Homeಮುಖಪುಟನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

- Advertisement -
- Advertisement -

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳಾದ ರೇವತಿಯವರ ವಿವಾಹವು ಇಂದು ಜರುಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಅಭಿಪ್ರಾಯಗಳು ಕೇಳಿಬಂದಿವೆ. ಒಂದಷ್ಟು ಜನರು ನವ ವಧು-ವರರಿಗೆ ಶುಭ ಹಾರೈಸಿದರೆ ಮತ್ತುಷ್ಟು ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮದುವೆ ಬೇಕಿತ್ತಾ? ಮುಂದೂಡದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಮದುವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದಾರೆ. ಎಲ್ಲಾ ಸಂಪ್ರದಾಯಗಳನ್ನು ಆಚರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಯಾರೂ ಕೂಡ ಮಾಸ್ಕ್‌ ಧರಿಸಿಲ್ಲ. ಎಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ನಮ್ಮ ಎರಡು ಕುಟುಂಬಗಳನ್ನು ಹೊರತುಪಡಿಸಿ ಉಳಿದವರಾರು ಮದುವೆಯಲ್ಲಿ ಯಾವುದೇ ಅತಿಥಿಗಳು ಹಾಜರಾಗಿಲ್ಲ. ರಾಮನಗರದ ಬಳಿಯ ನಮ್ಮ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಿದೆ. ವರ ಮತ್ತು ವಧು ಹೂವಿನ ಹಾರಗಳನ್ನು ಬದಲಿಸಿಕೊಂಡರು. ಉಳಿದಂತೆ ಎಲ್ಲಾ ಸಂಪ್ರದಾಯಗಳನ್ನು ಪಾಲಿಸಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳಲ್ಲಿ ನಿಖಿಲ್‌ ತಾತ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು ಆರ್ಶಿವಾದ ಮಾಡುತ್ತಿರುವ ಚಿತ್ರ, ಅರ್ಚಕ ಇರುವ ಚಿತ್ರಗಳು ಸೇರಿವೆ. ಒಂದೇ ಫೋಟೊದಲ್ಲಿ 8 ಜನರು ಬಹಳ ಹತ್ತಿರದಲ್ಲಿಯೇ ನಿಂತಿರುವುದು ಸಹ ಕಂಡುಬಂದಿದೆ.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಬದಲಾಗಿತ್ತು. ಮದುವೆಯನ್ನು ಮುಂದೂಡುವಂತೆ ಹಲವಾರು ಸಲಹೆಗಳು ಕೇಳಿಬಂದರೂ ಅದಕ್ಕೆ ಎಚ್‌.ಡಿ ಕುಮಾರಸ್ವಾಮಿಯವರು ಒಪ್ಪಿರಲಿಲ್ಲ. ನಿನ್ನೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ ಎಂದಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮದುವೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ. 60-70 ಜನರಷ್ಟೇ ಭಾಗವಹಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಡೆಯೇ ಬೇರೆ, ನುಡಿಯೇ ಬೇರೆ; ನುಡಿದಂತೆ ನಡೆಯಬೇಕಿಲ್ಲ, ಎಂಬ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ದೊಡ್ಡ ಗೌಡರ ಕುಟುಂಬದವರು!?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...