಜಿ ಸಚಿವರು ಕೂಡ ಮನಸ್ಸಿಗೆ ತೋಚಿದಂತೆ ಮಾತನಾಡುತ್ತಿರುವುದು, ಧರ್ಮ-ಧರ್ಮಗಳ ನಡುವೆ ಸೇಡಿನ ಮನೋಭಾವ, ದ್ವೇಷ ಮೂಡಿಸುವ ಕೆಲಸ ಮಾಡುತ್ತಿರುವುದನ್ನು ನೋಡಿ ದೇಶ ಎತ್ತಸಾಗುತ್ತಿದೆ ಎನ್ನುವಂತಾಗಿದೆ. ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀಗೆ ವರ್ತಿಸಿದರೆ ಹೇಗೆ ಎಂಬ ಪ್ರಶ್ನೆ ಏಳತೊಡಗಿವೆ. ಇದು ಎಲ್ಲಿಗೆ ಹೋಗಿ ತಲುಪುತ್ತೋ ಎಂಬ ಆತಂಕ ವ್ಯಕ್ತವಾಗಿದೆ. ಮನುಕುಲದ ಉದ್ದಾರಕ್ಕೆ ಶ್ರಮಿಸಬೇಕಾದ ವ್ಯಕ್ತಿಗಳು ಸಮಾಜದವನ್ನು ಒಡೆಯುವಂತಹ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ ಎಂದು ಹಿರಿಯ ಜೀವಗಳು ಮರುಗತೊಡಗಿವೆ. ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಜನರ ನೆಮ್ಮದಿಗೆ ಭಂಗ ತರತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please do not think in a single angle.try to think in both angle then you will solve the problem .first you should try to educate the Muslim people regarding corona through the news .and create awerness to them.otherwise your news also nothing but all news

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...