Homeಮುಖಪುಟನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

- Advertisement -
- Advertisement -

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳಾದ ರೇವತಿಯವರ ವಿವಾಹವು ಇಂದು ಜರುಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಅಭಿಪ್ರಾಯಗಳು ಕೇಳಿಬಂದಿವೆ. ಒಂದಷ್ಟು ಜನರು ನವ ವಧು-ವರರಿಗೆ ಶುಭ ಹಾರೈಸಿದರೆ ಮತ್ತುಷ್ಟು ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮದುವೆ ಬೇಕಿತ್ತಾ? ಮುಂದೂಡದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಮದುವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದಾರೆ. ಎಲ್ಲಾ ಸಂಪ್ರದಾಯಗಳನ್ನು ಆಚರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಯಾರೂ ಕೂಡ ಮಾಸ್ಕ್‌ ಧರಿಸಿಲ್ಲ. ಎಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ನಮ್ಮ ಎರಡು ಕುಟುಂಬಗಳನ್ನು ಹೊರತುಪಡಿಸಿ ಉಳಿದವರಾರು ಮದುವೆಯಲ್ಲಿ ಯಾವುದೇ ಅತಿಥಿಗಳು ಹಾಜರಾಗಿಲ್ಲ. ರಾಮನಗರದ ಬಳಿಯ ನಮ್ಮ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಿದೆ. ವರ ಮತ್ತು ವಧು ಹೂವಿನ ಹಾರಗಳನ್ನು ಬದಲಿಸಿಕೊಂಡರು. ಉಳಿದಂತೆ ಎಲ್ಲಾ ಸಂಪ್ರದಾಯಗಳನ್ನು ಪಾಲಿಸಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳಲ್ಲಿ ನಿಖಿಲ್‌ ತಾತ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು ಆರ್ಶಿವಾದ ಮಾಡುತ್ತಿರುವ ಚಿತ್ರ, ಅರ್ಚಕ ಇರುವ ಚಿತ್ರಗಳು ಸೇರಿವೆ. ಒಂದೇ ಫೋಟೊದಲ್ಲಿ 8 ಜನರು ಬಹಳ ಹತ್ತಿರದಲ್ಲಿಯೇ ನಿಂತಿರುವುದು ಸಹ ಕಂಡುಬಂದಿದೆ.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಬದಲಾಗಿತ್ತು. ಮದುವೆಯನ್ನು ಮುಂದೂಡುವಂತೆ ಹಲವಾರು ಸಲಹೆಗಳು ಕೇಳಿಬಂದರೂ ಅದಕ್ಕೆ ಎಚ್‌.ಡಿ ಕುಮಾರಸ್ವಾಮಿಯವರು ಒಪ್ಪಿರಲಿಲ್ಲ. ನಿನ್ನೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ ಎಂದಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮದುವೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ. 60-70 ಜನರಷ್ಟೇ ಭಾಗವಹಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಡೆಯೇ ಬೇರೆ, ನುಡಿಯೇ ಬೇರೆ; ನುಡಿದಂತೆ ನಡೆಯಬೇಕಿಲ್ಲ, ಎಂಬ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ದೊಡ್ಡ ಗೌಡರ ಕುಟುಂಬದವರು!?

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...