Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...