Homeಮುಖಪುಟದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

ದೆಹಲಿಯಾದ್ಯಂತ ಬೆಂಕಿಯೇ ಕಾಣುವಾಗ ಇಲ್ಲಿನ ಬಿಜೆಪಿ ಎಲ್ಲಿ?: ಆರ್‌ಎಸ್‌ಎಸ್ ಮುಖಂಡರೊಬ್ಬರ ಆಕ್ರೋಶ

- Advertisement -
- Advertisement -

‘ಇಡೀ ದೆಹಲಿಯಲ್ಲಿ ಬೆಂಕಿಯೇ ಕಾಣುತ್ತಿದೆ. ಶವಗಳನ್ನು ಪಾಳೆ ಹಚ್ಚಿ ಸುಡಲಾಗುತ್ತಿದೆ. ಯಾರಾದರೂ ದಿಲ್ಲಿವಾಲಾ ದೆಹಲಿ ಬಿಜೆಪಿಯವರನ್ನು ಎಲ್ಲಿಯಾದರೂ ಕಂಡಿರಾ?’ ಎಂದು ಆರ್‌ಎಸ್‌ಎಸ್‌ನ ದೆಹಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ರಾಜೀವ್ ಟುಲಿ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇಗವಾಗಿ ಏರುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಆಡಳಿತದ ವಿಫಲತೆಯಿಂದಾಗಿ ದೆಹಲಿಯು ಉಸಿರುಗಟ್ಟುತ್ತಲೇ ಇರುವುದರಿಂದ, ಆರ್‌ಎಸ್‌ಎಸ್ ಕಾರ್ಯಕಾರಿಣಿ ರಾಜೀವ್ ಅವರು ದೆಹಲಿ ಬಿಜೆಪಿಯ ಅನುಪಸ್ಥಿತಿ ಕುರಿತು ಟೀಕೆ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ದೆಹಲಿಯ ಬಿಜೆಪಿ ಎಲ್ಲಿದೆ? ಅಥವಾ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದೆಯೇ ಎಂದು ಆರ್‌ಎಸ್‌ಎಸ್ ದೆಹಲಿ ಘಟಕದ ಮಾಜಿ ಪ್ರಾಂತ್ ಪ್ರಚಾರ್ ಪ್ರಮುಖ್ ರಾಜೀವ್ ಟುಲಿ ಕಿಡಿ ಕಾರಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ರಾಜೀವ್ ಟುಲಿಯವರ ಈ ಟ್ವೀಟ್, ಕೋವಿಡ್ ಎರಡನೇ ಅಲೆ ನಿರ್ವಹಿಸುವುದರಲ್ಲಿ ಸಂಪೂರ್ಣ ವಿಫಲವಾದ ಮೋದಿ ಸರಕಾರದ ಬಗ್ಗೆ ಸಂಘ ಪರಿವಾರದಲ್ಲಿ ಹೆಚ್ಚುತ್ತಿರುವ ಅಸಹನೆ ಮತ್ತು ಅಸಹಾಯಕತೆಯ ಪ್ರತಿಬಿಂಬವಾಗಿದೆ ಎನ್ನಲಾಗಿದೆ.

“ದೆಹಲಿಯಲ್ಲಿಯೂ ಸಹ, ನಾವು ಸಂಘಟನೆಯಾಗಿ ಸಹಾಯ ಮಾಡುವುದು ಕಾಣಿಸುತ್ತಿಲ್ಲ… ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದೆ’ ಎಂದು ದೆಹಲಿಯ ಬಿಜೆಪಿ ಮುಖಂಡರೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲಿ ತಿಳಿಸಿದೆ.

ರಾಜೀವ್ ಅವರ ಟ್ವೀಟ್ ಹೇಳಿಕೆ ಬಗ್ಗೆ ಸಂಘದ ರಾಷ್ಟ್ರೀಯ ಪ್ರಚಾರದ ಉಸ್ತುವಾರಿ ಸುನಿಲ್ ಅಂಬೇಕರ್ ಅವರನ್ನು ಪ್ರಶ್ನಿಸಿದಾಗ, “ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು. ಆದರೆ ಇದು ಸಂಘದ ಅಧಿಕೃತ ಹೇಳಿಕೆ ಅಲ್ಲ” ಎಂದು ತಿಳಿಸಿದರು ಎಂದು ಪಿಟಿಐ ಉಲ್ಲೇಖಿಸಿದೆ.

ಸಂಘ ಮತ್ತು ಅದರ ಅಂಗಸಂಸ್ಥೆ ಸೇವಾ ಭಾರತಿಯವರು ಸಂತ್ರಸ್ತ ಪ್ರದೇಶಗಳಲ್ಲಿ ಕುಟುಂಬಗಳಿಗೆ ಪರಿಹಾರ ಒದಗಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಅಂಬೇಕರ್ ಹೇಳಿದ್ದಾರೆ.

ದೆಹಲಿ ಬಿಜೆಪಿ ಮುಖಂಡರೊಬ್ಬರು, ಬಿಜೆಪಿ ಸಂಸದರು ಮತ್ತು ಅದರ ಯುವ ಕಾರ್ಯಕರ್ತರು ಬಿಡಿಬಿಡಿಯಾಗಿ ಜನರಿಗೆ ಸಹಾಯ ಮಾಡುತ್ತಿದ್ದರೂ, ಒಂದು ಘಟಕವಾಗಿ ಕಾರ್ಯನಿರ್ವಹಿಸಲು ಸಮನ್ವಯತೆ ಇರಬೇಕಿತ್ತು’ ಎಂದಿದ್ದು, ಹಿಂದಿನ ಸಲ ಮೊದಲ ಅಲೆ ಸಂದರ್ಭದಲ್ಲಿ, ಜನರಿಗೆ ಆಹಾರ ಮತ್ತು ಪಡಿತರ ಅಗತ್ಯವಿತ್ತು, ಈ ಸಮಯದಲ್ಲಿ ಆಮ್ಲಜನಕ, ಆಸ್ಪತ್ರೆ ಹಾಸಿಗೆಗಳು ಮತ್ತು ರಿಮೆಡೆಸಿವಿರ್ ಕೊರತೆಯಿದೆ, ಇದನ್ನು ಆಡಳಿತ ಮಾತ್ರ ಪೂರೈಸಬಲ್ಲದು. ಆದ್ದರಿಂದ, ವಿರೋಧ ಪಕ್ಷವು ದೊಡ್ಡ ಸಂಖ್ಯೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ನಿರೀಕ್ಷಿಸುವುದು ತಪ್ಪು ಎಂದಿದ್ದಾರೆ.

ರಾಜೀವ್ ಟುಲಿಯವರ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ ಮತ್ತೊಬ್ಬ ಬಿಜೆಪಿ ನಾಯಕ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ನಮ್ಮ ಪಕ್ಷವು (ಬಿಜೆಪಿ), ಮನೆಯಲ್ಲಿ ಕ್ಯಾರೆಂಟೈನ್ ಮಾಡಲು ಸಾಧ್ಯವಾಗದ ಜನರಿಗೆ ಕಲ್ಯಾಣ ಮಂಟಪಗಳು ಅಥವಾ ಶಾಲೆಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಬಹುದಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಆದರೆ, ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ, ರಾಜೀವ್ ಟುಲಿಯವರ ಟ್ವೀಟ್‌ಗಳ ಬಗ್ಗೆ ಕೇಳಿದಾಗ, ಈ ಟುಲಿ ಎಂಬುವವರು ಯಾರೆಂಬುದೇ ಗೊತ್ತಿಲ್ಲ ಮತ್ತು ಅವರ ಟ್ವೀಟ್‌ಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಟುಲಿಯವರ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು. “ಏಪ್ರಿಲ್ 21 ರಿಂದ ಮೂರು ಸಹಾಯವಾಣಿ ಸಂಖ್ಯೆಗಳು 24*7 ಚಾಲನೆಯಲ್ಲಿವೆ. ಜನರಿಗೆ ವೈದ್ಯಕೀಯ ಸಲಹೆ ಮತ್ತು ಆಹಾರದ ವ್ಯವಸ್ತೆ ಮಾಡಲು ಈ ಸಹಯವಾಣಿ ಆರಂಭಿಸಲಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಕಾಣೆಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...