Homeಮುಖಪುಟತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವಂತೆಯೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ-ಹಿಂಸೆಗಳು ಹೆಚ್ಚತೊಡಗಿವೆ. ಕೊರೊನಾ ಭಯೋತ್ಪಾದನೆ, ಕೊರೊನಾ ಜಿಹಾದ್, ಕೊರೊನಾ ಬಾಂಬ್, ತಬ್ಲಿಘಿ ಹ್ಯಾಷ್ ಟ್ಯಾಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ದೃಶ್ಯಮಾಧ್ಯಮಗಳಲ್ಲಿ ಸುಳ್ಳು ಹರಡುತ್ತ ಸಮುದಾಯವನ್ನು ಅವಮಾನಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದರಿಂದ ಹೊರಟ ಆತಂಕದ ಅಲೆಗಳು ಸಮಾಜದ ನಡುವೆ ಅಪ್ಪಳಿಸುತ್ತಲೇ ಇವೆ. ಸುಳ್ಳು-ಅಪಪ್ರಚಾರವನ್ನು ಮಾಡಲಾಗುತ್ತಿದೆ. ಇದರ ನಡುವೆ ಮುಸ್ಲಿಮರಿಗೆ ವ್ಯಾಪರಕ್ಕೆ ಅಡ್ಡಿ, ಅವರ ಮನೆಗಳ ಮೇಲೆ ಕಲ್ಲುತೂರಾಟ, ಮುಸ್ಲಿಮರನ್ನು ನಿಂದಿಸುವ ಪ್ರಕರಣಗಳು ವರದಿ ಆಗುತ್ತಿದ್ದರೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುವ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಜಿಲ್ಲೆಯಲ್ಲಿ ಮೂರು ಘಟನೆಗಳು ನಾಗರೀಕ ಸಮಾಜವನ್ನು ತಲ್ಲಣಗೊಳಿಸುವಂತೆ ಮಾಡಿವೆ. ತುಮಕೂರಿನ ಸದಾಶಿವ ನಗರದಲ್ಲಿ ತಳ್ಳುವಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಹೋದ ಮುಸ್ಲಿಂ ವ್ಯಾಪಾರಿಗಳನ್ನು ನೀವು ರಸ್ತೆಗೆ ಇಳಿಯಬೇಡಿ, ತರಕಾರಿ ಮಾರಾಟ ಮಾಡಬೇಡಿ, ನೀವೇ ಕೊರೋನಾ ಹರಡುತ್ತಿರುವುದು, ನೀವು ಮನೆಬಿಟ್ಟು ಹೊರಬರಬೇಡಿ ಎಂದು ಹಿಂದೂ ಯುವಕರು ಧಮಕಿಹಾಕಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ಮೌನವಾಗಿ ಹಿಂದಿರುಗಿದ್ದಾರೆ. ಇಂತಹ ಅಮಾನವೀಯ ಘಟನೆಗಳಿಂದ ನೊಂದಿರುವ ಸಮುದಾಯ ನೋವನ್ನು ನುಂಗಿಕೊಂಡಿದೆ. ಇದು ಕೆಲ ವಿದ್ಯಾವಂತ ಮುಸ್ಲಿಂ ಸಮುದಾಯ ತಮ್ಮ ನಡುವೆಯೇ ಚರ್ಚೆ ನಡೆಸುತ್ತಿದ್ದು ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದೆ.

ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಮೂರುದಿನಗಳ ಹಿಂದೆ ಕಲ್ಲುತೂರಾಟ ನಡೆಸಲಾಗಿದೆ. ಸಂಘಪರಿವಾರ ಪ್ರೇರಿತ ಯುವಕರು ಕಲ್ಲುತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಮುಸ್ಲಿಮರು ಆತಂಕಗೊಂಡಿದ್ದಾರೆ. ಕಲ್ಲುತೂರಾಟದಿಂದ ಭೀತರಾಗಿರುವ ಮುಸ್ಲಿಂ ಸಮುದಾಯ ಜೀವವನ್ನು ಕೈಯಲ್ಲಿಡಿದು ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಜ್ಞಾವಂತ ಮುಸ್ಲಿಂ ಯುವಕರಿಂದ ನಡೆಯುತ್ತಿದೆ

ಕೊರೊನಾ ಸೋಂಕಿಗೆ ಸಿರಾ ತಾಲೂಕಿನ ವ್ಯಕ್ತಿಯೊಬ್ಬರು ಬಲಿಯಾದ ಮೇಲೆ ಸೂಕ್ಷ್ಮವಾತಾವರಣ ಏರ್ಪಟ್ಟಿದೆ. ಕೆಲ ಯುವಕ ಗುಂಪುಗಳು ಜನರ ನಡುವೆ ದ್ವೇಷ ಮೂಡಿಸುವಂತಹ ಕೆಲಸದಲ್ಲಿ ತೊಡಗಿವೆ. ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿವೆ. ಎಪ್ರಿಲ್ 16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲು ತರಲು ಹೋಗಿದ್ದಾರೆ. ಹಾಲು ತೆಗೆದುಕೊಳ್ಳುತ್ತಿದ್ದಾಗ ಬ್ರಾಹ್ಮಣ ವ್ಯಕ್ತಿಯೊಬ್ಬರು ನೀವು ಮುಸ್ಲಿಮರು, ಕೊರೊನಾ ಹರಡುತ್ತಿರುವುದು ನಿಮ್ಮಿಂದಲೇ, ನೀವು ಹೀಗೆಲ್ಲ ಬರಬೇಡಿ ಎಂದು ಹೇಳಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಎರಡು ಕೋಮುಗಳ ನಡುವೆ ಜಗಳವಾಗಿದೆ. ಈ ಪ್ರಕರಣ ಪೊಲೀಸ್ ಮೆಟ್ಟಿಲು ಹತ್ತಿದ್ದು ಎಫ್ಐಆರ್ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಕೆಲಸ ಮಾಡಿದ ವ್ಯಕ್ತಿಯನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳು ನಡಯುತ್ತಿವೆ.

ದೇಶದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಂದ ಹಿರಿಯ ಜೀವಗಳು ಬೆಚ್ಚಿಬಿದ್ದಿವೆ. ಸೊಗಡು ಶಿವಣ್ಣರಂಥ ಮಾಜಿ ಸಚಿವರು ಕೂಡ ಮನಸ್ಸಿಗೆ ತೋಚಿದಂತೆ ಮಾತನಾಡುತ್ತಿರುವುದು, ಧರ್ಮ-ಧರ್ಮಗಳ ನಡುವೆ ಸೇಡಿನ ಮನೋಭಾವ, ದ್ವೇಷ ಮೂಡಿಸುವ ಕೆಲಸ ಮಾಡುತ್ತಿರುವುದನ್ನು ನೋಡಿ ದೇಶ ಎತ್ತಸಾಗುತ್ತಿದೆ ಎನ್ನುವಂತಾಗಿದೆ. ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀಗೆ ವರ್ತಿಸಿದರೆ ಹೇಗೆ ಎಂಬ ಪ್ರಶ್ನೆ ಏಳತೊಡಗಿವೆ. ಇದು ಎಲ್ಲಿಗೆ ಹೋಗಿ ತಲುಪುತ್ತೋ ಎಂಬ ಆತಂಕ ವ್ಯಕ್ತವಾಗಿದೆ. ಮನುಕುಲದ ಉದ್ದಾರಕ್ಕೆ ಶ್ರಮಿಸಬೇಕಾದ ವ್ಯಕ್ತಿಗಳು ಸಮಾಜದವನ್ನು ಒಡೆಯುವಂತಹ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ ಎಂದು ಹಿರಿಯ ಜೀವಗಳು ಮರುಗತೊಡಗಿವೆ. ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಜನರ ನೆಮ್ಮದಿಗೆ ಭಂಗ ತರತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please do not think in a single angle.try to think in both angle then you will solve the problem .first you should try to educate the Muslim people regarding corona through the news .and create awerness to them.otherwise your news also nothing but all news

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....