Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...