Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...