Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...