Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...