Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...