Homeಮುಖಪುಟನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

- Advertisement -
- Advertisement -

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳಾದ ರೇವತಿಯವರ ವಿವಾಹವು ಇಂದು ಜರುಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಅಭಿಪ್ರಾಯಗಳು ಕೇಳಿಬಂದಿವೆ. ಒಂದಷ್ಟು ಜನರು ನವ ವಧು-ವರರಿಗೆ ಶುಭ ಹಾರೈಸಿದರೆ ಮತ್ತುಷ್ಟು ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮದುವೆ ಬೇಕಿತ್ತಾ? ಮುಂದೂಡದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಮದುವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದಾರೆ. ಎಲ್ಲಾ ಸಂಪ್ರದಾಯಗಳನ್ನು ಆಚರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಯಾರೂ ಕೂಡ ಮಾಸ್ಕ್‌ ಧರಿಸಿಲ್ಲ. ಎಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ನಮ್ಮ ಎರಡು ಕುಟುಂಬಗಳನ್ನು ಹೊರತುಪಡಿಸಿ ಉಳಿದವರಾರು ಮದುವೆಯಲ್ಲಿ ಯಾವುದೇ ಅತಿಥಿಗಳು ಹಾಜರಾಗಿಲ್ಲ. ರಾಮನಗರದ ಬಳಿಯ ನಮ್ಮ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಿದೆ. ವರ ಮತ್ತು ವಧು ಹೂವಿನ ಹಾರಗಳನ್ನು ಬದಲಿಸಿಕೊಂಡರು. ಉಳಿದಂತೆ ಎಲ್ಲಾ ಸಂಪ್ರದಾಯಗಳನ್ನು ಪಾಲಿಸಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳಲ್ಲಿ ನಿಖಿಲ್‌ ತಾತ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು ಆರ್ಶಿವಾದ ಮಾಡುತ್ತಿರುವ ಚಿತ್ರ, ಅರ್ಚಕ ಇರುವ ಚಿತ್ರಗಳು ಸೇರಿವೆ. ಒಂದೇ ಫೋಟೊದಲ್ಲಿ 8 ಜನರು ಬಹಳ ಹತ್ತಿರದಲ್ಲಿಯೇ ನಿಂತಿರುವುದು ಸಹ ಕಂಡುಬಂದಿದೆ.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಬದಲಾಗಿತ್ತು. ಮದುವೆಯನ್ನು ಮುಂದೂಡುವಂತೆ ಹಲವಾರು ಸಲಹೆಗಳು ಕೇಳಿಬಂದರೂ ಅದಕ್ಕೆ ಎಚ್‌.ಡಿ ಕುಮಾರಸ್ವಾಮಿಯವರು ಒಪ್ಪಿರಲಿಲ್ಲ. ನಿನ್ನೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ ಎಂದಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮದುವೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ. 60-70 ಜನರಷ್ಟೇ ಭಾಗವಹಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಡೆಯೇ ಬೇರೆ, ನುಡಿಯೇ ಬೇರೆ; ನುಡಿದಂತೆ ನಡೆಯಬೇಕಿಲ್ಲ, ಎಂಬ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ದೊಡ್ಡ ಗೌಡರ ಕುಟುಂಬದವರು!?

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...