Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...