Homeಮುಖಪುಟನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ

- Advertisement -
- Advertisement -

ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳಾದ ರೇವತಿಯವರ ವಿವಾಹವು ಇಂದು ಜರುಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಅಭಿಪ್ರಾಯಗಳು ಕೇಳಿಬಂದಿವೆ. ಒಂದಷ್ಟು ಜನರು ನವ ವಧು-ವರರಿಗೆ ಶುಭ ಹಾರೈಸಿದರೆ ಮತ್ತುಷ್ಟು ಜನ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮದುವೆ ಬೇಕಿತ್ತಾ? ಮುಂದೂಡದಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇಂದಿನ ಮದುವೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಗುಂಪುಗೂಡಿದ್ದಾರೆ. ಎಲ್ಲಾ ಸಂಪ್ರದಾಯಗಳನ್ನು ಆಚರಿಸುವಾಗ ಸಾಮಾಜಿಕ ಅಂತರವನ್ನು ಪಾಲಿಸಿಲ್ಲ. ಯಾರೂ ಕೂಡ ಮಾಸ್ಕ್‌ ಧರಿಸಿಲ್ಲ. ಎಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ನಮ್ಮ ಎರಡು ಕುಟುಂಬಗಳನ್ನು ಹೊರತುಪಡಿಸಿ ಉಳಿದವರಾರು ಮದುವೆಯಲ್ಲಿ ಯಾವುದೇ ಅತಿಥಿಗಳು ಹಾಜರಾಗಿಲ್ಲ. ರಾಮನಗರದ ಬಳಿಯ ನಮ್ಮ ಸಂಬಂಧಿಕರ ಫಾರ್ಮ್‌ಹೌಸ್‌ನಲ್ಲಿ ವಿವಾಹ ಜರುಗಿದೆ. ವರ ಮತ್ತು ವಧು ಹೂವಿನ ಹಾರಗಳನ್ನು ಬದಲಿಸಿಕೊಂಡರು. ಉಳಿದಂತೆ ಎಲ್ಲಾ ಸಂಪ್ರದಾಯಗಳನ್ನು ಪಾಲಿಸಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳಲ್ಲಿ ನಿಖಿಲ್‌ ತಾತ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರವರು ಆರ್ಶಿವಾದ ಮಾಡುತ್ತಿರುವ ಚಿತ್ರ, ಅರ್ಚಕ ಇರುವ ಚಿತ್ರಗಳು ಸೇರಿವೆ. ಒಂದೇ ಫೋಟೊದಲ್ಲಿ 8 ಜನರು ಬಹಳ ಹತ್ತಿರದಲ್ಲಿಯೇ ನಿಂತಿರುವುದು ಸಹ ಕಂಡುಬಂದಿದೆ.

ಈ ಮೊದಲು ಮದುವೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯನ್ನು ಬೆಂಗಳೂರನ್ನು ರೆಡ್‌ಝೋನ್‌ ಎಂದು ಘೋಷಿಸಿದ್ದರಿಂದ ವಿವಾಹಸ್ಥಳ ರಾಮನಗರಕ್ಕೆ ಬದಲಾಗಿತ್ತು. ಮದುವೆಯನ್ನು ಮುಂದೂಡುವಂತೆ ಹಲವಾರು ಸಲಹೆಗಳು ಕೇಳಿಬಂದರೂ ಅದಕ್ಕೆ ಎಚ್‌.ಡಿ ಕುಮಾರಸ್ವಾಮಿಯವರು ಒಪ್ಪಿರಲಿಲ್ಲ. ನಿನ್ನೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು ದಯವಿಟ್ಟು ಅಭಿಮಾನಿಗಳು ವಿವಾಹ ನಡೆಯುವ ಸ್ಥಳದಿಂದ ದೂರದಲ್ಲಿರಿ. ಪರಿಸ್ಥಿತಿ ತಿಳಿಯಾದ ಬಳಿಕ ದೊಡ್ಡ ಸಮಾರಂಭವನ್ನು ಆಯೋಜಿಸುತ್ತೇವೆ ಎಂದಿದ್ದಾರೆ.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಷ್ಟವಾದ್ದರಿಂದ ಮನೆಯಲ್ಲಿ ಮದುವೆ ಮಾಡದೇ ಫಾರ್ಮ್‌‌ಹೌಸ್‌ನಲ್ಲಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮದುವೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಮದುವೆಯೂ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ವೈದ್ಯರುಗಳ ಜೊತೆಗಿನ ಸಮಾಲೋಚನೆಯೊಂದಿಗೆ ನಡೆಯುತ್ತಿದೆ. 60-70 ಜನರಷ್ಟೇ ಭಾಗವಹಿಸಿದ್ದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

ನಾವು ಅಧಿಕಾರದ ಸ್ಥಾನದಲ್ಲಿರುವವರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಅಧಿಕಾರ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೇವೆ ಎಂಬ ತಪ್ಪು ಸಂದೇಶ ಹೋಗುತ್ತದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪೊಲೀಸರು ಮತ್ತು ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಡೆಯೇ ಬೇರೆ, ನುಡಿಯೇ ಬೇರೆ; ನುಡಿದಂತೆ ನಡೆಯಬೇಕಿಲ್ಲ, ಎಂಬ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ, ದೊಡ್ಡ ಗೌಡರ ಕುಟುಂಬದವರು!?

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...