Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...