Homeಮುಖಪುಟತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

ತುಮಕೂರಿನಲ್ಲಿ ಮುಸ್ಲಿಮರಿಗೆ ಬೆದರಿಕೆ: ಕೊರೊನಾ ಸಮಯದಲ್ಲಿ ಒಂದಾಗಬೇಕಿದ್ದ ನಮ್ಮ ಸಮಾಜ ಎತ್ತ ಸಾಗುತ್ತಿದೆ?

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವಂತೆಯೇ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮೇಲೆ ಹಲ್ಲೆ-ಹಿಂಸೆಗಳು ಹೆಚ್ಚತೊಡಗಿವೆ. ಕೊರೊನಾ ಭಯೋತ್ಪಾದನೆ, ಕೊರೊನಾ ಜಿಹಾದ್, ಕೊರೊನಾ ಬಾಂಬ್, ತಬ್ಲಿಘಿ ಹ್ಯಾಷ್ ಟ್ಯಾಗ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ದೃಶ್ಯಮಾಧ್ಯಮಗಳಲ್ಲಿ ಸುಳ್ಳು ಹರಡುತ್ತ ಸಮುದಾಯವನ್ನು ಅವಮಾನಿಸುವ ಘಟನೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ದೆಹಲಿ ನಿಜಾಮುದ್ದೀನ್ ತಬ್ಲಿಘಿ ಜಮಾತ್ ಸಭೆ ನಡೆದು ಒಂದು ತಿಂಗಳು ಕಳೆಯುತ್ತಾ ಬಂದಿದ್ದರೂ ಅದರಿಂದ ಹೊರಟ ಆತಂಕದ ಅಲೆಗಳು ಸಮಾಜದ ನಡುವೆ ಅಪ್ಪಳಿಸುತ್ತಲೇ ಇವೆ. ಸುಳ್ಳು-ಅಪಪ್ರಚಾರವನ್ನು ಮಾಡಲಾಗುತ್ತಿದೆ. ಇದರ ನಡುವೆ ಮುಸ್ಲಿಮರಿಗೆ ವ್ಯಾಪರಕ್ಕೆ ಅಡ್ಡಿ, ಅವರ ಮನೆಗಳ ಮೇಲೆ ಕಲ್ಲುತೂರಾಟ, ಮುಸ್ಲಿಮರನ್ನು ನಿಂದಿಸುವ ಪ್ರಕರಣಗಳು ವರದಿ ಆಗುತ್ತಿದ್ದರೂ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.

ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾನಸಿಕ ಹಿಂಸೆ ನೀಡುವ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿಲ್ಲ. ಜಿಲ್ಲೆಯಲ್ಲಿ ಮೂರು ಘಟನೆಗಳು ನಾಗರೀಕ ಸಮಾಜವನ್ನು ತಲ್ಲಣಗೊಳಿಸುವಂತೆ ಮಾಡಿವೆ. ತುಮಕೂರಿನ ಸದಾಶಿವ ನಗರದಲ್ಲಿ ತಳ್ಳುವಗಾಡಿಯಲ್ಲಿ ತರಕಾರಿ ಮಾರಾಟ ಮಾಡಲು ಹೋದ ಮುಸ್ಲಿಂ ವ್ಯಾಪಾರಿಗಳನ್ನು ನೀವು ರಸ್ತೆಗೆ ಇಳಿಯಬೇಡಿ, ತರಕಾರಿ ಮಾರಾಟ ಮಾಡಬೇಡಿ, ನೀವೇ ಕೊರೋನಾ ಹರಡುತ್ತಿರುವುದು, ನೀವು ಮನೆಬಿಟ್ಟು ಹೊರಬರಬೇಡಿ ಎಂದು ಹಿಂದೂ ಯುವಕರು ಧಮಕಿಹಾಕಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ಮೌನವಾಗಿ ಹಿಂದಿರುಗಿದ್ದಾರೆ. ಇಂತಹ ಅಮಾನವೀಯ ಘಟನೆಗಳಿಂದ ನೊಂದಿರುವ ಸಮುದಾಯ ನೋವನ್ನು ನುಂಗಿಕೊಂಡಿದೆ. ಇದು ಕೆಲ ವಿದ್ಯಾವಂತ ಮುಸ್ಲಿಂ ಸಮುದಾಯ ತಮ್ಮ ನಡುವೆಯೇ ಚರ್ಚೆ ನಡೆಸುತ್ತಿದ್ದು ಶಾಂತಿ, ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮುಂದಾಗಿದೆ.

ಚಿಕ್ಕನಾಯಕನಹಳ್ಳಿ ಕಂದೀಕೆರೆಯಲ್ಲಿ ಮುಸ್ಲಿಂ ಸಮುದಾಯದ ಮನೆಗಳ ಮೇಲೆ ಮೂರುದಿನಗಳ ಹಿಂದೆ ಕಲ್ಲುತೂರಾಟ ನಡೆಸಲಾಗಿದೆ. ಸಂಘಪರಿವಾರ ಪ್ರೇರಿತ ಯುವಕರು ಕಲ್ಲುತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದು, ಮುಸ್ಲಿಮರು ಆತಂಕಗೊಂಡಿದ್ದಾರೆ. ಕಲ್ಲುತೂರಾಟದಿಂದ ಭೀತರಾಗಿರುವ ಮುಸ್ಲಿಂ ಸಮುದಾಯ ಜೀವವನ್ನು ಕೈಯಲ್ಲಿಡಿದು ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಪ್ರಜ್ಞಾವಂತ ಮುಸ್ಲಿಂ ಯುವಕರಿಂದ ನಡೆಯುತ್ತಿದೆ

ಕೊರೊನಾ ಸೋಂಕಿಗೆ ಸಿರಾ ತಾಲೂಕಿನ ವ್ಯಕ್ತಿಯೊಬ್ಬರು ಬಲಿಯಾದ ಮೇಲೆ ಸೂಕ್ಷ್ಮವಾತಾವರಣ ಏರ್ಪಟ್ಟಿದೆ. ಕೆಲ ಯುವಕ ಗುಂಪುಗಳು ಜನರ ನಡುವೆ ದ್ವೇಷ ಮೂಡಿಸುವಂತಹ ಕೆಲಸದಲ್ಲಿ ತೊಡಗಿವೆ. ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಕೆಲಸವನ್ನು ಮಾಡುತ್ತಿವೆ. ಎಪ್ರಿಲ್ 16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಹಾಲು ತರಲು ಹೋಗಿದ್ದಾರೆ. ಹಾಲು ತೆಗೆದುಕೊಳ್ಳುತ್ತಿದ್ದಾಗ ಬ್ರಾಹ್ಮಣ ವ್ಯಕ್ತಿಯೊಬ್ಬರು ನೀವು ಮುಸ್ಲಿಮರು, ಕೊರೊನಾ ಹರಡುತ್ತಿರುವುದು ನಿಮ್ಮಿಂದಲೇ, ನೀವು ಹೀಗೆಲ್ಲ ಬರಬೇಡಿ ಎಂದು ಹೇಳಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಎರಡು ಕೋಮುಗಳ ನಡುವೆ ಜಗಳವಾಗಿದೆ. ಈ ಪ್ರಕರಣ ಪೊಲೀಸ್ ಮೆಟ್ಟಿಲು ಹತ್ತಿದ್ದು ಎಫ್ಐಆರ್ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಕೆಲಸ ಮಾಡಿದ ವ್ಯಕ್ತಿಯನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳು ನಡಯುತ್ತಿವೆ.

ದೇಶದಲ್ಲಿ ನಡೆಯುತ್ತಿರುವ ಇಂತಹ ಬೆಳವಣಿಗೆಗಳಿಂದ ಹಿರಿಯ ಜೀವಗಳು ಬೆಚ್ಚಿಬಿದ್ದಿವೆ. ಸೊಗಡು ಶಿವಣ್ಣರಂಥ ಮಾಜಿ ಸಚಿವರು ಕೂಡ ಮನಸ್ಸಿಗೆ ತೋಚಿದಂತೆ ಮಾತನಾಡುತ್ತಿರುವುದು, ಧರ್ಮ-ಧರ್ಮಗಳ ನಡುವೆ ಸೇಡಿನ ಮನೋಭಾವ, ದ್ವೇಷ ಮೂಡಿಸುವ ಕೆಲಸ ಮಾಡುತ್ತಿರುವುದನ್ನು ನೋಡಿ ದೇಶ ಎತ್ತಸಾಗುತ್ತಿದೆ ಎನ್ನುವಂತಾಗಿದೆ. ಶಾಂತಿ ಕಾಪಾಡಬೇಕಾದ ಜವಾಬ್ದಾರಿಯುತ ವ್ಯಕ್ತಿಗಳೇ ಹೀಗೆ ವರ್ತಿಸಿದರೆ ಹೇಗೆ ಎಂಬ ಪ್ರಶ್ನೆ ಏಳತೊಡಗಿವೆ. ಇದು ಎಲ್ಲಿಗೆ ಹೋಗಿ ತಲುಪುತ್ತೋ ಎಂಬ ಆತಂಕ ವ್ಯಕ್ತವಾಗಿದೆ. ಮನುಕುಲದ ಉದ್ದಾರಕ್ಕೆ ಶ್ರಮಿಸಬೇಕಾದ ವ್ಯಕ್ತಿಗಳು ಸಮಾಜದವನ್ನು ಒಡೆಯುವಂತಹ ಕೆಲಸದಲ್ಲಿ ತೊಡಗಿರುವುದು ನೋವಿನ ಸಂಗತಿ ಎಂದು ಹಿರಿಯ ಜೀವಗಳು ಮರುಗತೊಡಗಿವೆ. ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಜನರ ನೆಮ್ಮದಿಗೆ ಭಂಗ ತರತೊಡಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please do not think in a single angle.try to think in both angle then you will solve the problem .first you should try to educate the Muslim people regarding corona through the news .and create awerness to them.otherwise your news also nothing but all news

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...